Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಬ್ಯೂಟಿಫುಲ್ ಮನಸುಗಳ' ಚಾಯ್ ಪೇ ಚರ್ಚಾ
ನಿರ್ದೇಶಕ ಪವನ್ ಕುಮಾರ್ ಅವರ 'ಲೂಸಿಯಾ' ['ಲೂಸಿಯಾ' ಚಿತ್ರ ವಿಮರ್ಶೆ : ಸಾಧಾರಣ ಪ್ರೇಕ್ಷಕರಿಗಲ್ಲ] ಸಿನಿಮಾದಲ್ಲಿ ಒಂದಾಗಿದ್ದ ನಟಿ ಶ್ರುತಿ ಹರಿಹರನ್ ಮತ್ತು ನಟ ನಿನಾಸಂ ಸತೀಶ್ ಅವರು ಮತ್ತೆ 'ಬ್ಯೂಟಿಫುಲ್ ಮನಸುಗಳು' ಚಿತ್ರದ ಮೂಲಕ ಒಂದಾಗಿದ್ದಾರೆ. ಚಿತ್ರಕ್ಕೆ 'ಬುಲೆಟ್ ಬಸ್ಯಾ' ಖ್ಯಾತಿಯ ನಿರ್ದೇಶಕ ಜಯತೀರ್ಥ ಅವರು ಆಕ್ಷನ್-ಕಟ್ ಹೇಳುತ್ತಿದ್ದಾರೆ.
ಅಂದಹಾಗೆ ಚಿತ್ರೀಕರಣದ ಜೊತೆ-ಜೊತೆಗೆ ಥೀಮ್ ಫೋಟೋ ಶೂಟ್ ಮಾಡಿ ಮುಗಿಸಿರುವ ಚಿತ್ರತಂಡ ಐದು ಎಳೆಗಳಿರುವ ಕಥೆಯನ್ನು ಈ ಚಿತ್ರದಲ್ಲಿ ಹೆಣೆಯುತ್ತಿದ್ದಾರೆ.
ಈಗಾಗಲೇ ನಡೆಸಿರುವ ಫೋಟೋ ಶೂಟ್ ಐದು ಎಳೆಯ ಕಥೆಗೆ ಹೊಂದಾಣಿಕೆಯಾಗುತ್ತಿದ್ದು, ಮೊದಲನೇ ಕಥೆ ಬೋಟಿ ಮತ್ತು ಟೀ. ಅಂದರೆ ನಾಯಕ ಬಾರ್ ಮಾಲೀಕನ ಮಗ, ಅವನು ದೇವಸ್ಥಾನದಲ್ಲಿ ಪೂಜಾರಿಯಾಗಿರುವವರ ಮಗಳನ್ನು ಭೇಟಿ ಮಾಡುತ್ತಾನೆ.
ಅವರ ಪ್ರೀತಿ ಎಷ್ಟು ಸರಳವಾಗಿರುತ್ತದೆ ಎಂದರೆ, ಅವರ ಮೊದಲ ರೋಮ್ಯಾಂಟಿಕ್ ಮಾತುಕತೆ ನಡೆಯುವುದೆಲ್ಲವೂ ಟೀ ಕುಡಿಯುವಾಗ ಅದನ್ನು ಈ ಚಿತ್ರದಲ್ಲಿ ಸೆರೆಹಿಡಿಯಲಾಗಿದೆ' ಎನ್ನುತ್ತಾರೆ ನಿರ್ದೇಶಕ ಜಯತೀರ್ಥ.[ಪಾಕ್ ನಲ್ಲಿ ಪ್ರದರ್ಶನಗೊಂಡ ಮೊದಲ ಕನ್ನಡ ಚಿತ್ರ]
ಎರಡನೇ ಹಂತದ ಚಿತ್ರೀಕರಣ ಏಪ್ರಿಲ್ 21 ರಿಂದ ಆರಂಭವಾಗಲಿದ್ದು, ಚಿತ್ರಕ್ಕೆ ಸಂಗೀತ ನಿರ್ದೇಶಕ ಬಿಜೆ ಭರತ್ ಅವರು ಮ್ಯೂಸಿಕ್ ಕಂಪೋಸ್ ಮಾಡುತ್ತಿದ್ದಾರೆ. ಕಿರಣ್ ಹಂಪಾಪುರ ಅವರು ಕ್ಯಾಮರಾ ಕೈ ಚಳಕ ತೋರಿದ್ದು, ಮೇ ತಿಂಗಳ ಅಂತ್ಯಕ್ಕೆ ಚಿತ್ರೀಕರಣ ಮುಗಿಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.