Don't Miss!
- Automobiles ರಾಂಗ್ ರೂಟ್ನಲ್ಲಿ ಬಂದು ಪ್ರಶ್ನಿಸಿದ ಬೈಕ್ ಸವಾರನಿಗೆ ಥಳಿಸಿದ ಕಾರು ಚಾಲಕ: ವಿಡಿಯೋ
- News CAA: ಸಿಎಎ ಜಾರಿ ಪ್ರಶ್ನಿಸಿ 230ಕ್ಕೂ ಹೆಚ್ಚು ಅರ್ಜಿ: ಸುಪ್ರೀಂಕೋರ್ಟ್ನಲ್ಲಿ ಮಹತ್ವದ ವಿಚಾರಣೆ
- Finance ಆಧಾರ್ ಉಚಿತ ಅಪ್ಡೇಟ್ ದಿನಾಂಕ ಜೂ.14ರವರೆಗೆ ವಿಸ್ತರಣೆ: ಆನ್ಲೈನ್ನಲ್ಲಿ ಹೀಗೆ ನವೀಕರಿಸಿ
- Lifestyle ಬಾಯಲ್ಲಿ ನೀರು ತರಿಸುವ ಮಸಾಲೆ ಮೊಟ್ಟೆ ಬುರ್ಜಿ ಮಾಡೋದು ಹೇಗೆ.? ತುಂಬಾ ಸಿಂಪಲ್ ರೆಸಿಪಿ
- Sports IPL 2024: ಮುಂಬೈ ನಾಯಕನಿಗೆ ಪತ್ರಕರ್ತರಿಂದ ಬೌನ್ಸರ್: ಉತ್ತರಿಸದೆ ಮೌನಕ್ಕೆ ಶರಣಾದ ಹಾರ್ದಿಕ್ ಪಾಂಡ್ಯ
- Technology Best Coolers: ಭಾರತದಲ್ಲಿ 5 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯ ಇರುವ ಅತ್ಯುತ್ತಮ ಕೂಲರ್ಗಳು! ಫೀಚರ್ಸ್ ಏನಿದೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶೂಟಿಂಗ್ ಮುಗಿಸಿ ಕುಂಬಳಕಾಯಿ ಒಡೆದ 'ಮುಗುಳುನಗೆ'
ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ನಿರ್ದೇಶಕ ಯೋಗರಾಜ್ ಭಟ್ ಜೋಡಿಯ ಬಹುನಿರೀಕ್ಷೆಯ 'ಮುಗುಳುನಗೆ' ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿ ಮುಗಿದಿದೆ. ಸತತವಾಗಿ ತಮಿಳುನಾಡು, ಕೇರಳ, ಹಾಗೂ ಕರ್ನಾಟಕ ರಾಜ್ಯಾದ್ಯಂತ ಶೂಟಿಂಗ್ ಮಾಡಿರುವ 'ಮುಗುಳುನಗೆ' ಈಗ ಪೋಸ್ಟ್ ಪ್ರೊಡಕ್ಷನ್ ಹಂತಕ್ಕೆ ಕಾಲಿಟ್ಟಿದೆ.
ಚಿತ್ರೀಕರಣ ಮುಕ್ತಾಯ ಮಾಡಿದ ಸಂಭ್ರಮವನ್ನ ಚಿತ್ರತಂಡ ಅದ್ಧೂರಿಯಾಗಿ ಆಚರಿಸಿಕೊಂಡಿದೆ. ಚಿತ್ರದ ಕೊನೆಯ ಸಾಂಗ್ ಶೂಟಿಂಗ್ ಮಾಡುವ ಮೂಲಕ ಚಿತ್ರದ ಕೊನೆಯ ದೃಶ್ಯವನ್ನ ಮುಗಿಸಿದ್ದಾರೆ. ಚಿತ್ರೀಕರಣ ಮುಗಿಸಿದ ಸಂತಸಕ್ಕೆ ಸಂಪ್ರದಾಯವಾಗಿ ಕುಂಬಳಕಾಯಿ ಒಡೆದು ಸಂಭ್ರಮಿಸಿದೆ.
ಭಟ್ಟರ 'ಮುಗುಳುನಗೆ' ನೋಡಿದ ಮೊದಲ ವೀಕ್ಷಕ ದುನಿಯಾ ಸೂರಿ ಏನಂದ್ರು?
ಅಂದ್ಹಾಗೆ, 'ಗಾಳಿಪಟ' ಚಿತ್ರದ ನಂತರ ಭಟ್ ಹಾಗೂ ಗಣೇಶ್ ಅವರ ಕಾಂಬಿನೇಷನ್ ಚಿತ್ರ ಇದಾಗಿದ್ದು, ನಾಲ್ಕು ಕಥೆಗಳ ಜೊತೆ ಎಮೋಷನಲ್ ಕಾಮಿಡಿಯ ಶೈಲಿಯಲ್ಲಿ ರಂಜಿಸಲು ಸ್ಟಾರ್ ಜೋಡಿ ಸಿದ್ದವಾಗಿದ್ದಾರೆ. ಚಿತ್ರದಲ್ಲಿ ಒಟ್ಟು ನಾಲ್ಕು ನಾಯಕಿಯರಿದ್ದು, 'ಸಿದ್ಧಾರ್ಥ್' ಖ್ಯಾತಿಯ ಅಪೂರ್ವ ಆರೋರ, ಆಶಿಕಾ, ನಿಖಿತಾ ನಾರಾಯಣ್ ಮತ್ತು ವಿಶೇಷ ಪಾತ್ರದಲ್ಲಿ ನಟಿ ಅಮೂಲ್ಯ ಕಾಣಿಸಿಕೊಂಡಿದ್ದಾರೆ.
ಉಳಿದಂತೆ 'ಮುಗುಳುನಗೆ' ಚಿತ್ರಕ್ಕೆ ಹರಿಕೃಷ್ಣ ಸಂಗೀತ ಸಂಯೋಜಿಸಿದ್ದು, ಜಯಂತ್ ಕಾಯ್ಕಿಣಿ ಹಾಗೂ ಭಟ್ ಅವರು ಸಾಹಿತ್ಯ ಬರೆದಿದ್ದಾರೆ. ಸೈಯದ್ ಸಲಾಂ ನಿರ್ಮಾಣ ಮಾಡಿದ್ದು, ಯೋಗರಾಜ್ ಭಟ್ ಹಾಗೂ ಗಣೇಶ್ ಕೂಡ ನಿರ್ಮಾಣದಲ್ಲಿ ಕೈಜೋಡಿಸಿದ್ದಾರೆ.
ಗಣೇಶ್ ಹುಟ್ಟುಹಬ್ಬಕ್ಕೆ ಭಟ್ಟರಿಂದ ಸ್ಪೆಷಲ್ ಉಡುಗೊರೆ