Don't Miss!
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- News ಲೋಕಸಭಾ ಚುನಾವಣೆ 2ನೇ ಹಂತದ ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ; ಮನೆ ಮನೆ ಪ್ರಚಾರಕ್ಕೆ ಅವಕಾಶ
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶರಣ್ 'ಅಧ್ಯಕ್ಷ' ಚಿತ್ರದ ವಿಶೇಷಗಳ ಒಂದು ಝಲಕ್
'ಜೈಲಲಿತಾ' ಚಿತ್ರದ ಬಳಿಕ ಹಾಸ್ಯನಟ ಶರಣ್ ಇನ್ನೊಂದು ಚಿತ್ರದ ಮೂಲಕ ಪ್ರೇಕ್ಷಕರಿಗೆ ಕಚಗುಳಿ ಇಡಲು ಬರುತ್ತಿದ್ದಾರೆ. ಈ ಸಲ ಅವರು 'ಅಧ್ಯಕ್ಷ'ರಾಗಿ ರಂಜಿಸಲು ಇದೇ ಶುಕ್ರವಾರದಂದು (ಆ.15) ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ.
'ವಿಕ್ಟರಿ' ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ನಂದಕಿಶೋರ್ ನಿರ್ದೇಶನದ ಚಿತ್ರ ಇದು. ಅರ್ಜುನ್ ಜನ್ಯಾ ಸಂಗೀತದ ಹಾಡುಗಳು ಈಗಾಗಲೆ ಗೀತಪ್ರಿಯರ ಗಮನಸೆಳೆದಿವೆ. ಶರಣ್ ಜೊತೆ ರಕ್ಷಾ ನಾಯಕಿ. ಪಾತ್ರವರ್ಗದಲ್ಲಿ ರವಿಶಂಕರ್, ಮಾಳವಿಕಾ ಅವಿನಾಶ್, ಚಿಕ್ಕಣ್ಣ ಹಾಗೂ ರಮೇಶ್ ಭಟ್ ಸೇರಿದಂತೆ ಮುಂತಾದವರಿದ್ದಾರೆ.
ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ನೀಡಿದೆ. ಅಧ್ಯಕ್ಷ ಚಿತ್ರ ರಾಜ್ಯಾದ್ಯಂತ ಐವತ್ತಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆಕಾಣುತ್ತಿದೆ. ಬಿ.ಕೆ.ಗಂಗಾಧರ್ ಮತ್ತು ಬಿ. ಬಸವರಾಜ್ ನಿರ್ಮಿಸಿರುವ ಚಿತ್ರವಿದು. 'ಅಧ್ಯಕ್ಷ' ಚಿತ್ರದಲ್ಲಿ ಏನಿವೆ ಅಂತಹಾ ವಿಶೇಷಗಳು. ಬನ್ನಿ ನೋಡೋಣ ಚಿತ್ರದ ಝಲಕ್.
ಕೋರ್ಟ್ ಮೆಟ್ಟಿಲೇರಿದ್ದ ಅಧ್ಯಕ್ಷರು
ಈ ಚಿತ್ರದ ಹಾಡೊಂದರಲ್ಲಿ ಶ್ರೀಕೃಷ್ಣನನ್ನು ಅವಹೇಳನ ಮಾಡಲಾಗಿದೆ. ಈ ಮೂಲಕ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಪ್ರಣವಾನಂದಸ್ವಾಮಿ ಎಂಬುವವರು ಆರೋಪಿಸಿ ಕೋರ್ಟ್ ಮೆಟ್ಟಿಲೇರಿದ್ದರು. ಚಿತ್ರದ ಬಿಡುಗಡೆಗೆ ಅವರು ತಡೆಯಾಜ್ಞೆ ನೀಡುವಂತೆ ಕೋರಿದ್ದರು.
ಅಧ್ಯಕ್ಷರ ಬಿಡುಗಡೆಗೆ ಕೋರ್ಟ್ ಗ್ರೀನ್ ಸಿಗ್ನಲ್
ಹಾಗಾಗಿ ಅಧ್ಯಕ್ಷ ಚಿತ್ರ ಬಿಡುಗಡೆಯಾಗುವುದೇ ಅನುಮಾನವಾಗಿತ್ತು. ಇದೀಗ ಆ ಹಾಡಿನ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದುಹಾಕುವುದಾಗಿ ಚಿತ್ರತಂಡ ಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಿದೆ. ಈ ಮೂಲಕ ನಗರ 45ನೇ ಎಸಿಎಂಎಂ ನ್ಯಾಯಾಲಯ ಅಧ್ಯಕ್ಷ ಚಿತ್ರ ಬಿಡುಗಡೆಗೆ ಹಸಿರು ನಿಶಾನೆ ತೋರಿದೆ.
ವಿಚಾರಣೆ ಆ.19ಕ್ಕೆ ಮುಂದೂಡಿಕೆ
ಒಂದು ವೇಳೆ ಪ್ರಮಾಣಪತ್ರದಲ್ಲಿ ತಿಳಿಸಿರುವಂತೆ ಆಕ್ಷೇಪಾರ್ಹ ದೃಶ್ಯಗಳು ತೆಗೆದುಹಾಕದೆ ಇದ್ದರೆ ಚಿತ್ರದ ಪ್ರದರ್ಶನಕ್ಕೆ ತಡೆ ನೀಡುವುದಾಗಿ ಕೋರ್ಟ್ ಎಚ್ಚರಿಸಿದೆ. ಚಿತ್ರವನ್ನು ವೀಕ್ಷಿಸಿ ಆಕ್ಷೇಪಾರ್ಹ ದೃಶ್ಯಗಳಿದ್ದರೆ ನ್ಯಾಯಾಲಯದ ಗಮನಕ್ಕೆ ತರಬೇಕು ಎಂದು ಫಿರ್ಯಾದುದಾರರು ಹಾಗೂ ಅವರ ಪರ ವಕೀಲರಿಗೆ ಕೋರ್ಟ್ ಸೂಚಿಸಿದ್ದು ವಿಚಾರಣೆಯನ್ನು ಆ.19ಕ್ಕೆ ಮುಂದೂಡಿದೆ.
