Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೆನ್ಸಾರ್ ನಲ್ಲಿ ಕ್ಲೀನ್ ಚಿಟ್ ಪಡೆದು ರನ್ ಮಾಡಲು ತಯಾರಾದ 'ಆಂಟನಿ'
ವಿನಯ್ ರಾಜ್ ಕುಮಾರ್ ಅಭಿಮಾನಿಗಳು ಈಗಿನಿಂದಲೇ ದಿನ ಲೆಕ್ಕ ಮಾಡಲು ಶುರು ಹಚ್ಚಿಕೊಂಡಿದ್ದಾರೆ. ಇದೇ ಶುಕ್ರವಾರ (ಜುಲೈ 8) ದಂದು 'ರನ್ ಆಂಟನಿ' ತೆರೆ ಕಾಣುತ್ತಿದೆ. ಎರಡನೇ ಸಿನಿಮಾದ ಮೇಲೆ ಎಲ್ಲರೂ ಬಹಳ ನಿರೀಕ್ಷೆ ಇಟ್ಟುಕೊಂಡಿರುವುದರಿಂದ ಸಹಜವಾಗಿ ವಿನಯ್ ರಾಜ್ ಕುಮಾರ್ ಅವರು ಕೂಡ ಕೊಂಚ ಜಾಸ್ತಿ ಎಕ್ಸೈಟ್ ಆಗಿದ್ದಾರೆ.
ಇದೀಗ ಸೆನ್ಸಾರ್ ಮಂಡಳಿ ಕೂಡ ಚಿತ್ರಕ್ಕೆ ಯಾವುದೇ ಕತ್ತರಿ ಪ್ರಯೋಗ ಮಾಡದೇ 'ಯು' ಪ್ರಮಾಣ ಪತ್ರ ನೀಡುವ ಮೂಲಕ ಚಿತ್ರ ಬಿಡುಗಡೆ ಮಾಡಲು ಅನುಮತಿ ನೀಡಿದೆ. ವಿಶೇಷ ಅಂದ್ರೆ ಇದೇ ಮೊದಲ ಬಾರಿಗೆ ಕನ್ನಡ ಚಿತ್ರವೊಂದು ಯಾವುದೇ ಕಟ್ಸ್ ಇಲ್ಲದೇ ಕ್ಲೀನ್ ಚಿಟ್ ಪಡೆದು ತೆರೆಗೆ ಅಪ್ಪಳಿಸುತ್ತಿದೆ.['ಸುಮ್ಮನೆ' ಹಾಡು ಕೇಳಿ ಹಾಗೆ ಒಮ್ಮೆ ಕಳೆದು ಹೋಗಿ]
ಈಗಾಗಲೇ ಥಿಯೇಟರ್ ಲಿಸ್ಟ್ ಕೂಡ ಬಿಡುಗಡೆ ಆಗಿದ್ದು, ಇದೇ ಶುಕ್ರವಾರ ಬೆಂಗಳೂರಿನ ಮುಖ್ಯ ಚಿತ್ರಮಂದಿರ ಕಪಾಲಿ ಸೇರಿದಂತೆ ಇಡೀ ಕರ್ನಾಟಕದ ಹಲವು ಚಿತ್ರಮಂದಿರಗಳಲ್ಲಿ 'ರನ್ ಆಂಟನಿ' ಓಟ ಆರಂಭವಾಗಲಿದೆ.
ಅಂದಹಾಗೆ ರನ್ ಆಂಟನಿ ಚಿತ್ರತಂಡದವರು ವಿಭಿನ್ನವಾಗಿ ಚಿತ್ರದ ಪ್ರಮೋಷನ್ ಮಾಡಿದ್ದರು. ಈ ಮೊದಲು 'ಐರನ್' ಎಂಬ ವಿಭಿನ್ನ ಪ್ರೊಮೋಷನ್ ಮಾಡಿ ಸಾಕಷ್ಟು ಸುದ್ದಿ ಮಾಡಿದ್ದರು. ಈ ಪ್ರೊಮೋಷನ್ ನಲ್ಲಿ ಸ್ಯಾಂಡಲ್ ವುಡ್ ನ ನಟ-ನಟಿಯರು ಭಾಗವಹಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದರು.[ಜಗ್ಗೇಶ್, ಕಿಚ್ಚ, ಶಿವಣ್ಣಗೆ ಯಾರನ್ನ ಕಂಡ್ರೆ 'ಆಗಲ್ಲಾಂತ' ನಿಮಗ್ಗೊತ್ತಾ?]
ತದನಂತರ 'ರನ್ ಆಂಟನಿ ಮ್ಯಾರಥಾನ್' ಅಂತ ಇಡೀ ಚಿತ್ರತಂಡದವರು ಹಾಗೂ ನಟ ಕಮ್ ನಿರ್ಮಾಪಕ ರಾಘವೇಂದ್ರ ರಾಜ್ ಕುಮಾರ್ ಮತ್ತು ಮಂಗಳಾ ರಾಘವೇಂದ್ರ ರಾಜ್ ಕುಮಾರ್ ಅವರು ಕರ್ನಾಟಕದ ಮೂಲೆ-ಮೂಲೆಗೆ ಸಂಚರಿಸಿ ಚಿತ್ರದ ಪ್ರಮೋಷನ್ ಮಾಡಿದ್ದರು.[ಸ್ಯಾಂಡಲ್ ವುಡ್ ದಿಗ್ಗಜರ ಸಮಾಗಮದಲ್ಲಿ ಡ್ಯಾನ್ಸ್ ಡ್ಯಾನ್ಸ್]
ಒಟ್ನಲ್ಲಿ ಹಲವಾರು ವಿಶೇಷತೆಗಳನ್ನೊಳಗೊಂಡ 'ರನ್ ಆಂಟನಿ' ಚಿತ್ರದ ಮತ್ತೊಂದು ಸುಂದರವಾದ ರೋಮ್ಯಾಂಟಿಕ್ ಹಾಡು ಬಿಡುಗಡೆ ಆಗಿದೆ. ನಮ್ಮ ಕರ್ನಾಟಕದ ಬೀದರ್ ಕೋಟೆಗಳಲ್ಲಿ ಚಿತ್ರೀಕರಣ ಮಾಡಿದ್ದು, ವಿನಯ್ ರಾಜ್ ಕುಮಾರ್ ಮತ್ತು ನಟಿ ರುಕ್ಸಾರ್ ಕಾಣಿಸಿಕೊಂಡಿರುವ 'ಕಣ್ಣ ಕರೆಯೂ ಬಂದಿದೆ' ಎಂಬ ಮುದ್ದಾದ ವಿಡಿಯೋ ಸಾಂಗ್ ನೋಡ್ಕೊಂಡು ಎಂಜಾಯ್ ಮಾಡಿ.