'ರೈತ, ಯೋಧ, ವಿದ್ಯಾರ್ಥಿ'ಯಿಂದ 'ಧೈರ್ಯಂ' ಆಡಿಯೋ ಬಿಡುಗಡೆ

By Bharath Kumar

ಕೃಷ್ಣ ಅಜಯ್ ರಾವ್ ನಟನೆಯ 'ಧೈರ್ಯಂ' ಸಿನಿಮಾದ ಆಡಿಯೋ ಇಂದು (ಮೇ 27) ಬಿಡುಗಡೆಯಾಗಿದೆ. ಸಮಾಜದ ಮೂರು ಜನ ವಿಶೇಷ ವ್ಯಕ್ತಿಗಳು ಚಿತ್ರದ ಧ್ವನಿಸುರಳಿ ಬಿಡುಗಡೆ ಮಾಡಿದ್ದು, ತುಂಬಾ ವಿಶೇಷವಾಗಿತ್ತು.[ವಿಧಾನಸೌಧ ಮುಂದೆ 'ಧೈರ್ಯಂ' ಆಡಿಯೋ ಬಿಡುಗಡೆ ಮಾಡುವವರು ಯಾರು.?]

ವಿಧಾನ ಸೌಧ ಮುಂದೆ 'ರೈತ, ಯೋಧ ಹಾಗೂ ವಿದ್ಯಾರ್ಥಿ'ಯಿಂದ 'ಧೈರ್ಯಂ' ಚಿತ್ರದ ಆಡಿಯೋ ಅನಾವರಣ ಆಯಿತು. ಯೋಧ ಗುರುಪ್ರಸಾದ್, ರೈತ ಗೋಪಾಲ್ ಗೌಡ, ವಿದ್ಯಾರ್ಥಿ ಲಿಖಿತ್ ರಾಜ್ ಮೂವರು 'ಧೈರ್ಯಂ' ಆಡಿಯೋವನ್ನ ರಿಲೀಸ್ ಮಾಡಿದರು. ಈ ವೇಳೆ ಚಿತ್ರದ ನಾಯಕಿ ಅಧಿತಿ ಮತ್ತು ನಟ ಅಜಯ್ ರಾವ್ ಸೇರಿದಂತೆ ಚಿತ್ರತಂಡ ಭಾಗಿಯಾಗಿತ್ತು.[ವಿಧಾನ ಸೌಧ ಮುಂದೆ ನಾಳೆ 'ಧೈರ್ಯಂ' ಹಾಡುಗಳ ಅದ್ಧೂರಿ ಅನಾವರಣ]

Kannada Movie Dhairyam Audio Released

ಚಿತ್ರದಲ್ಲಿ ಒಟ್ಟು ನಾಲ್ಕು ಹಾಡುಗಳಿದ್ದು ''ಜಿಂಕೆಮರಿ' ಖ್ಯಾತಿಯ ಎಮಿಲ್ ಸಂಗೀತ ನೀಡಿದ್ದಾರೆ. ವಿಜಯ ಪ್ರಕಾಶ್ ಒಂದು ಹಾಡನ್ನ ಹಾಡಿರುವುದು ಮತ್ತೊಂದು ವಿಶೇಷ. ಆನಂದ್ ರಾಮ್ ಮತ್ತು ಶಿವತೇಜಸ್ ಸಾಹಿತ್ಯ ಬರೆದಿದ್ದಾರೆ.[ಆಡಿಯೋ ಬಿಡುಗಡೆ ಸಜ್ಜಾದ ಅಜಯ್ ರಾವ್ 'ಧೈರ್ಯಂ']

Kannada Movie Dhairyam Audio Released

'ಮಳೆ' ಸಿನಿಮಾವನ್ನ ನಿರ್ದೇಶನ ಮಾಡಿದ್ದ ಶಿವ ತೇಜಸ್ 'ಧೈರ್ಯಂ' ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಡಿ.ಕೆ ರಾಜು ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಫ್ಯಾಮಿಲಿ ಡ್ರಾಮಾದ ಜೊತೆಗೆ ಲವ್, ಆಕ್ಷನ್, ಸೆಂಟಿಮೆಂಟ್ ಹೀಗೆ ಎಲ್ಲ ರೀತಿಯ ಕಮರ್ಷಿಯಲ್ ಅಂಶಗಳು ಚಿತ್ರದಲ್ಲಿದೆಯಂತೆ.

More from Filmibeat

English summary
Ajay rao starrer kannada Movie 'Dhairyam' Audio Released Today (May 27th) at Vidhana Soudha.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X