Don't Miss!
- Technology Lenovo: ಲೆನೊವೊದಿಂದ ಎಐ ಚಾಲಿತ ಲೀಜನ್ ಗೇಮಿಂಗ್ ಲ್ಯಾಪ್ಟಾಪ್ಗಳು ಲಾಂಚ್; ಬೆಲೆ ಎಷ್ಟು?
- News ಆರಂಭದಲ್ಲೇ ಬಿಜೆಪಿ- ಜೆಡಿಎಸ್ ದೋಸ್ತಿಯಲ್ಲಿ ಬಿರುಕು: ವಿಜಯೇಂದ್ರ ಏನಂದ್ರು?
- Lifestyle ಕೊನೆಗೂ ಬೆಂಗಳೂರಿಗೆ ಮಳೆ ಭಾಗ್ಯ..! ಹವಾಮಾನ ಇಲಾಖೆ ಸೂಚಿಸಿದ ದಿನಾಂಕವಿದು..!
- Automobiles Self-Driving Car: ಭಾರತೀಯರು ಅಸಮಾನ್ಯರು... ಬೊಲೆರೋದಲ್ಲಿ ಭವಿಷ್ಯ ಬದಲಿಸುವ ತಂತ್ರಜ್ಞಾನ!
- Sports Viral look: IPL 2024 ಆರಂಭಕ್ಕೂ ಮುನ್ನ ಸಾಮಾಜಿಕ ತಾಣದಲ್ಲಿ ಸಂಚಲನ ಮೂಡಿಸಿರುವ ವಿರಾಟ್ ಕೊಹ್ಲಿ Trendy look
- Finance ಬೆಂಗಳೂರಿನ ಮೇಘನಾ ಫುಡ್ಸ್ ಹೋಟೆಲ್ ಮಳಿಗೆಗಳ ಮೇಲೆ ಐಟಿ ದಾಳಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೈತರ ಪರ ದನಿ ಎತ್ತಿ ಮೆಚ್ಚುಗೆ ಗಳಿಸಿದ 'ರಣಹೇಡಿ'
ರೈತಾಪಿ ವರ್ಗ, ರೈತರ ಸಮಸ್ಯೆ, ಅವರ ಕಷ್ಟ, ನೋವು... ಹೀಗೆ ಹಳ್ಳಿ ಜೀವನ ಕುರಿತು ಹಲವು ಸಿನಿಮಾಗಳು ಬಂದಿದೆ. ಈಗ ರೈತರ ಪರ ದನಿ ಎತ್ತುವ ಮೂಲಕ ರಣಹೇಡಿ ಎಂಬ ಚಿತ್ರ ಗಾಂಧಿನಗರದಲ್ಲಿ ಗಮನ ಸೆಳೆಯುತ್ತಿದೆ.
ಕಳೆದ ವಾರವಷ್ಟೇ ಬಿಡುಗಡೆಯಾಗಿದ್ದ ಚಿತ್ರ ರೈತಾಪಿ ಜನರಿಂದ ಮೆಚ್ಚುಗೆಗೆ ಪಾತ್ರವಾಗಿದೆ. ಸಂಪೂರ್ಣವಾಗಿ ಹಳ್ಳಿ ಸೊಗಡಿನಲ್ಲಿ ತಯಾರಾಗಿದ್ದ ಈ ಚಿತ್ರ ಕಮರ್ಷಿಯಲ್ ಆಗಿ ಕೂಡ ಸದ್ದು ಮಾಡಿತ್ತು. ಹಳ್ಳಿ ಜೀವನ, ಕಷ್ಟ, ದ್ವೇಷ, ಪ್ರೀತಿ, ಅಸೂಯೆ, ಎಲ್ಲದರ ಮೇಲೂ ಬೆಳಕು ಚೆಲ್ಲಿದೆ.
ಒಳ್ಳೆಯ ಕಥೆ ಇಟ್ಟುಕೊಂಡು ಸಿನಿಮಾ ಮಾಡಬೇಕು ಎನ್ನುವ ನಿರ್ದೇಶಕರ ಆಸೆ ಈ ಮೂಲಕ ಈಡೇರಿದೆ. ರಣಹೇಡಿ ಎಂದು ಹೆಸರಿಟ್ಟು ರೈತರ ಪರ ಸಿನಿಮಾ ಎಂದರೆ ಹೇಗೆ ಎಂಬ ಸಿನಪ್ರಿಯರಲ್ಲಿ ಕಾಡಬಹುದು. ಆದರೆ, 'ರೈತ ರಣಹೇಡಿಯಲ್ಲ ಅವನು ಯೋಧ' ಎಂದು ಚಿತ್ರದಲ್ಲಿ ತೋರಿಸಲಾಗಿದೆ. ಇದು ಸಿನಿಮಾದ ಪ್ರಮುಖ ಶಕ್ತಿ ಮತ್ತು ಆಕರ್ಷಣೆ ಎಂದು ಹೇಳಬಹುದು.
ಹಳ್ಳಿ ಸೊಗಡಿನ 'ರಣಹೇಡಿ' ಸಿನಿಮಾ ಈ ವಾರ ತೆರೆಗೆ
ಅಂದ್ಹಾಗೆ, ಈ ಚಿತ್ರವನ್ನು ಮನು ಕೆ ಶೆಟ್ಟಿಹಳ್ಳಿ ನಿರ್ದೇಶನ ಮಾಡಿದ್ದಾರೆ. ಕರ್ಣ ಕುಮಾರ್ ಸಿನಿಮಾದ ನಾಯಕನಾಗಿದ್ದಾರೆ. ಈಗಾಗಲೇ ಅನೇಕ ಸಿನಿಮಾಗಳಲ್ಲಿ ಖಳನಾಯಕ, ಪೋಷಕ ಪಾತ್ರದಲ್ಲಿ ನಟಿಸಿದ್ದ ಕರ್ಣ ಕುಮಾರ್ ಇಲ್ಲಿ ಹೀರೋ ಆಗಿದ್ದಾರೆ.
ಕರ್ಣ ಕುಮಾರ್ ಗೆ ಐಶ್ವರ್ಯ ರಾವ್ ಜೋಡಿಯಾಗಿದ್ದಾರೆ. ಈ ಹಿಂದೆ 'ರವಿ ಹಿಸ್ಟರಿ' ಸಿನಿಮಾದಲ್ಲಿ ನಟಿಸಿದ್ದರು. ಇಲ್ಲಿ ಹಳ್ಳಿ ಹುಡುಗಿ ಪಾತ್ರವನ್ನು ನಿರ್ವಹಿಸಿದ್ದಾರೆ. ಡಿ ಗ್ಲಾಮರ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಅಚ್ಚುತ್ ಕುಮಾರ್, ವಿ ಮನೋಹರ್, ಗಿರಿ ಚಿತ್ರದ ಪಾತ್ರಗಳಲ್ಲಿ ನಟಿಸಿದ್ದಾರೆ. ಸುರೇಶ್ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ.