Don't Miss!
- Automobiles ಫ್ಯಾಮಿಲಿ ಕಾರಾಗಿ ಜನರ ಮನಗೆದ್ದ ಹ್ಯುಂಡೈ ಅಲ್ಕಾಜರ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- News Tirupati Darshan Ticket: ತಿರುಪತಿ ದರ್ಶನಕ್ಕೆ ವಿಶೇಷ ಟಿಕೆಟ್ ಬಿಡುಗಡೆ: ಪೂಜಾ ಸೇವೆಯಲ್ಲಿ ಬಾಗವಹಿಸಲು ದಿನಾಂಕ ಆಯ್ಕೆ ಮಾಡಿ...
- Finance ಕಬ್ಬನ್ ಪಾರ್ಕ್ನಲ್ಲಿ ಮರ ಅಪ್ಪಿಕೊಳ್ಳುವ ಕಾರ್ಯಕ್ರಮಕ್ಕೆ ತಲಾ 1,500 ರೂ. ಶುಲ್ಕವಿಟ್ಟ ಕಂಪನಿ!
- Technology Itel: ಐಟೆಲ್ ಸೂಪರ್ ಗುರು 4G ಫೋನ್ ಲಾಂಚ್! ಯುಪಿಐ ಬೆಂಬಲ
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸರಣಿ ಕೊಲೆಗಳ ಸುತ್ತ ಹೊಸಬರ ಚಿತ್ರ 'ಮರೀಚಿಕೆ'
ಕನ್ನಡ ಚಿತ್ರರಂಗದಲ್ಲಿ ಹೊಸಬರ ಚಿತ್ರಗಳು ತಾಂತ್ರಿಕತೆ ಹಾಗೂ ವಿಭಿನ್ನ ಶೈಲಿಯ ನಿರೂಪಣೆಯಿಂದಲೇ ಗೆಲುವು ಸಾಧಿಸಿವೆ. ಇದಕ್ಕೆ ಸಾಕಷ್ಟು ಉದಾಹರಣೆಗಳು ನಮ್ಮ ಮುಂದಿವೆ. ದೊಡ್ಡ ಸ್ಟಾರ್ ಇಲ್ಲದಿದ್ದರೂ ಆ ಸಿನಿಮಾಗಳು ಪ್ರೇಕ್ಷಕರನ್ನು ಆಕರ್ಷಿಸುವ ಈ ನಿಟ್ಟಿನಲ್ಲಿ ಬರುತ್ತಿರುವ ಮತ್ತೊಂದು ಚಿತ್ರವೇ 'ಮರೀಚಿಕೆ.
ಕಲಾವಿದರು, ತಂತ್ರಜ್ಞರನ್ನೊಳಗೊಂಡಂತೆ ಸಂಪೂರ್ಣವಾಗಿ ಹೊಸಬರೇ ಸೇರಿಕೊಂಡು ಈ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಇತ್ತೀಚೆಗೆ ಆರ್.ಪಿ.ಸಿ.ಲೇಔಟ್ ನ ಸಂಕಷ್ಟಹರ ಗಣಪತಿ ದೇವಸ್ಥಾನದಲ್ಲಿ ಈ ಚಿತ್ರದ ಮುಹೂರ್ತ ನಡೆಯಿತು. [ಸ್ಯಾಂಡಲ್ ವುಡ್ ನಲ್ಲಿ 105 ಡಿಗ್ರಿ ಹಾರರ್ ಫೀವರ್]
ಒಂದು ಸಸ್ಪೆನ್ಸ್ ಥ್ರಿಲ್ಲರ್ ಕಥೆ ರೆಡಿ ಮಾಡಿಕೊಂಡು ಗಾಂಧಿನಗರದಲ್ಲಿ ಸಾಕಷ್ಟು ಅಲೆದಾಡಿದರೂ ಹೊಸಬರೆಂದು ಯಾವ ನಿರ್ಮಾಪಕರು ಒಪ್ಪದಿದ್ದಾಗ ನಿರ್ದೇಶಕರ ರಾಜ್ ಮಯೂರ್, ನಾಯಕ ಸಂಜಯ್ ಸೇರಿದಂತೆ 4 ಜನ ಗೆಳೆಯರು ಸೇರಿ ಈ ಚಿತ್ರವನ್ನು ನಿರ್ಮಿಸಲು ಹೊರಟಿದ್ದಾರೆ.
ದಕ್ಷಿಣ ಭಾರತದ ಪ್ರಸಿದ್ಧ ದೇವಸ್ಥಾನವೊಂದರ ಸುತ್ತ ನಡೆಯುವಂಥ ಕಥೆ ಇದಾಗಿದ್ದು, ಕರ್ನಾಟಕ, ಆಂಧ್ರ, ತಮಿಳುನಾಡು ಹಾಗೂ ಕೇರಳದಲ್ಲಿ ಸುಮಾರು 50 ದಿನಗಳ ಕಾಲ ಶೂಟಿಂಗ್ ನಡೆಸಲಾಗುವುದು. ಚಿತ್ರದ ಶೇ.60ರಷ್ಟು ಚಿತ್ರೀಕರಣ ಫಾರೆಸ್ಟ್ ನಲ್ಲಿ ನಡೆಸಲು ಉದ್ದೇಶಿಸಲಾಗಿದೆ.
ಇದೊಂದು ಮರ್ಡರ್ ಮಿಸ್ಟರಿಯಾಗಿದ್ದು 4 ಜನ ಗೆಳೆಯರು ಸೇರಿ ಟ್ರಾವೆಲ್ ಮಾಡುವಾಗ ನಡೆಯುವ ಅಪರೂಪದ ಘಟನೆಗಳೇ ಚಿತ್ರದ ಹೈಲೈಟ್ಸ್. ಒಟ್ಟಾರೆ ಹಣದ ಹಿಂದೆ ಮನುಷ್ಯ ಹೋದಾಗ ಆತ ಯಾವ ಮಟ್ಟ ತಲುಪುತ್ತಾನೆ. ಸ್ನೇಹ ಸಂಬಂಧಗಳು ಹೇಗೆ ಬೆಲೆ ಕಳೆದುಕೊಳ್ಳುತ್ತವೆ ಎಂಬುದನ್ನು ಈ ಚಿತ್ರದಲ್ಲಿ ಹೇಳಲಾಗಿದೆಯಂತೆ.
ಈ ಚಿತ್ರದ ನಾಯಕ ಸಂಜಯ್ ಮೂಲತಃ ಬೆಳಗಾವಿಯವರು. ಅಭಿನಯಿಸಬೇಕೆಂಬ ಆಸೆಯಿಂದ ತರಬೇತಿ ಕೂಡ ಪಡೆದಿದ್ದಾರೆ. ಅಲ್ಲದೆ ನಿರ್ದೇಶಕ ರಾಜ್ ಮಯೂರ್ ಇವರ ಸ್ನೇಹಿತ. ಇನ್ನು ನಾಯಕಿ ಮಾನಸಿ ಈಗಾಗಲೇ ಸಾಕಷ್ಟು ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. 'ಮೊಗ್ಗಿನ ಮನಸ್ಸು', 'ಬ್ಲಾಕ್ ರೋಜ್' ಇವರ ಪ್ರಮುಖ ಸಿನಿಮಾಗಳು.
ಈ ತರಹದ ಸಿನಿಮಾ ಈ ಹಿಂದೆ ಬಂದಿಲ್ಲ ಎಂದು ಹೇಳಿಕೊಂಡ ನಿರ್ದೇಶಕ ರಾಜ್ ಮಯೂರ್ ಹೊಸಬರ ಹೊಸ ಪ್ರಯತ್ನಕ್ಕೆ ಜನ ಖಂಡಿತ ಪ್ರೋತ್ಸಾಹಿಸುವರೆಂದು ಹೇಳಿದರು. ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ ಅವರು ಸಮಾರಂಭಕ್ಕೆ ಆಗಮಿಸಿ ತಂಡಕ್ಕೆ ಶುಭ ಕೋರಿದರು.
ಕಳೆದ 5-6 ವರ್ಷಗಳಿಂದ ಸೌಂಡ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ಮನೋಜ್.ಎಸ್. ಮೊದಲ ಬಾರಿಗೆ ಈ ಚಿತ್ರದ ಮೂಲಕ ಸ್ವತಂತ್ರ ಸಂಗೀತ ನಿರ್ದೇಶಕರಾಗಿದ್ದಾರೆ. ಸಂದೀಪ್ ಈ ಚಿತ್ರಕ್ಕೆ ಛಾಯಾಗ್ರಾಹಕರು. (ಒನ್ಇಂಡಿಯಾ ಕನ್ನಡ)