Don't Miss!
- News ರಾತ್ರೋ ರಾತ್ರಿ ಪತ್ರಿಕಾಗೋಷ್ಠಿ ನಡೆಸಿ ವಿ.ಶ್ರೀನಿವಾಸ ಪ್ರಸಾದ್ ಅಳಿಯ ಏನು ಹೇಳಿದ್ರು ಗೊತ್ತಾ?
- Sports IPL 2024: ಮುಂಬೈ ಇಂಡಿಯನ್ಸ್ ತಂಡ ಸೇರಿದ ಮಾಜಿ ನಾಯಕ: ಹಾಲಿ ನಾಯಕನ ಆತಂಕ ದೂರ
- Lifestyle ಫ್ಲ್ಯಾಟ್ನಲ್ಲಿ ವಾಸಿಸಲು ಹೋಗುವಾಗ ಸಮೃದ್ಧಿ, ಆರೋಗ್ಯಕ್ಕಾಗಿ ವಾಸ್ತು ಹೀಗಿದೆಯೇ ಎಂದು ನೋಡಬೇಕು
- Technology ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಇನ್ಫಿನಿಕ್ಸ್ ನೋಟ್ 40 ಪ್ರೊ ಪ್ಲಸ್ 5G ಫೋನ್: ಫೀಚರ್ಸ್ ಹೇಗಿದೆ?
- Automobiles ಡಿ ಬಾಸ್ ಪತ್ನಿ ಖರೀದಿಸಿದ್ದು ಸಾಮಾನ್ಯ ಕಾರಲ್ಲ: ಬಂಗಲೆಯಂತಹ ಇಂಟೀರಿಯರ್!
- Finance ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ, ನಿಮ್ಮ ನಗರದಲ್ಲಿ 24 ಕ್ಯಾರೆಟ್ ಚಿನ್ನದ ದರ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹುಡುಗಿ ಹುಡುಕಿಕೊಂಡು ಮಡಿಕೇರಿಗೆ ಹೋಗಿದ್ದ ಹುಚ್ಚ ವೆಂಕಟ್
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮೊನ್ನೆ ಮೊನ್ನೆ ನಿರ್ದೇಶಕ ಎಸ್ ನಾರಾಯಣ್ ಅವರ 'ಡಿಕ್ಟೇಟರ್' ಚಿತ್ರದಲ್ಲಿ ನಟನೆ ಮಾಡುವುದಿಲ್ಲ ಎಂದು ಹೇಳಿ ಸುದ್ದಿ ಮಾಡಿದ್ದ ವೆಂಕಟ್ ಅವರು ಇದೀಗ ತಾವೇ ನಟಿಸಿ-ನಿರ್ದೇಶನ ಮಾಡುತ್ತಿರುವ 'ಪೊರ್ಕಿ ಹುಚ್ಚ ವೆಂಕಟ್' ಚಿತ್ರದ ಕೆಲಸಗಳತ್ತ ಗಮನ ಹರಿಸಿದ್ದಾರೆ.
ಇದೀಗ ವೆಂಕಟ್ ಅವರು ತಮ್ಮ 'ಪೊರ್ಕಿ ಹುಚ್ಚ ವೆಂಕಟ್' ಚಿತ್ರಕ್ಕೆ ನಾಯಕಿಯರ ಹುಡುಕಾಟದಲ್ಲಿ ತೊಡಗಿದ್ದು, ಆಡಿಷನ್ ಗಾಗಿ ಇತ್ತೀಚೆಗೆ ಮಡಿಕೇರಿ ಕಡೆ ಪ್ರಯಾಣ ಬೆಳೆಸಿದ್ದರು.[ವೆಂಕಟ್ ವಿರುದ್ಧ ಚಾಟಿ ಬೀಸಿದ ನಿರ್ದೇಶಕ ಎಸ್ ನಾರಾಯಣ್]
ತಮ್ಮ ಚಿತ್ರಕ್ಕೆ ಕೊಡಗಿನ ಹುಡುಗಿಯರನ್ನು ಆಯ್ಕೆ ಮಾಡುವ ಹಿನ್ನಲೆಯಲ್ಲಿ ಮಡಿಕೇರಿಯಲ್ಲಿ ನಾಯಕಿಯರ ಆಯ್ಕೆ ಪ್ರಕ್ರಿಯೆ ನಡೆಸಿದರು. ಮಡಿಕೇರಿಯ ಕಾವೇರಿ ಕಲಾ ಕ್ಷೇತ್ರದಲ್ಲಿ ಬೆಳಗ್ಗೆಯಿಂದಲೇ ಫೈರಿಂಗ್ ಸ್ಟಾರ್ ವೆಂಕಟ್ ಮತ್ತು ಚಿತ್ರದ ನಿರ್ಮಾಪಕರು ನಾಯಕಿಯರ ಆಡಿಷನ್ ನಡೆಸಿದರು.
