Don't Miss!
- News Neha Murder Case: ವೈಯಕ್ತಿಕ ಕಾರಣಕ್ಕೆ ವಿದ್ಯಾರ್ಥಿನಿ ನೇಹಾ ಕೊಲೆ ಎಂದ ಸಿಎಂ ಸಿದ್ದರಾಮಯ್ಯ
- Automobiles Google Maps: ಇವಿ ಮಾಲೀಕರೇ ಆತಂಕ ಬಿಡಿ... ಗೂಗಲ್ ಮ್ಯಾಪ್ಸ್ ಭರ್ಜರಿ ಅಪ್ಡೇಟ್!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಂಗಳೂರು ಚಿತ್ರೋತ್ಸವಕ್ಕೆ ಎಂಟ್ರಿ ಪಡೆದ ಶಿವಣ್ಣನ 'ಕಬೀರ'!
ಫೆಬ್ರವರಿ 2ರಿಂದ ಆರಂಭವಾಗಲಿರುವ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಶಿವರಾಜ್ ಕುಮಾರ್ ಅಭಿನಯದ 'ಕಬೀರ' ಚಿತ್ರವನ್ನ ಕೈ ಬಿಡಲಾಗಿತ್ತು. ಇದಕ್ಕೆ ಶಿವರಾಜ್ ಕುಮಾರ್ ಅಭಿಮಾನಿಗಳು ಖಂಡನೆ ವ್ಯಕ್ತಪಡಿಸಿದ್ದರು.
ಇದೀಗ, ಹ್ಯಾಟ್ರಿಕ್ ಹೀರೋ ಶಿವಣ್ಣನ 'ಕಬೀರ' ಮತ್ತೆ ಬೆಂಗಳೂರು ಚಿತ್ರೋತ್ಸವಕ್ಕೆ ಎಂಟ್ರಿ ಕೊಟ್ಟಿದೆ. ಒಮ್ಮೆ ಕೈಬಿಟ್ಟ ಚಿತ್ರವನ್ನ ಮತ್ತೆ ಹೇಗೆ ಸೇರಿಸಲಾಯಿತು ಎಂಬ ಅನುಮಾನ ಕಾಡಬಹುದು. ಆದ್ರೆ, 'ಕಬೀರ' ಚಿತ್ರ ಆಯ್ಕೆಯಾಗಿರುವುದು ಸ್ವರ್ಧಾ ವಿಭಾಗಕ್ಕಲ್ಲ. ಸಾಮಾನ್ಯ ಪ್ರದರ್ಶನಕ್ಕೆ ಮಾತ್ರ.[ಈ 3 ಚಿತ್ರಗಳು 'ಬೆಂಗಳೂರು ಚಿತ್ರೋತ್ಸವ'ಕ್ಕೆ ಯಾಕೆ ಆಯ್ಕೆಯಾಗಿಲ್ಲ?]
ಹೌದು, ಬೆಂಗಳೂರು ಚಿತ್ರೋತ್ಸವದಲ್ಲಿ ಕನ್ನಡ ಸಿನಿಮಾ ವಿಭಾಗ, ಭಾರತೀಯ ಸಿನಿಮಾ ವಿಭಾಗ ಮತ್ತು ಏಷ್ಯಾ ಸಿನಿಮಾ ವಿಭಾಗಗಳಲ್ಲಿ ಸ್ವರ್ಧೆ ನಡೆಯುತ್ತಿದೆ. ಈಗಾಗಲೇ ಈ ಎಲ್ಲ ವಿಭಾಗಗಳಿಗೆ ಕನ್ನಡದ ಇತರೆ ಚಿತ್ರಗಳು ಆಯ್ಕೆಯಾಗಿದೆ. ಈ ಮೇಲಿನ ಯಾವುದೇ ಸೆಕ್ಷನ್ ನಲ್ಲಿ 'ಕಬೀರ' ಆಯ್ಕೆಯಾಗಿಲ್ಲ.[9ನೇ ಬೆಂಗಳೂರು ಚಿತ್ರೋತ್ಸವದಲ್ಲಿ 12 ಕನ್ನಡ ಚಿತ್ರಗಳು: ಯಾವುವು?]
ಹೀಗಾಗಿ ಅಭಿಮಾನಿಗಳ ಒತ್ತಾಯದ ಮೆರೆಗೆ, ಮತ್ತು ಚಿತ್ರೋತ್ಸವದ ನೀತಿ-ನಿಯಮಗಳ ಅನ್ವಯ 'ಕಬೀರ' ಚಿತ್ರಕ್ಕೆ ಎರಡು ಪ್ರದರ್ಶನಗಳನ್ನ ನೀಡಲಾಗಿದೆ. ಮೈಸೂರು ಮತ್ತು ಬೆಂಗಳೂರಿನಲ್ಲಿ ತಲಾ ಒಂದು ಶೋ ಪ್ರದರ್ಶನವಾಗಲಿದೆ.
ಈ ವಿಚಾರವನ್ನ ನಿನ್ನೆ (ಜನವರಿ 28) ನಡೆದ ಬೆಂಗಳೂರು ಚಿತ್ರೋತ್ಸವಕ್ಕೆ ಸಂಬಂಧಿಸಿದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಚಲನಚಿತ್ರ ಅಕಾಡಮಿ ಅಧ್ಯಕ್ಷರಾದ ಎಸ್.ವಿ.ರಾಜೇಂದ್ರಸಿಂಗ್ ಬಾಬು ಅವರು ಸ್ವಷ್ಟಪಡಿಸಿದರು.