Don't Miss!
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- News karnataka Rain: ಬೆಂಗಳೂರಿನಲ್ಲಿ ಏ.23ರವರೆಗೆ ಮಳೆ- ಬೆಳಗಾವಿ ಮಂದಿಗೆ ಕುಂದಾ ಕೊಟ್ಟ ವರುಣ ಧಾರವಾಡ ಮಂದಿಗಿಂದು ಪೇಡಾ ಕೊಡ್ತಾನಾ?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಉಳಿದವರು ಕಂಡಂತೆ' ಚಿತ್ರಕ್ಕೆ ಅಲ್ಪಸ್ವಲ್ಪ ಬದಲಾವಣೆ
ಮಿಶ್ರ ಪ್ರತಿಕ್ರಿಯೆಗೆ ಪಾತ್ರವಾದ ರಕ್ಷಿತ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ 'ಉಳಿದವರು ಕಂಡಂತೆ' ಚಿತ್ರದಲ್ಲಿ ಅಲ್ಪಸ್ವಲ್ಪ ಬದಲಾವಣೆಗಳನ್ನು ಮಾಡಲಾಗಿದೆ. ಈಗ ಚಿತ್ರವನ್ನು ಸಬ್ ಟೈಟಲ್ ನಲ್ಲಿ ಪ್ರದರ್ಶಿಸಲಾಗುತ್ತಿದೆ. ಚಿತ್ರ ಸ್ವಲ್ಪ ಲ್ಯಾಗ್ ಆಗಿದೆ ಎಂಬ ವಿಮರ್ಶೆಗಳ ಹಿನ್ನೆಲೆಯಲ್ಲಿ 12 ನಿಮಿಷಗಳಷ್ಟು ಕಡಿತವನ್ನೂ ಮಾಡಲಾಗಿದೆ.
ಚಿತ್ರಕ್ಕೆ ಉಳಿದವರು ಎಳೆದಂತೆ ಎಂಬ ವಿಮರ್ಶೆಗಳು ವ್ಯಕ್ತವಾಗಿದ್ದನ್ನು ಸ್ಮರಿಸಬಹುದು. ಇನ್ನು ಚಿತ್ರಕ್ಕೆ ಸಬ್ ಟೈಟಲ್ ಇಡಲು ಕಾರಣ ಅಲ್ಲಲ್ಲಿ ಬಳಸಿರುವ ಮಂಗಳೂರು ಕನ್ನಡ ಹಾಗೂ ತುಳು ಭಾಷೆ. ಕೆಲವರು ಚಿತ್ರದ ಸಂಭಾಷಣೆ ಅಲ್ಲಲ್ಲಿ ಅರ್ಥ ಮಾಡಿಕೊಳ್ಳುವುದು ಕಷ್ಟ ಎಂದಿದ್ದರು. ['ಮಂಜಿನ ಹನಿ' ಕಣ್ಣಲ್ಲಿ 'ಉಳಿದವರು ಕಂಡಂತೆ']
ಕನ್ನಡದಲ್ಲಿ ಹೊಸ ತರಹದ ಚಿತ್ರಗಳು ಬರುತ್ತಿಲ್ಲ, ಅದೇ ಸವಕಲು ಕಥೆಗಳು ಎಂಬ ಮಾತುಗಳಿಗೆ 'ಉಳಿವರು ಕಂಡಂತೆ' ಚಿತ್ರ ಅಪಬಾದವಾಗಿದೆ. ಆದರೆ ಪ್ರೇಕ್ಷಕರು ಹೊಸದನ್ನು ಸ್ವೀಕರಿಸುವಲ್ಲಿ ಅಷ್ಟಾಗಿ ಉತ್ಸಾಹ ತೋರದಿರುವುದು ದುರಂತ.
ಚಿತ್ರದ ಪಾತ್ರವರ್ಗದಲ್ಲಿ ಶಂಕರ್ ಪೂಜಾರಿಯಾಗಿ ದಿನೇಶ್ ಮಂಗಳೂರು, ರತ್ನಕ್ಕಳಾಗಿ ತಾರಾ, ಮುನ್ನಾ ಪಾತ್ರದಲ್ಲಿ ಕಿಶೋರ್, ರಿಚಿ ಪಾತ್ರದಲ್ಲಿ ರಕ್ಷಿತ್ ಶೆಟ್ಟಿ, ರಿಶಬ್ ಆಗಿ ರಘು, ಬಾಲು ಪಾತ್ರದಲ್ಲಿ ಅಚ್ಯುತ ಕುಮಾರ್, ಶಾರದಾ ಪಾತ್ರದಲ್ಲಿ ಯಜ್ಞಾ ಶೆಟ್ಟಿ ಹಾಗೂ ರೆಜೀನಾ ಪಾತ್ರದಲ್ಲಿ ಶೀತಲ್ ಶೆಟ್ಟಿ ಅಭಿನಯಿಸಿದ್ದಾರೆ. (ಒನ್ಇಂಡಿಯಾ ಕನ್ನಡ)