ಚಿತ್ರದಲ್ಲಿ ನಾಯಕಿ ನಟಿಯಾಗಿ ಕಾಣಿಸಿಕೊಳ್ಳಬೇಕೆಂಬ ಆಸಕ್ತಿಯಲ್ಲಿ ಬಂದಿದ್ದ ಕೊಡಗಿನ ಹುಡುಗಿಯರು ತಮ್ಮ ತಮ್ಮ ಇತ್ತೀಚಿಗಿನ ಭಾವಚಿತ್ರಗಳನ್ನು ನೀಡಿ, ಅವರ ಜೊತೆ ಫೋಟೋ ತೆಗೆಸಿಕೊಂಡರು.[ಹುಚ್ಚ ವೆಂಕಟ್ ಅವರ 'ಡಿಕ್ಟೇಟರ್' ಸಿನಿಮಾ ಅರ್ಧಕ್ಕೆ ನಿಂತು ಹೋಯ್ತಾ?]
ಇನ್ನು ಚಿತ್ರದ ಬಗ್ಗೆ ಮಾತನಾಡಿದ ಫೈರಿಂಗ್ ಸ್ಟಾರ್ ವೆಂಕಟ್ ಅವರು ಕಾವೇರಿ ಪಾತ್ರಕ್ಕೆ ನಾಯಕಿಯಾಗಿ ಕೊಡಗಿನ ಯುವತಿಯರನ್ನೇ ಆಯ್ಕೆ ಮಾಡಲು ನಿರ್ಧರಿಸಿದ್ದೇವೆ ಎಂದರು. ಇನ್ನು ಚಿತ್ರದ ಬಜೆಟ್ ಕೋಟಿ ದಾಟಲಿದ್ದು, ಚಿತ್ರದಲ್ಲಿ ಕಾವೇರಿ ಕುರಿತಾದ ಹಾಡೊಂದಿದೆ. ಅದನ್ನು ಕೊಡಗು ಮತ್ತು ಚೆನ್ನೈಗಳಲ್ಲಿ ಚಿತ್ರೀಕರಿಸಲಾಗುತ್ತದೆ' ಎಂದರು.['ಫೈರಿಂಗ್ ಸ್ಟಾರ್' 'ಪೊರ್ಕಿ ವೆಂಕಟ್'ಗೆ 'ಸ್ಲಂ'ನಲ್ಲಿ ಮೂಹೂರ್ತ]
ಚಿತ್ರಕ್ಕೆ ನಾಯಕಿಯಾಗಿ ಕುಶಾಲನಗರದ ಸೌಜನ್ಯ ಮಾದಪ್ಪ ಎಂಬ ಯುವತಿ ಆಯ್ಕೆಯಾಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಸೆಪ್ಟೆಂಬರ್ ತಿಂಗಳಿನಲ್ಲಿ ಚಿತ್ರದ ಬಿಡುಗಡೆ ಮಾಡಲು ವೆಂಕಟ್ ಅವರು ಯೋಜನೆ ಹಾಕಿಕೊಂಡಿದ್ದಾರೆ.