Don't Miss!
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- News karnataka Rain: ಬೆಂಗಳೂರಿನಲ್ಲಿ ಏ.23ರವರೆಗೆ ಮಳೆ- ಬೆಳಗಾವಿ ಮಂದಿಗೆ ಕುಂದಾ ಕೊಟ್ಟ ವರುಣ ಧಾರವಾಡ ಮಂದಿಗಿಂದು ಪೇಡಾ ಕೊಡ್ತಾನಾ?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾಳೆ ತೆರೆಗೆ ಅಪ್ಪಳಿಸಲಿದೆ 'ಗೂಳಿಹಟ್ಟಿ' ಚಿತ್ರ
ಗಾಂಧಿನಗರದಲ್ಲಿ ಹೊಸಬರ ಚಿತ್ರ ಹೆಚ್ಚು ಕಾಲ ಉಳಿಯೋದು ಕಷ್ಟ. ಆದ್ರೆ ಕೆಲವೊಂದು ಚಿತ್ರಗಳು ಕ್ಲಿಕ್ ಆಗಿರುವ ಉದಾಹರಣೆ ಇದೆ. ಈಗ ಇನ್ನೊಂದು ಹೊಸಬರ ಚಿತ್ರ ತೆರೆ ಕಾಣೋದಕ್ಕೆ ರೆಡಿ ಆಗಿದೆ. ಆ ಚಿತ್ರವೇ 'ಗೂಳಿಹಟ್ಟಿ'.
ಶಶಾಂಕ್ ರಾಜ್ ನಿರ್ದೇಶನದಲ್ಲಿ ಇದೇ ವಾರ ತೆರೆಗೆ ಬರಲು ಸಿದ್ದವಾಗಿರುವ 'ಗೂಳಿಹಟ್ಟಿ' ಪವರ್ ಫುಲ್ ಶೀರ್ಷಿಕೆ ಇರುವ ಮಾಸ್ ಚಿತ್ರ. ಒಂದೂವರೆ ವರ್ಷಗಳ ಹಿಂದೆ ಲಾಂಚ್ ಆಗಿದ್ದ ಈ ಚಿತ್ರ, ಶೂಟಿಂಗ್ ಮುಗಿಸಿ ಇದೀಗ ತೆರೆ ಮೇಲೆ ಬರುತ್ತಿದೆ.
ಚಿತ್ರದುರ್ಗ ಜಿಲ್ಲೆಯ ಸಣ್ಣ ಊರು 'ಗೂಳಿಹಟ್ಟಿ'. ಅಲ್ಲಿಂದ ಬೆಂಗಳೂರಿಗೆ ಬರುವ ಚಿತ್ರದ ನಾಯಕ ಮತ್ತು ಕರ್ನಾಟಕದ ಇತರೆ ಕಡೆಗಳಿಂದ ಬಂದಿರುವ ನಾಲ್ಕು ಜನ ಗೆಳೆಯರ ಮಧ್ಯೆ ನಡೆಯುವ ಕಥೆ 'ಗೂಳಿಹಟ್ಟಿ'. ಹಳ್ಳಿಯಿಂದ ಪಟ್ಟಣಕ್ಕೆ ಬಂದು ಸೇರುವ ಹುಡುಗರ ವ್ಯಥೆಯೇ ಚಿತ್ರದ ಕಥೆ.
ಈ ಚಿತ್ರದ ವಿಶೇಷ ಏನಪ್ಪಾ ಅಂದ್ರೆ, ಕರ್ನಾಟಕದ ಇತಿಹಾಸದಲ್ಲಿ ಬಹಳ ಪ್ರಸಿದ್ಧಿ ಪಡೆದುಕೊಂಡಿರುವ ಬಳ್ಳಾರಿಯ ಶ್ರೀ ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ ಸುಮಾರು 20 ಲಕ್ಷ ಭಕ್ತಾದಿಗಳ ಸಮ್ಮುಖದಲ್ಲಿ 'ಗೂಳಿಹಟ್ಟಿ'ಯ ಪ್ರಮುಖ ಸನ್ನಿವೇಶ ಚಿತ್ರೀಕರಿಸಲಾಗಿದೆ.
ಚಿತ್ರದ ನಾಯಕನ ಪಾತ್ರದಲ್ಲಿ ಪವನ್ ಸೂರ್ಯ ಮಿಂಚಿದ್ದಾರೆ. ಇವರಿಗೆ ನಾಯಕಿಯಾಗಿ ತೇಜಸ್ವಿನಿ ಬಣ್ಣ ಹಚ್ಚಿದ್ದಾರೆ. ತಾರಾಗಣದಲ್ಲಿ ದೊಡ್ಡಣ್ಣ, ಆದಿ ಲೋಕೇಶ್, ಸುಧಾ ಬೆಳವಾಡಿ, ರಂಗಾಯಣ ರಘು, ಅವಿನಾಶ್, ಶರತ್ ಲೋಹಿತಾಶ್ವ ಮುಂತಾದವರು ಕಾಣಿಸಿಕೊಂಡಿರುವ ಈ ಚಿತ್ರ ನಾಳೆ ತೆರೆಗೆ ಅಪ್ಪಳಿಸುತ್ತಿದೆ. ವೀಕೆಂಡ್ ನಲ್ಲಿ ನೀವು ಫ್ರೀ ಇದ್ರೆ ಒಮ್ಮೆ 'ಗೂಳಿಹಟ್ಟಿ'ಗೆ ವಿಸಿಟ್ ಹಾಕಿ.