ತಮಿಳು ಬಾಕ್ಸ್ ಆಫೀಸ್ ಚಿಂದಿ ಉಡಾಯಿಸಿದ್ದ ಚಿತ್ರ
ಅಲ್ಲಿಗೆ 'ಅಧ್ಯಕ್ಷ' ಚಿತ್ರದ ವಿವಾದ ಸುಖಾಂತ್ಯ ಕಂಡಿದೆ. ಈ ಚಿತ್ರ ತಮಿಳಿನ ಯಶಸ್ವಿ ಚಿತ್ರ 'ವರುಥಪಡತ ವಾಲಿಬಾರ್ ಸಂಘಂ' ಚಿತ್ರದ ರೀಮೇಕ್. ಹಾಗೆಂದರೆ 'ಚಿಂತೆಯಿಲ್ಲದ ಯುವಕರ ಸಂಘ' ಎಂದರ್ಥ. ಈ ರೊಮ್ಯಾಂಟಿಕ್ ಕಾಮಿಡಿ ಚಿತ್ರ ತಮಿಳಿನ ಬಾಕ್ಸ್ ಆಫೀಸ್ ಚಿಂದಿ ಉಡಾಯಿಸಿತ್ತು.
ಚಿತ್ರ ರು.38 ಕೋಟಿ ಬಾಚಿತ್ತು
ಕಥೆ, ಚಿತ್ರಕಥೆ ಮತ್ತು ನಿರ್ದೇಶನ ಮಾಡಿದ್ದ ಪೊನ್ ರಾಮ್ ಅವರ ಈ ಚಿತ್ರಕ್ಕೆ ಪಿ.ಮಧನ್ ರು.7 ಕೋಟಿ ಬಜೆಟ್ ನಲ್ಲಿ ನಿರ್ಮಿಸಿದ್ದರು. ಬಾಕ್ಸ್ ಆಫೀಸಲ್ಲಿ ಈ ಚಿತ್ರ ರು.38 ಕೋಟಿ ಬಾಚುವ ಮೂಲಕ ಎಲ್ಲರ ಗಮನಸೆಳೆದಿತ್ತು.
ರವಿವರ್ಮಾ ಅವರ ಸಾಹಸ ಚಿತ್ರಕ್ಕಿದೆ
ಮೂಲ ಚಿತ್ರದಲ್ಲಿ ಶಿವಕಾರ್ತಿಕೇಯನ್, ಸತ್ಯರಾಜ್, ಶ್ರೀದಿವ್ಯಾ, ಸೂರಿ ಮುಂತಾದವರಿದ್ದಾರೆ. ಸತ್ಯರಾಜ್ ಪಾತ್ರವನ್ನು ಕನ್ನಡದಲ್ಲಿ ರವಿಶಂಕರ್ ಅವರು ಪೋಷಿಸಿದ್ದು ಚಿತ್ರವನ್ನು ನಿರೀಕ್ಷಿಸುವಂತಾಗಿದೆ. ರವಿವರ್ಮಾ ಅವರ ಸಾಹಸ ಚಿತ್ರಕ್ಕಿದೆ.
ಶೀರ್ಷಿಕೆ ವಿವಾದಕ್ಕೂ 'ಅಧ್ಯಕ್ಷ'ರು ಗುರಿ
ಅಧ್ಯಕ್ಷ ಶೀರ್ಷಿಕೆ ವಿವಾದಕ್ಕೂ ಗುರಿಯಾಗಿದ್ದು ಈಗಾಗಲೆ 'ಅಧ್ಯಕ್ಷರು' ಎಂಬ ಶೀರ್ಷಿಕೆ ಫಿಲಂ ಚೇಂಬರ್ ನಲ್ಲಿ ನೋಂದಾಯಿಸಿಕೊಳ್ಳಲಾಗಿದೆ. ಹಾಗಾಗಿ ಅಧ್ಯಕ್ಷ ಚಿತ್ರದ ಶೀರ್ಷಿಕೆ ಬದಲಾಯಿಸುವಂತೆ 'ಅಧ್ಯಕ್ಷರು' ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ಮುಕ್ತಾರ್ ಆರೋಪಿಸಿದ್ದರು. ಹಾಗಾಗಿ ಈಗ ಚಿತ್ರ ಶರಣ್ 'ಅಧ್ಯಕ್ಷ' ಎಂದು ಬದಲಾಗಿದೆ.
ಚಿತ್ರದಲ್ಲಿ ರೂಪಶ್ರೀ ಸ್ಪೆಷಲ್ ಸಾಂಗ್
ಚಡ್ಡಿದೋಸ್ತ್, ಸಂಕ್ರಾಂತಿ, ಸಿಗರೇಟ್ ಹಾಗೂ ಜಟಾಯು ಚಿತ್ರಗಳಲ್ಲಿ ಅಭಿನಯಿಸಿರುವ ರೂಪಶ್ರೀ ಅವರು ಈ ಚಿತ್ರದ ವಿಶೇಷ ಗೀತೆಯೊಂದರಲ್ಲಿ ಅಭಿನಯಿಸಿದ್ದಾರೆ. ಈ ಹಾಡಿನಲ್ಲಿ ಶರಣ್ ಹಾಗೂ ರವಿಶಂಕರ್ ಅವರು ಹೆಜ್ಜೆ ಹಾಕಿದ್ದಾರೆ.