Don't Miss!
- News
ಆರ್ಥಿಕ ಸಂಕಷ್ಟದ ನಡುವೆಯೇ ಪಾಕಿಸ್ತಾನದಲ್ಲಿ ಮತ್ತೊಂದು ದುರಂತ: ಮಸೀದಿಯಲ್ಲಿ ಆತ್ಮಹುತಿ ದಾಳಿ- 46 ಸಾವು, 150 ಮಂದಿಗೆ ಗಾಯ
- Sports
IND W vs WI W: ಭಾರತದ ಉತ್ತಮ ಆಲ್ರೌಂಡ್ ಪ್ರದರ್ಶನ: ವೆಸ್ಟ್ ಇಂಡೀಸ್ ವಿರುದ್ಧ 8 ವಿಕೆಟ್ಗಳ ಭರ್ಜರಿ ಜಯ
- Lifestyle
ಜನವರಿ 30ಕ್ಕೆ ಶನಿ ಅಸ್ತ: 35 ದಿನದವರೆಗೆ ಈ 6 ರಾಶಿಯವರು ಹೆಚ್ಚು ಜಾಗ್ರತೆವಹಿಸಬೇಕು
- Finance
ಫೆಬ್ರವರಿ 1ರಿಂದ ಯಾವೆಲ್ಲ ಹಣಕಾಸು ನಿಯಮ ಬದಲಾವಣೆಯಾಗಲಿದೆ?
- Technology
ವಿದ್ಯಾರ್ಥಿಗಳೇ ಇಲ್ಲಿ ಗಮನಿಸಿ, ನೀವು Rank ಪಡೆಯಲು ಈ ಆಪ್ಗಳನ್ನು ಬಳಕೆ ಮಾಡಿ!
- Automobiles
ಭಾರತದಲ್ಲಿ ಅಬ್ಬರಿಸಲು ಬಿಡುಗಡೆಯಾಯ್ತು ಹೀರೋ Xoom 110 ಸ್ಕೂಟರ್: ಬೆಲೆ ರೂ.68,599...!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಜನವರಿ 26 ರಂದು 'ಅಲ್ಲಮ' ತೆರೆಗೆ!
12ನೇ ಶತಮಾನದ ವಚನಕಾರ ಅಲ್ಲಮ ಪ್ರಭು ರವರ ಜೀವನ ಚರಿತ್ರೆ ಆಧಾರಿತ 'ಅಲ್ಲಮ' ರಿಲೀಸ್ ಗೆ ರೆಡಿಯಾಗಿದ್ದು, ಇದೇ ಇದೇ ತಿಂಗಳ 26ರಂದು ಚಿತ್ರಮಂದಿರಕ್ಕೆ ಬರಲಿದೆ.
ಯಜಮಾನ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಶ್ರೀಹರಿ.ಎಲ್.ಖೋಡೆ ಅವರು ನಿರ್ಮಿಸಿರುವ 'ಅಲ್ಲಮ', ಅಲ್ಲಮ ಪ್ರಭುವಿನ ಬದುಕು-ವಚನಗಳ ಕುರಿತಾಗಿದೆ. ಈಗಾಗಲೇ ಸೆನ್ಸಾರ್ ಮಂಡಳಿ ಚಿತ್ರವನ್ನ ವೀಕ್ಷಿಸಿದ್ದು, ಮೆಚ್ಚುಗೆ ವ್ಯಕ್ತಪಡಿಸಿದಲ್ಲದೇ, 'ಯು' ಪ್ರಮಾಣ ಪತ್ರವನ್ನ ನೀಡಿದೆ.[47ನೇ ಗೋವಾ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಕನ್ನಡದ 3 ಚಿತ್ರಗಳು]
ಸದಭಿರುಚಿಯ ಚಿತ್ರಗಳ ನಿರ್ದೇಶಕ ಟಿ.ಎಸ್.ನಾಗಾಭರಣ ಅವರು ಆಕ್ಷನ್ ಕಟ್ ಹೇಳಿರುವ 'ಅಲ್ಲಮ' ಚಿತ್ರದಲ್ಲಿ ಶೀರ್ಷಿಕೆ ಪಾತ್ರ ನಿರ್ವಹಿಸಿರುವುದು ನಟ ಧನಂಜಯ್.[ಚಿತ್ರಗಳು: 'ಅಲ್ಲಮ'ನಿಗೆ ಪರಕಾಯ ಪ್ರವೇಶ ಮಾಡಿದ ಧನಂಜಯ್]
'ಅಲ್ಲಮ' ಪಾತ್ರಕ್ಕೋಸ್ಕರ 18 ತಿಂಗಳುಗಳ ಕಾಲ ಮೃದಂಗ ನುಡಿಸುವುದನ್ನು ಕಲಿತಿದ್ದಾರೆ. ಸಂಗೀತ ಮಾಂತ್ರಿಕ ಬಾಪು ಪದ್ಮನಾಭ ಅವರ ಬಳಿ ನಟ ಧನಂಜಯ್ ಮದ್ದಳೆ ಬಾರಿಸುವುದನ್ನೂ ಕರಗತ ಮಾಡಿಕೊಂಡಿದ್ದಾರೆ. ನೃತ್ಯ ಸಂಯೋಜಕರಾದ ಮದನ್-ಹರಿಣಿ ಕೊರಿಯೋಗ್ರಫಿಯಲ್ಲಿ ಧನಂಜಯ್ ಮದ್ದಳೆ ಹಿಡಿದು ಅದ್ಭುತವಾಗಿ ನೃತ್ಯ ಮಾಡಿದ್ದಾರೆ.['ಅಲ್ಲಮ'ನಿಗಾಗಿ ಮದ್ದಳೆ ಕಲಿಯಲು ಧನಂಜಯ್ ಕಸರತ್ತು]

ನಾಯಕಿ ಪಾತ್ರದಲ್ಲಿ ನಟಿ ಮೇಘನಾ ರಾಜ್ ಕಾಣಿಸಿಕೊಂಡಿದ್ದಾರೆ. ಸುಮಾರು ನಾಲ್ಕು ವರ್ಷಗಳ ಹಿಂದೆ ಸೆಟ್ಟೇರಿದ್ದ 'ಅಲ್ಲಮ' ಚಿತ್ರ ಕೊನೆಗೂ ಬಿಡುಗಡೆ ಆಗುತ್ತಿದೆ. ಇದೇ ತಿಂಗಳ 26ರಂದು ರಾಜ್ಯಾದ್ಯಂತ 'ಅಲ್ಲಮ' ಚಿತ್ರ ತೆರೆಗೆ ಬರಲಿದೆ.