Don't Miss!
- Sports ರೋಹಿತ್ ಶರ್ಮಾ ಬಳಿಕ ಭಾರತ ತಂಡದ ನಾಯಕನಾರು?; ಅಚ್ಚರಿ ಹೆಸರು ತಿಳಿಸಿದ ಹರ್ಭಜನ್ ಸಿಂಗ್!
- News ಮೋದಿ, ಅಮಿತ್ ಶಾ ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಾರೆ: ಸಿದ್ದರಾಮಯ್ಯ ಗರಂ
- Lifestyle ಚಪಾತಿ, ಅನ್ನಕ್ಕೆ ಟೊಮೆಟೋ ಬೇಳೆ ಸಾರು ಸಖತ್ ರುಚಿ..! ಮಾಡೋದು ಸುಲಭ..!
- Automobiles ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸದ್ಯದಲ್ಲೇ 'ಅಲ್ಲಮ'ನಾಗಿ ತೆರೆಗೆ ಬರಲಿದ್ದಾರೆ ಧನಂಜಯ್
12ನೇ ಶತಮಾನದ ವಚನಕಾರ ಅಲ್ಲಮ ಪ್ರಭು ರವರ ಜೀವನ ಚರಿತ್ರೆ ಆಧಾರಿತ 'ಅಲ್ಲಮ' ಚಿತ್ರ ಸದ್ದಿಲ್ಲದೇ ಶೂಟಿಂಗ್ ಮುಗಿಸಿ, ಸೆನ್ಸಾರ್ ಅಂಗಳದಿಂದ ಪಾಸ್ ಆಗಿದೆ.
ಯಜಮಾನ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಶ್ರೀಹರಿ.ಎಲ್.ಖೋಡೆ ಅವರು ನಿರ್ಮಿಸಿರುವ 'ಅಲ್ಲಮ' ಚಿತ್ರವನ್ನು ವೀಕ್ಷಿಸಿದ ಸೆನ್ಸಾರ್ ಮಂಡಳಿ 'U' ಸರ್ಟಿಫಿಕೇಟ್ ನೀಡಿದೆ. ಸದ್ಯದಲ್ಲೇ ರಾಜ್ಯಾದ್ಯಂತ 'ಅಲ್ಲಮ' ಚಿತ್ರ ಬಿಡುಗಡೆ ಆಗಲಿದೆ.['ಅಲ್ಲಮ'ನಿಗಾಗಿ ಮದ್ದಳೆ ಕಲಿಯಲು ಧನಂಜಯ್ ಕಸರತ್ತು]
ಸದಭಿರುಚಿಯ ಚಿತ್ರಗಳ ನಿರ್ದೇಶಕ ಟಿ.ಎಸ್.ನಾಗಾಭರಣ ಅವರು ಆಕ್ಷನ್ ಕಟ್ ಹೇಳಿರುವ 'ಅಲ್ಲಮ' ಚಿತ್ರದಲ್ಲಿ ಶೀರ್ಷಿಕೆ ಪಾತ್ರ ನಿರ್ವಹಿಸಿರುವುದು ನಟ ಧನಂಜಯ್.
'ಅಲ್ಲಮ' ಪಾತ್ರಕ್ಕೋಸ್ಕರ 18 ತಿಂಗಳುಗಳ ಕಾಲ ಮೃದಂಗ ನುಡಿಸುವುದನ್ನು ಕಲಿತಿದ್ದಾರೆ. ಸಂಗೀತ ಮಾಂತ್ರಿಕ ಬಾಪು ಪದ್ಮನಾಭ ಅವರ ಬಳಿ ನಟ ಧನಂಜಯ್ ಮದ್ದಳೆ ಬಾರಿಸುವುದನ್ನೂ ಕರಗತ ಮಾಡಿಕೊಂಡಿದ್ದಾರೆ. ನೃತ್ಯ ಸಂಯೋಜಕರಾದ ಮದನ್-ಹರಿಣಿ ಕೊರಿಯೋಗ್ರಫಿಯಲ್ಲಿ ಧನಂಜಯ್ ಮದ್ದಳೆ ಹಿಡಿದು ಅದ್ಭುತವಾಗಿ ನೃತ್ಯ ಮಾಡಿದ್ದಾರೆ.[ಚಿತ್ರಗಳು: 'ಅಲ್ಲಮ'ನಿಗೆ ಪರಕಾಯ ಪ್ರವೇಶ ಮಾಡಿದ ಧನಂಜಯ್]
ನಾಯಕಿ ಪಾತ್ರದಲ್ಲಿ ನಟಿ ಮೇಘನಾ ರಾಜ್ ಕಾಣಿಸಿಕೊಂಡಿದ್ದಾರೆ. ಸುಮಾರು ನಾಲ್ಕು ವರ್ಷಗಳ ಹಿಂದೆ ಸೆಟ್ಟೇರಿದ್ದ 'ಅಲ್ಲಮ' ಚಿತ್ರ ಕೊನೆಗೂ ಬಿಡುಗಡೆ ಹಂತಕ್ಕೆ ಬಂದಿದೆ. ಥಿಯೇಟರ್ ಸಿಕ್ಕ ಕೂಡಲೆ 'ಅಲ್ಲಮ' ಚಿತ್ರ ತೆರೆಗೆ ಬರಲಿದೆ.