ದೇಸಾಯಿ ಬಿಟ್ಟ ಪೋಸ್ಟರ್ ಗಳ ಹಿಂದಿನ ಅರ್ಥ ಏನು?
ಕನ್ನಡ ಚಿತ್ರರಂಗದ ಹಿರಿಯ ಹಾಗೂ ಪ್ರತಿಭಾವಂತ ನಿರ್ದೇಶಕರ ಪೈಕಿ ಒಬ್ಬರು ಸುನೀಲ್ ಕುಮಾರ್ ದೇಸಾಯಿ. ಎಲ್ಲ ಬಗೆಯ ಸಿನಿಮಾಗಳನ್ನು ಮಾಡುವ ಇವರು ಸಸ್ಪೆನ್ಸ್ ಚಿತ್ರಗಳನ್ನು ಮಾಡುವುದರಲ್ಲಿ ಎತ್ತಿದ ಕೈ. ಇದೀಗ ದೇಸಾಯಿ ಹೊಸ ಸಿನಿಮಾ ಮೂಲಕ ಬಂದಿದ್ದಾರೆ.
ಸದ್ಯ ದೇಸಾಯಿ ಅವರು 'ಉದ್ಘರ್ಷ' ಸಿನಿಮಾವನ್ನು ಮಾಡುತ್ತಿದ್ದಾರೆ. ಈ ಚಿತ್ರದ ಪೋಸ್ಟರ್ ಈಗಾಗಲೇ ರಿಲೀಸ್ ಆಗಿದ್ದು, ಎಲ್ಲರ ಗಮನ ಸೆಳೆಯುವಂತೆ ಮಾಡಿತ್ತು. ಹುಡುಗಿಯೊಬ್ಬಳ ಕಾಲು ತೋರಿಸಿ ಚಿತ್ರದ ಬಗ್ಗೆ ಕುತೂಹಲ ಹುಟ್ಟುವಂತೆ ಮಾಡಿದ್ದರು.
ಕಾಲುಗಳ ನಂತರ ಈಗ ಕೈಗಳನ್ನು ದೇಸಾಯಿ ತೋರಿಸಿದ್ದಾರೆ. ಸದ್ಯ ಸಿನಿಮಾದ ಎರಡನೇ ಪೋಸ್ಟರ್ ರಿಲೀಸ್ ಆಗಿದ್ದು, ಈ ಪೋಸ್ಟರ್ ಕೂಡ ಪ್ರೇಕ್ಷಕರ ಮನಸ್ಸಿನಲ್ಲಿ ಪ್ರಶ್ನೆ ಮೂಡಿಸಿದೆ.

ವಿಶೇಷ ಅಂದರೆ, 10 ನಿಮಿಷದಲ್ಲಿ ನಡೆಯೋ ಘಟನೆಯನ್ನ ಆಧಾರಿಸಿ ಈ ಸಿನಿಮಾ ಮಾಡಲಾಗಿದೆ. ಇಡೀ ಚಿತ್ರದಲ್ಲಿ ಕೇವಲ 20 ನಿಮಿಷದ ಡೈಲಾಗ್ಸ್ ಮಾತ್ರ ಇದೆ.

ಉಳಿದಂತೆ, ಠಾಕೂರ್ ಅನೂಪ್ ಸಿಂಗ್, ತಾನ್ಯ ಹೋಪ್, ಧನ್ಸಿಕಾ, ಬಾಹುಬಲಿ ಖ್ಯಾತಿಯ ಪ್ರಭಾಕರ್, ಶ್ರದ್ಧಾ ದಾಸ್, ಕಬೀರ್ ಸಿಂಗ್ ದುಹಾನ್, ಹರ್ಷಿಕಾ ಪೂಣಚ್ಚ ಸೇರಿದಂತೆ ಅನೇಕರು ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.


Click it and Unblock the Notifications











