ಜೂನ್ 15ಕ್ಕೆ 'ಕಟ್ಟುಕಥೆ', ಮಾತಿನ ಮನೆಯಲ್ಲಿ 'ಗರ'
ಮಹದೇವ ಮೈಸೂರು ಅವರು ನಿರ್ಮಿಸಿರುವ 'ಕಟ್ಟುಕಥೆ' ಚಿತ್ರ ಜೂನ್ 15ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಚಿತ್ರದ ಆಡಿಯೋ ಬಿಡುಗಡೆಯಾಗಿದ್ದು, ಕೇಳುಗರ ಮನಗೆದ್ದಿದೆ.
ರಾಜ್ ಪ್ರವೀಣ್ ನಿರ್ದೇಶನದ ಈ ಚಿತ್ರಕ್ಕೆ ವಿಕ್ರಂ ಸುಬ್ರಮಣ್ಯ ಸಂಗೀತ ನೀಡಿದ್ದಾರೆ. ಮನು ಬಿ.ಕೆ ಛಾಯಾಗ್ರಹಣ ಹಾಗೂ ಗುರುಮೂರ್ತಿ ಹೆಗ್ಗಡೆ ಅವರ ಸಂಕಲನವಿರುವ ಈ ಚಿತ್ರಕ್ಕೆ 'ಟಗರು' ಚಿತ್ರದ ಖ್ಯಾತಿಯ ಮಾಸ್ತಿ ಸಂಭಾಷಣೆ ಬರೆದಿದ್ದಾರೆ.
ಸೂರ್ಯ, ಸ್ವಾತಿ ಕೊಂಡೆ, ರಾಜೇಶ್ ನಟರಂಗ, ಮಿತ್ರ, ಕೆಂಪೇಗೌಡ, ಬೃನಾಲಿ ಶೆಟ್ಟಿ, ರಿಹಾಂಸಿ ಗೌಡ, ಸೂರ್ಯ ಕುಂದಾಪುರ, ಮೋಹನ್ ಜುನೇಜ, ನಟನ ಪ್ರಶಾಂತ್, ರಜನಿಕಾಂತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಮಾತಿನ ಮನೆಯಲ್ಲಿ 'ಗರ'
'ಗರ' ಚಿತ್ರಕ್ಕೆ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಚಿತ್ರಕ್ಕೆ ಬೆಂಗಳೂರು, ಕಾಶ್ಮೀರ, ಮೈಸೂರು, ಕೊಪ್ಪ, ಮೇಲುಕೋಟೆ ಮುಂತಾದ ಕಡೆ 55 ದಿನಗಳ ಚಿತ್ರೀಕರಣ ನಡೆದಿದೆ.
ಕೆ.ಆರ್.ಮುರಳಿಕೃಷ್ಣ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಸಾಗರ್ ಗುರುರಾಜ್ ಸಂಗೀತ ನೀಡಿದ್ದಾರೆ. ಹೆಚ್.ಸಿ.ವೇಣು ಛಾಯಾಗ್ರಹಣ, ಉಮಾಶಂಕರ್ ಬಾಬು ಸಂಕಲನ, ದಿನೇಶ್ ಕಲಾ ನಿರ್ದೇಶನ ಹಾಗೂ ಬಾಲಿವುಡ್ ಖ್ಯಾತಿಯ ಸರೋಜ್ ಖಾನ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಬಿಗ್ ಬಾಸ್, ಟಿವಿ ನಿರೂಪಕ ರೆಹಮಾನ್, ಆವಂತಿಕ, ಆರ್ಯನ್, ಪ್ರಶಾಂತ್ ಸಿದ್ದಿ, ರಾಮಕೃಷ್ಣ, ರೂಪಾದೇವಿ, ಮನದೀಪ್ ರಾಯ್, ತಬಲ ನಾಣಿ, ರೋಹಿತ್, ಸುನೇತ್ರ ಪಂಡಿತ್, ಸುಚಿತ್ರ, ನಿರಂಜನ್, ರಾಜೇಶ್ ರಾವ್, ಸೋನು, ದಯಾನಂದ್, ಗುರುರಾಜ್ ಕಲಾಲ್ ಬಂಡಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ವಿಶೇಷ ಜೋಡಿಯಾಗಿ ಖ್ಯಾತ ನಟರಾದ ಜಾನೀಲೀವರ್ ಹಾಗೂ ಸಾಧುಕೋಕಿಲ ಅಭಿನಯಿಸಿದ್ದಾರೆ.


Click it and Unblock the Notifications











