Don't Miss!
- News
'ಈ ಬಾರಿ ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ' ಕೊಡಿಶ್ರೀಗಳ ರಾಜಕೀಯ ಭವಿಷ್ಯ
- Sports
ಲೂನಾ ಸವಾರಿ ಮಾಡುವುದನ್ನು ನಿಲ್ಲಿಸು ಎಂದು ಚೇತೇಶ್ವರ ಪೂಜಾರಗೆ ಹೇಳಿದ್ದ ರವಿಶಾಸ್ತ್ರಿ
- Automobiles
ವೇಗವಾಗಿ ಮುನ್ನುಗ್ಗುತ್ತಿವೆ ಹೀರೋ, ಹೋಂಡಾ... ಹಿಂದೆಯೇ ಬಂತು ಟಿವಿಎಸ್!
- Technology
ನಿಮ್ಮ ಮೊಬೈಲ್ನಲ್ಲಿ ಹೀಗೆ ಮಾಡಿ, ಸುಲಭವಾಗಿ ತಿಂಗಳ ಆದಾಯ ಗಳಿಸಿ!
- Lifestyle
Horoscope Today 4 Feb 2023: ಶನಿವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Finance
ಅದಾನಿ ಕಳೆದುಕೊಂಡಿದ್ದು ಎಷ್ಟು ಲಕ್ಷ ಕೋಟಿ? ಕುಸಿಯುತ್ತಿವೆ ಷೇರುಗಳು- ಭಾರತದ ಶ್ರೀಮಂತನಿಗೆ ಮಂದೇನು ಕಾದಿದೆ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಬರಪೀಡಿತ ಜನರ ದಾಹ ನೀಗಿಸಲು ಯಶ್ ಕೈ ಹಿಡಿದ 'ಅಕಿರ' ತಂಡ
ರಾಕಿಂಗ್ ಸ್ಟಾರ್ ಯಶ್ ಅವರು ತಮ್ಮ ಯಶೋಮಾರ್ಗ ಫೌಂಡೇಶನ್ ನಿಂದ ಉತ್ತರ ಕರ್ನಾಟಕದ ಹಲವಾರು ಹಳ್ಳಿಗಳಿಗೆ ಕುಡಿಯುವ ನೀರನ್ನು ಒದಗಿಸುತ್ತಿರುವ ಬಗ್ಗೆ ಸ್ಯಾಂಡಲ್ ವುಡ್ ಕ್ಷೇತ್ರದಲ್ಲಿ ಪ್ರಶಂಸೆಯ ಮಾತುಗಳು ಕೇಳಿ ಬರುತ್ತಿವೆ.
ಇದೀಗ ಯಶ್ ಅವರ ಯಶೋಮಾರ್ಗ ಫೌಂಡೇಶನ್ ಜೊತೆಗೆ ಅನೀಶ್ ತೇಜೇಶ್ವರ್ ನಟನೆಯ 'ಅಕಿರ' ಚಿತ್ರತಂಡ ಕೈ ಜೋಡಿಸುತ್ತಿದೆ.[ದಾಹ ತೀರಿಸಿ ಉತ್ತರ ಕರ್ನಾಟಕ ಜನತೆಯ ಹೃದಯ ಗೆದ್ದ ಯಶ್]
ಕೆಲವು ದಿನಗಳ ಹಿಂದೆ ಪುನೀತ್ ರಾಜ್ ಕುಮಾರ್ ಅವರ 'ಚಕ್ರವ್ಯೂಹ' ಚಿತ್ರತಂಡ ಕೂಡ ಬರಪೀಡಿತ ಜನರ ಪರಿಹಾರಕ್ಕೆ ಕೈ ಜೋಡಿಸಿತ್ತು. ಇದೀಗ ಆ ಸಾಲಿಗೆ ಹೊಸ ಸೇರ್ಪಡೆ ಮೇ 6 ರಂದು ತೆರೆಕಂಡ 'ಅಕಿರ' ಚಿತ್ರತಂಡ.[ಬರಪೀಡಿತ ಜನರ ದಾಹ ತೀರಿಸಲು ಮುಂದಾದ 'ಚಕ್ರವ್ಯೂಹ' ಚಿತ್ರತಂಡ]

ಹೌದು ಶುಕ್ರವಾರ, ಮೇ 6 ರಂದು ತೆರೆಕಂಡ ಅನೀಶ್ ತೇಜೇಶ್ವರ ನಟನೆಯ 'ಅಕಿರ' ಚಿತ್ರ ಹೇಳಿಕೊಳ್ಳುವಷ್ಟು ಯಶಸ್ಸು ಕಾಣದಿದ್ದರೂ, ಚಿತ್ರಕ್ಕೆ ಎಲ್ಲೆಡೆ ಅದ್ಭುತ ಓಪನಿಂಗ್ ಸಿಕ್ಕಿತ್ತು, ಆದ್ದರಿಂದ ಬಿಡುಗಡೆಯಾದ ಒಂದು ವಾರದಲ್ಲಿ ಸುಮಾರು 3.25 ಕೋಟಿ ರೂಪಾಯಿಗಳನ್ನು ಸಿನಿಮಾ ಕಲೆಕ್ಷನ್ ಮಾಡಿತ್ತು.['ಅಕಿರ' ವಿಮರ್ಶೆ: ಪ್ರೀತಿ-ಗೀತಿ, ಸೆಂಟಿಮೆಂಟ್ ವಗೈರ ವಗೈರ]
ಇದೀಗ 'ಅಕಿರ' ಮಾಡಿದ ಕಲೆಕ್ಷನ್ ನಲ್ಲಿ ಸುಮಾರು 10 ಲಕ್ಷ ರೂಪಾಯಿಗಳನ್ನು ನಿರ್ಮಾಪಕ ಚೇತನ್ ಅವರು ಯಶೋಮಾರ್ಗ ಫೌಂಡೇಶನ್ ಗೆ ದೇಣಿಗೆಯಾಗಿ ನೀಡಿದ್ದಾರೆ. ಈ ಮೂಲಕ ಉತ್ತರ ಕರ್ನಾಟಕದ ಬರಪೀಡಿತ ಪ್ರದೇಶದ ಮಂದಿಗೆ ನೀರಿನ ಸಮಸ್ಯೆ ನಿವಾರಿಸಲು ಸಣ್ಣದೊಂದು ಸಹಾಯ ಮಾಡಿದ್ದಾರೆ.
ಅಂತೂ ಅಭಿಮಾನಿಗಳು 'ಅಕಿರ' ಚಿತ್ರಕ್ಕೆ ಕೊಟ್ಟ ಯಶಸ್ಸನ್ನು ಅವರಿಗೆ ಮರಳಿಸಿ ನೀಡುವ ಮೂಲಕ ನೀರಿನ ಸಮಸ್ಯೆಗೆ ಕೈಲಾದಷ್ಟು ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.