Don't Miss!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- News Agniveer: 'ಅಗ್ನಿವೀರ್' ಯೋಜನೆಗೆ ಬದಲಾವಣೆ ತರಲು ಕೇಂದ್ರ ಮುಕ್ತ: ರಕ್ಷಣಾ ಸಚಿವ
- Automobiles ಯುಎಸ್ಎ, ಕೆನಡಾಗೂ ಕಾಲಿಟ್ಟ ಭಾರತೀಯ ಬೈಕ್: ಮುಂದುವರೆದ ವಿಶ್ವಗುರು ಭಾರತದ ನಾಗಾಲೋಟ
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬರಪೀಡಿತ ಜನರ ದಾಹ ನೀಗಿಸಲು ಯಶ್ ಕೈ ಹಿಡಿದ 'ಅಕಿರ' ತಂಡ
ರಾಕಿಂಗ್ ಸ್ಟಾರ್ ಯಶ್ ಅವರು ತಮ್ಮ ಯಶೋಮಾರ್ಗ ಫೌಂಡೇಶನ್ ನಿಂದ ಉತ್ತರ ಕರ್ನಾಟಕದ ಹಲವಾರು ಹಳ್ಳಿಗಳಿಗೆ ಕುಡಿಯುವ ನೀರನ್ನು ಒದಗಿಸುತ್ತಿರುವ ಬಗ್ಗೆ ಸ್ಯಾಂಡಲ್ ವುಡ್ ಕ್ಷೇತ್ರದಲ್ಲಿ ಪ್ರಶಂಸೆಯ ಮಾತುಗಳು ಕೇಳಿ ಬರುತ್ತಿವೆ.
ಇದೀಗ ಯಶ್ ಅವರ ಯಶೋಮಾರ್ಗ ಫೌಂಡೇಶನ್ ಜೊತೆಗೆ ಅನೀಶ್ ತೇಜೇಶ್ವರ್ ನಟನೆಯ 'ಅಕಿರ' ಚಿತ್ರತಂಡ ಕೈ ಜೋಡಿಸುತ್ತಿದೆ.[ದಾಹ ತೀರಿಸಿ ಉತ್ತರ ಕರ್ನಾಟಕ ಜನತೆಯ ಹೃದಯ ಗೆದ್ದ ಯಶ್]
ಕೆಲವು ದಿನಗಳ ಹಿಂದೆ ಪುನೀತ್ ರಾಜ್ ಕುಮಾರ್ ಅವರ 'ಚಕ್ರವ್ಯೂಹ' ಚಿತ್ರತಂಡ ಕೂಡ ಬರಪೀಡಿತ ಜನರ ಪರಿಹಾರಕ್ಕೆ ಕೈ ಜೋಡಿಸಿತ್ತು. ಇದೀಗ ಆ ಸಾಲಿಗೆ ಹೊಸ ಸೇರ್ಪಡೆ ಮೇ 6 ರಂದು ತೆರೆಕಂಡ 'ಅಕಿರ' ಚಿತ್ರತಂಡ.[ಬರಪೀಡಿತ ಜನರ ದಾಹ ತೀರಿಸಲು ಮುಂದಾದ 'ಚಕ್ರವ್ಯೂಹ' ಚಿತ್ರತಂಡ]
ಹೌದು ಶುಕ್ರವಾರ, ಮೇ 6 ರಂದು ತೆರೆಕಂಡ ಅನೀಶ್ ತೇಜೇಶ್ವರ ನಟನೆಯ 'ಅಕಿರ' ಚಿತ್ರ ಹೇಳಿಕೊಳ್ಳುವಷ್ಟು ಯಶಸ್ಸು ಕಾಣದಿದ್ದರೂ, ಚಿತ್ರಕ್ಕೆ ಎಲ್ಲೆಡೆ ಅದ್ಭುತ ಓಪನಿಂಗ್ ಸಿಕ್ಕಿತ್ತು, ಆದ್ದರಿಂದ ಬಿಡುಗಡೆಯಾದ ಒಂದು ವಾರದಲ್ಲಿ ಸುಮಾರು 3.25 ಕೋಟಿ ರೂಪಾಯಿಗಳನ್ನು ಸಿನಿಮಾ ಕಲೆಕ್ಷನ್ ಮಾಡಿತ್ತು.['ಅಕಿರ' ವಿಮರ್ಶೆ: ಪ್ರೀತಿ-ಗೀತಿ, ಸೆಂಟಿಮೆಂಟ್ ವಗೈರ ವಗೈರ]
ಇದೀಗ 'ಅಕಿರ' ಮಾಡಿದ ಕಲೆಕ್ಷನ್ ನಲ್ಲಿ ಸುಮಾರು 10 ಲಕ್ಷ ರೂಪಾಯಿಗಳನ್ನು ನಿರ್ಮಾಪಕ ಚೇತನ್ ಅವರು ಯಶೋಮಾರ್ಗ ಫೌಂಡೇಶನ್ ಗೆ ದೇಣಿಗೆಯಾಗಿ ನೀಡಿದ್ದಾರೆ. ಈ ಮೂಲಕ ಉತ್ತರ ಕರ್ನಾಟಕದ ಬರಪೀಡಿತ ಪ್ರದೇಶದ ಮಂದಿಗೆ ನೀರಿನ ಸಮಸ್ಯೆ ನಿವಾರಿಸಲು ಸಣ್ಣದೊಂದು ಸಹಾಯ ಮಾಡಿದ್ದಾರೆ.
ಅಂತೂ ಅಭಿಮಾನಿಗಳು 'ಅಕಿರ' ಚಿತ್ರಕ್ಕೆ ಕೊಟ್ಟ ಯಶಸ್ಸನ್ನು ಅವರಿಗೆ ಮರಳಿಸಿ ನೀಡುವ ಮೂಲಕ ನೀರಿನ ಸಮಸ್ಯೆಗೆ ಕೈಲಾದಷ್ಟು ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.