Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜನವರಿ 26 ರಂದು 'ಅಲ್ಲಮ' ತೆರೆಗೆ!
12ನೇ ಶತಮಾನದ ವಚನಕಾರ ಅಲ್ಲಮ ಪ್ರಭು ರವರ ಜೀವನ ಚರಿತ್ರೆ ಆಧಾರಿತ 'ಅಲ್ಲಮ' ರಿಲೀಸ್ ಗೆ ರೆಡಿಯಾಗಿದ್ದು, ಇದೇ ಇದೇ ತಿಂಗಳ 26ರಂದು ಚಿತ್ರಮಂದಿರಕ್ಕೆ ಬರಲಿದೆ.
ಯಜಮಾನ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಶ್ರೀಹರಿ.ಎಲ್.ಖೋಡೆ ಅವರು ನಿರ್ಮಿಸಿರುವ 'ಅಲ್ಲಮ', ಅಲ್ಲಮ ಪ್ರಭುವಿನ ಬದುಕು-ವಚನಗಳ ಕುರಿತಾಗಿದೆ. ಈಗಾಗಲೇ ಸೆನ್ಸಾರ್ ಮಂಡಳಿ ಚಿತ್ರವನ್ನ ವೀಕ್ಷಿಸಿದ್ದು, ಮೆಚ್ಚುಗೆ ವ್ಯಕ್ತಪಡಿಸಿದಲ್ಲದೇ, 'ಯು' ಪ್ರಮಾಣ ಪತ್ರವನ್ನ ನೀಡಿದೆ.[47ನೇ ಗೋವಾ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಕನ್ನಡದ 3 ಚಿತ್ರಗಳು]
ಸದಭಿರುಚಿಯ ಚಿತ್ರಗಳ ನಿರ್ದೇಶಕ ಟಿ.ಎಸ್.ನಾಗಾಭರಣ ಅವರು ಆಕ್ಷನ್ ಕಟ್ ಹೇಳಿರುವ 'ಅಲ್ಲಮ' ಚಿತ್ರದಲ್ಲಿ ಶೀರ್ಷಿಕೆ ಪಾತ್ರ ನಿರ್ವಹಿಸಿರುವುದು ನಟ ಧನಂಜಯ್.[ಚಿತ್ರಗಳು: 'ಅಲ್ಲಮ'ನಿಗೆ ಪರಕಾಯ ಪ್ರವೇಶ ಮಾಡಿದ ಧನಂಜಯ್]
'ಅಲ್ಲಮ' ಪಾತ್ರಕ್ಕೋಸ್ಕರ 18 ತಿಂಗಳುಗಳ ಕಾಲ ಮೃದಂಗ ನುಡಿಸುವುದನ್ನು ಕಲಿತಿದ್ದಾರೆ. ಸಂಗೀತ ಮಾಂತ್ರಿಕ ಬಾಪು ಪದ್ಮನಾಭ ಅವರ ಬಳಿ ನಟ ಧನಂಜಯ್ ಮದ್ದಳೆ ಬಾರಿಸುವುದನ್ನೂ ಕರಗತ ಮಾಡಿಕೊಂಡಿದ್ದಾರೆ. ನೃತ್ಯ ಸಂಯೋಜಕರಾದ ಮದನ್-ಹರಿಣಿ ಕೊರಿಯೋಗ್ರಫಿಯಲ್ಲಿ ಧನಂಜಯ್ ಮದ್ದಳೆ ಹಿಡಿದು ಅದ್ಭುತವಾಗಿ ನೃತ್ಯ ಮಾಡಿದ್ದಾರೆ.['ಅಲ್ಲಮ'ನಿಗಾಗಿ ಮದ್ದಳೆ ಕಲಿಯಲು ಧನಂಜಯ್ ಕಸರತ್ತು]
ನಾಯಕಿ ಪಾತ್ರದಲ್ಲಿ ನಟಿ ಮೇಘನಾ ರಾಜ್ ಕಾಣಿಸಿಕೊಂಡಿದ್ದಾರೆ. ಸುಮಾರು ನಾಲ್ಕು ವರ್ಷಗಳ ಹಿಂದೆ ಸೆಟ್ಟೇರಿದ್ದ 'ಅಲ್ಲಮ' ಚಿತ್ರ ಕೊನೆಗೂ ಬಿಡುಗಡೆ ಆಗುತ್ತಿದೆ. ಇದೇ ತಿಂಗಳ 26ರಂದು ರಾಜ್ಯಾದ್ಯಂತ 'ಅಲ್ಲಮ' ಚಿತ್ರ ತೆರೆಗೆ ಬರಲಿದೆ.