Don't Miss!
- News ಲೋಕಸಭಾ ಚುನಾವಣೆ: ಮೈಸೂರು ಜಿಲ್ಲೆಯಲ್ಲಿ ಭದ್ರತೆಗೆ 5 ಸಾವಿರ ಪೊಲೀಸರ ನಿಯೋಜನೆ
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕಬೀರ' ಥಿಯೇಟರ್ ಗೆ ಬರೋ ದಿನಾಂಕ ಫಿಕ್ಸ್ ಆಯ್ತು.!
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ನಟಿ ಸನುಷಾ ಕಾಣಿಸಿಕೊಂಡಿರುವ ಐತಿಹಾಸಿಕ ಕಥೆಯಾಧರಿತ 'ಸಂತೆಯಲ್ಲಿ ನಿಂತ ಕಬೀರ' ತೆರೆಗೆ ಬರಲು ಸಜ್ಜಾಗಿದ್ದು, ಯಾವಾಗ ಬಿಡುಗಡೆ ಆಗುತ್ತೆ ಅಂತ ಶಿವಣ್ಣ ಅವರ ಅಭಿಮಾನಿಗಳು ಕಾತರದಿಂದ ಕಾದು ಕುಳಿತಿದ್ದರು.
ಇದೀಗ ಚಿತ್ರ ಬಿಡುಗಡೆಗೆ ಸರಿಯಾದ ಮುಹೂರ್ತ ಕೂಡಿಬಂದಿದ್ದು, ಇದೇ ತಿಂಗಳ ಕೊನೆಯಲ್ಲಿ ಅಂದರೆ ಜುಲೈ 29ಕ್ಕೆ ಗ್ರ್ಯಾಂಡ್ ಆಗಿ ಇಡೀ ಕರ್ನಾಟಕದಾದ್ಯಂತ ಚಿತ್ರ ತೆರೆಗೆ ಬರಲಿದೆ.[ರೋಚಕ, ಕೌತುಕ, ಮನಮೋಹಕ 'ಸಂತೆಯಲ್ಲಿ ನಿಂತ ಕಬೀರ' ಟ್ರೈಲರ್]
ನಿರ್ದೇಶಕ ಇಂದ್ರಬಾಬು ಅವರು ಆಕ್ಷನ್-ಕಟ್ ಹೇಳಿರುವ 'ಸಂತೆಯಲ್ಲಿ ನಿಂತ ಕಬೀರ' ಚಿತ್ರದಲ್ಲಿ ಸಂತ ಕಬೀರರ ದೋಹಾಗಳನ್ನು ಕೂಡ ಬಳಸಿಕೊಳ್ಳಲಾಗಿದೆ. ಚಿತ್ರದ ಹಾಡುಗಳು ಈಗಾಗಲೇ ಬಿಡುಗಡೆ ಆಗಿದ್ದು, ಒಳ್ಳೆ ರೆಸ್ಪಾನ್ಸ್ ಗಿಟ್ಟಿಸಿಕೊಂಡಿದೆ.
'ಶಿವ ಮೆಚ್ಚಿದ ಕಣ್ಣಪ್ಪ' ಚಿತ್ರದ ನಂತರ ಮತ್ತೆ ಸೆಂಚುರಿ ಸ್ಟಾರ್ ಶಿವಣ್ಣ ಅವರು ವಿಭಿನ್ನವಾಗಿ ಕಾಣಿಸಿಕೊಂಡು ತಮ್ಮ ಅಭಿಮಾನಿಗಳನ್ನು ರಂಜಿಸಲಿದ್ದಾರೆ. 'ಸಂತೆಯಲ್ಲಿ ನಿಂತ ಕಬೀರ' ಚಿತ್ರದಲ್ಲಿ ಇವರಿಗೆ ತಮಿಳು ನಟ ಶರತ್ ಕುಮಾರ್, ಅವಿನಾಶ್, ದತ್ತಣ್ಣ, ಅನಂತ್ ನಾಗ್ ಸೇರಿದಂತೆ ಹಲವರು ಸಾಥ್ ನೀಡಿದ್ದಾರೆ.[ಆಡಿಯೋ ವಿಮರ್ಶೆ: 'ಸಂತೆಯಲ್ಲಿ ನಿಂತ ಕಬೀರ' ಹಾಡುಗಳು ಸೂಪರ್]
ಭೀಷ್ಮ ಸಹಾನಿ ಅವರ ಮೂಲ ಹಿಂದಿ ನಾಟಕ 'ಕಬೀರ್ ಖಡಾ ಬಝಾರ್ ಮೇ', ಇದನ್ನು ಕನ್ನಡಕ್ಕೆ ಗೋಪಾಲ ವಾಜಪೇಯಿ ಅವರು 'ಸಂತ್ಯಾಗ ನಿಂತಾನ ಕಬೀರ' ಎಂದು ಅನುವಾದ ಮಾಡಿದ್ದರು. ಈ ನಾಟಕ ಇದೀಗ ಸಿನಿಮಾ ಆಗಿ ಜುಲೈ 29 ರಂದು ತೆರೆ ಮೇಲೆ ರಾರಾಜಿಸಲಿದೆ.[ಸೆನ್ಸಾರ್ ಪರೀಕ್ಷೆ ಎದುರಿಸಲು ತಯಾರಾದ 'ಸಂತೆಯಲ್ಲಿ ನಿಂತ ಕಬೀರ']