Don't Miss!
- News ಜನ ಸೇವಕನಾಗಿ ದುಡಿಯಲು ನನಗೊಂದು ಅವಕಾಶ ಕೊಡಿ: ವಿನೋದ್ ಅಸೂಟಿ
- Technology OnePlus: ಒನ್ಪ್ಲಸ್ 13 ಸ್ಮಾರ್ಟ್ಫೋನ್ ಡಿಸ್ಪ್ಲೇ, ವಿನ್ಯಾಸ ಲೀಕ್!..ಯಾವಾಗ ಲಾಂಚ್?
- Automobiles ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Lifestyle ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- Finance ಝಿಲಿಂಗೋನ ಸಹ-ಸಂಸ್ಥಾಪಕ ಹಾಗೂ ಮಾಜಿ ಸಿಒಒ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಿದ ಅಂಕಿತಿ ಬೋಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೂನ್ 15ಕ್ಕೆ 'ಕಟ್ಟುಕಥೆ', ಮಾತಿನ ಮನೆಯಲ್ಲಿ 'ಗರ'
ಮಹದೇವ ಮೈಸೂರು ಅವರು ನಿರ್ಮಿಸಿರುವ 'ಕಟ್ಟುಕಥೆ' ಚಿತ್ರ ಜೂನ್ 15ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಚಿತ್ರದ ಆಡಿಯೋ ಬಿಡುಗಡೆಯಾಗಿದ್ದು, ಕೇಳುಗರ ಮನಗೆದ್ದಿದೆ.
ರಾಜ್ ಪ್ರವೀಣ್ ನಿರ್ದೇಶನದ ಈ ಚಿತ್ರಕ್ಕೆ ವಿಕ್ರಂ ಸುಬ್ರಮಣ್ಯ ಸಂಗೀತ ನೀಡಿದ್ದಾರೆ. ಮನು ಬಿ.ಕೆ ಛಾಯಾಗ್ರಹಣ ಹಾಗೂ ಗುರುಮೂರ್ತಿ ಹೆಗ್ಗಡೆ ಅವರ ಸಂಕಲನವಿರುವ ಈ ಚಿತ್ರಕ್ಕೆ 'ಟಗರು' ಚಿತ್ರದ ಖ್ಯಾತಿಯ ಮಾಸ್ತಿ ಸಂಭಾಷಣೆ ಬರೆದಿದ್ದಾರೆ.
ಸೂರ್ಯ, ಸ್ವಾತಿ ಕೊಂಡೆ, ರಾಜೇಶ್ ನಟರಂಗ, ಮಿತ್ರ, ಕೆಂಪೇಗೌಡ, ಬೃನಾಲಿ ಶೆಟ್ಟಿ, ರಿಹಾಂಸಿ ಗೌಡ, ಸೂರ್ಯ ಕುಂದಾಪುರ, ಮೋಹನ್ ಜುನೇಜ, ನಟನ ಪ್ರಶಾಂತ್, ರಜನಿಕಾಂತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಮಾತಿನ ಮನೆಯಲ್ಲಿ 'ಗರ'
'ಗರ' ಚಿತ್ರಕ್ಕೆ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಚಿತ್ರಕ್ಕೆ ಬೆಂಗಳೂರು, ಕಾಶ್ಮೀರ, ಮೈಸೂರು, ಕೊಪ್ಪ, ಮೇಲುಕೋಟೆ ಮುಂತಾದ ಕಡೆ 55 ದಿನಗಳ ಚಿತ್ರೀಕರಣ ನಡೆದಿದೆ.
ಕೆ.ಆರ್.ಮುರಳಿಕೃಷ್ಣ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಸಾಗರ್ ಗುರುರಾಜ್ ಸಂಗೀತ ನೀಡಿದ್ದಾರೆ. ಹೆಚ್.ಸಿ.ವೇಣು ಛಾಯಾಗ್ರಹಣ, ಉಮಾಶಂಕರ್ ಬಾಬು ಸಂಕಲನ, ದಿನೇಶ್ ಕಲಾ ನಿರ್ದೇಶನ ಹಾಗೂ ಬಾಲಿವುಡ್ ಖ್ಯಾತಿಯ ಸರೋಜ್ ಖಾನ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
ಬಿಗ್ ಬಾಸ್, ಟಿವಿ ನಿರೂಪಕ ರೆಹಮಾನ್, ಆವಂತಿಕ, ಆರ್ಯನ್, ಪ್ರಶಾಂತ್ ಸಿದ್ದಿ, ರಾಮಕೃಷ್ಣ, ರೂಪಾದೇವಿ, ಮನದೀಪ್ ರಾಯ್, ತಬಲ ನಾಣಿ, ರೋಹಿತ್, ಸುನೇತ್ರ ಪಂಡಿತ್, ಸುಚಿತ್ರ, ನಿರಂಜನ್, ರಾಜೇಶ್ ರಾವ್, ಸೋನು, ದಯಾನಂದ್, ಗುರುರಾಜ್ ಕಲಾಲ್ ಬಂಡಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ವಿಶೇಷ ಜೋಡಿಯಾಗಿ ಖ್ಯಾತ ನಟರಾದ ಜಾನೀಲೀವರ್ ಹಾಗೂ ಸಾಧುಕೋಕಿಲ ಅಭಿನಯಿಸಿದ್ದಾರೆ.