Don't Miss!
- News Asianet Digital Network Survey: ಮತ್ತೊಮ್ಮೆ ಮೋದಿಗೆ ಜೈ ಎಂದ ಮತದಾರರು!
- Technology ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- Finance ಜಗತ್ತಿನಾದ್ಯಂತ 6,000 ಉದ್ಯೋಗಿಗಳನ್ನು ವಜಾ ಮಾಡಿದ ಡೆಲ್
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Sports IPL 2024 RR vs DC: ರಾಯಲ್ಸ್ ವಿರುದ್ಧ ಗೆಲುವಿನೊಂದಿಗೆ ಪುಟಿದೇಳುವುದೇ ಕ್ಯಾಪಿಟಲ್ಸ್?; ಸಂಭಾವ್ಯ ಆಡುವ 11ರ ಬಳಗ
- Lifestyle ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಹಗ್ಗದ ಕೊನೆ' ಹಿಡಿದು ಬರುತ್ತಿದ್ದಾರೆ ನವೀನ್ ಕೃಷ್ಣ
ಈ ವರ್ಷದ ಕೊನೆಗೆ ಬರುತ್ತಿರುವ ಬಹುನಿರೀಕ್ಷಿತ ಚಿತ್ರ 'ಹಗ್ಗದ ಕೊನೆ'. ಈ ಚಿತ್ರ ಈಗಾಗಲೆ ಎರಡು ಅಂತರಾಷ್ಟ್ರೀಯ ಚಲನಚಿತ್ರೋತ್ಸವಗಳಿಗೆ ಆಯ್ಕೆಯಾಗಿದೆ. ಈ ಸಿನಿಮಾ ಆಸ್ಕರ್ ಪ್ರಶಸ್ತಿಗೂ ಹೋಗಬಹುದು ಎಂದು ಫಿಲ್ಮಿಬೀಟ್ ಜೊತೆಗೆ ಮಾತನಾಡುತ್ತಾ ಹೇಳಿದ್ದರು ನವೀನ್ ಕೃಷ್ಣ.
'ಹಗ್ಗದ ಕೊನೆ' - 1962 ರಲ್ಲಿ ನಾಟಕಕಾರ ಪರ್ವತವಾಣಿ ಅವರು ರಚಿಸಿದ ಕಿರು ನಾಟಕದ ಆಧಾರಿತ ಚಿತ್ರ. ದಯಾಳ್ ಪದ್ಮನಾಭನ್ ಅವರು ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿದ್ದಾರೆ. ನಾಯಕ ನವೀನ್ ಕೃಷ್ಣ ಅವರು ಸಂಭಾಷಣೆ ಬರೆದಿದ್ದಾರೆ. [ನವೀನ್ ಕೃಷ್ಣ ಸಂದರ್ಶನ]
ಈ ಚಿತ್ರದ ಬಗ್ಗೆ ಫಿಲ್ಮಿಬೀಟ್ ಸಂದರ್ಶನದಲ್ಲಿ ಮಾತನಾಡಿರುವ ನವೀನ್ ಕೃಷ್ಣ ಅವರು, "ಹಗ್ಗದ ಕೊನೆ ಸಂಪೂರ್ಣ ಕಲಾತ್ಮಕ ಚಿತ್ರ ಅಂತ ಹೇಳುವುದು ಕಷ್ಟ. ಆದ್ರೆ, ಸಿನಿಮಾದಲ್ಲಿ ಕಮರ್ಶಿಯಲ್ ಅಂಶಗಳೂ ಇಲ್ಲ. ಇದು ಒಂದು ರೀತಿಯ ಬ್ರಿಡ್ಜ್ ಸಿನಿಮಾ. ಇದರಲ್ಲಿ ಮರಣದಂಡನೆಗೆ ಒಳಗಾಗಿರುವ ಅಪರಾಧಿ. ಅವನ ಮನಸ್ಸಲ್ಲಿ ಮೂಡುವ ಪ್ರಶ್ನೆಗಳನ್ನ ಇಟ್ಟುಕೊಂಡು ಚಿತ್ರಕಥೆ ರಚಿಸಲಾಗಿದೆ. ಮರಣದಂಡನೆ ಅಂದ್ರೆ ಹ್ಯಾಂಗ್ ಟಿಲ್ ಡೆತ್. ಅದು ಒಂಥರಾ Organized Killing. ''ನಾನು ಮಾಡಿರುವ ಕೊಲೆಗೂ ನೀವು ಮಾಡುತ್ತಿರುವುದಕ್ಕೂ ವ್ಯತ್ಯಾಸವೇನು'', ಅಂತ ಪ್ರಶ್ನೆಗಳನ್ನು ಮಾಡುವ ಅಪರಾಧಿ 'ಚೆನ್ನ'. ಜೈಲಿನ ಅಧಿಕಾರಿ ಮತ್ತು ಅಪರಾಧಿ ನಡುವೆ ನಡೆಯುವ ವಾಗ್ವಾದವೇ ಚಿತ್ರದ ಕಥೆ" ಎಂದಿದ್ದಾರೆ. [ಸ್ಯಾಂಡಲ್ ವುಡ್ ಮಹಾಚುನಾವಣೆ 2014 - ನಿಮ್ಮ ಮತ ಯಾರಿಗೆ?]
ಉಮೇಶ್ ಬಣಕರ್ ಮತ್ತು ದಯಾಳ್ ಪದ್ಮನಾಭನ್ ಅವರು ನಿರ್ಮಾಪಕರು. ಛಾಯಾಗ್ರಹಣ ಪಾಂಡಿಕುಮಾರ್ ಎಸ್, ಸಂಗೀತ ಗೌತಮ್ ಶ್ರೀವತ್ಸವ್, ಸಂಕಲನ ರಘುನಾಥ್, ಕಲೆ ಮೋಹನ್ ಬಿ ಕೆರೆ ಅವರದು. ಸುಚೇಂದ್ರ ಪ್ರಸಾದ್, ಮೋಹನ್, ಶ್ರೀನಿವಾಸಮೂರ್ತಿ, ದತ್ತಣ್ಣ, ಸಿಹಿಕಹಿ ಗೀತಾ, ವಿ ಮನೋಹರ್ ಹಾಗೂ ಇತರರು ತಾರಗಣದಲ್ಲಿದ್ದಾರೆ. (ಫಿಲ್ಮಿಬೀಟ್ ಕನ್ನಡ)