Don't Miss!
- News ಒಂದಲ್ಲ.. ಎರಡಲ್ಲ.. 128 ಲಕ್ಷ ಕೋಟಿ ರೂಪಾಯಿ ಲಾಭ!
- Automobiles Brezza: ಮಾರುತಿ ಸುಜುಕಿ ಬ್ರೆಝಾ ಖರೀದಿಸಬೇಕೇ.. ಆನ್ ರೋಡ್ ಬೆಲೆ ಎಷ್ಟು? EMI ಏನು?
- Sports IPL 2024: RCB ವಿರುದ್ಧ ಪಂದ್ಯಕ್ಕೆ KKRನ ಆಡುವ 11ರ ಬಳಗ ಮರೆತ ಶ್ರೇಯಸ್ ಅಯ್ಯರ್
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಾಡ್ ಫಾದರ್, ಕಠಾರಿವೀರ ಕಿತ್ತಾಟ ಪುಕ್ಸಟೆ ಪ್ರಚಾರಕ್ಕೆ?
ತಮ್ಮ ಚಿತ್ರವೇ ಮೊದಲು ಬಿಡುಗಡೆ ಯಾಗಬೇಕೆಂದು ಹಠಕ್ಕೆ ಬಿದ್ದಿದ್ದ ಮಂಜು ತಮ್ಮ ಚಿತ್ರವನ್ನು ಜೂನ್ ತಿಂಗಳಿಗೆ ಮುಂದೂಡಿದರು. ಮಂಜು ಈಗ ನೀಡುತ್ತಿರುವ ಕಾರಣ ಕನ್ನಡ ಚಿತ್ರೋದ್ಯಮದ ಒಳಿತಿಗಾಗಿ ಮತ್ತು ಡಿಸ್ತ್ರಿಬ್ಯೂಷನ್ ಹಕ್ಕು ಪಡೆದಿರುವ ಪ್ರಸಾದ್ ವೆಂಚರ್ ಗೆ ನಷ್ಟವಾಗಬಾರದೆಂದು. ಹಾಗಾದರೆ ಇಷ್ಟು ದಿನ ಮಾಧ್ಯಮದಲ್ಲಿ ಕಿತ್ತಾಡಿ, ಜನರಿಗೆ ಪುಕ್ಸಟೆ ಮನೋರಂಜನೆ ನೀಡಿದ್ದು ಯಾಕೆ? ಇಷ್ಟು ದಿನ ಚಿತ್ರೋದ್ಯಮದ ಒಳಿತಿನ ಬಗ್ಗೆ ಅವರಿಗೆ ಕಾಳಜಿ ಇರಲಿಲ್ಲವೇ?
ರೆಹಮಾನ್ ಅವರ ಸಂಗೀತವಿದೆ ಎಂದು ಹೇಳಲಾಗುವ ಗಾಡ್ ಫಾದರ್ ಚಿತ್ರದ ಧ್ವನಿಸುರಳಿ ಬಿಡುಗಡೆನೇ ಇನ್ನೂ ನಡೆದಿಲ್ಲ, ಚಿತ್ರದ ಚಿತ್ರೀಕರಣ ಯಾವ ಹಂತದಲ್ಲಿ ಇದೆಯೋ ಅದೂ ತಿಳಿದಿಲ್ಲ, ಹಾಗಿದ್ದರೂ ಇನ್ನೊಂದು ಚಿತ್ರದ ಬಿಡುಗಡೆಗೆ ಅಡ್ಡಗಾಲು ಹಾಕುವುದು ಎಷ್ಟರ ಮಟ್ಟಿಗೆ ಸರಿ ಅನ್ನೋದಕ್ಕೆ ಮಂಜು ಅವರೇ ಉತ್ತರ ನೀಡಬೇಕು.
ಚಿತ್ರಕ್ಕೆ ರೆಹಮಾನ್ ಸಂಗೀತ ನೀಡಿದ್ದಾರೆ, ಮೊದಲು ಅದ್ದೂರಿಯಾಗಿ ಧ್ವನಿಸುರುಳಿ ಬಿಡುಗಡೆ ಮಾಡೋಣ ಆಮೇಲೆ ಚಿತ್ರ ಬಿಡುಗಡೆ ಮಾಡೋಣ ಎನ್ನುವ ಪ್ರಸಾದ್ ಸಲಹೆಯನ್ನು ನಿರ್ಮಾಪಕರು ಈ ಹಿಂದೆ ಯಾಕೆ ಪಾಲಿಸಲಿಲ್ಲವೋ?
ಗಾಂಧಿನಗರದ ಶ್ರೀ ಅಸಾಮಾನ್ಯ ಹೇಳುವ ಹಾಗೆ ಇದೆಲ್ಲಾ ಬರೀ ಪ್ರಚಾರಕ್ಕೆ. ಎಷ್ಟಾದರೂ ಮುನಿರತ್ನ ಮತ್ತು ಮಂಜು ಇಬ್ಬರೂ ಉತ್ತಮ ಸ್ನೇಹಿತರಲ್ಲವೇ.