Don't Miss!
- Automobiles ಓಲಾ ಎಸ್ 1 ಪ್ರೋ VS ಏಥರ್ 450X: ಮದಗಜಗಳ ಹಣಾಹಣಿಯಲ್ಲಿ ಯಾರು ಬೆಸ್ಟ್?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- News Government Employees; ಸರ್ಕಾರಿ ನೌಕರರ ಜೀವ ವಿಮೆ ಪಾಲಿಸಿ ಅವಧಿ ಏರಿಕೆ
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಒರಟ ಐ ಲವ್ ಯು' ಖ್ಯಾತಿಯ ಸಂಗೀತ ನಿರ್ದೇಶಕ ಶಂಕರ್ ನಿಧನ
ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ವರ್ಷಗಳಿಂದ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ ಜಿ.ಆರ್.ಶಂಕರ್ ನಿನ್ನೆ ನಿಧನ ಹೊಂದಿದ್ದಾರೆ. ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಅವರು ನಿನ್ನೆ ಮೃತರಾದರು.
2007ರಲ್ಲಿ ಬಿಡುಗಡೆಯಾದ 'ಒರಟ ಐ ಲವ್ ಯು' ಸಿನಿಮಾದ ಮೂಲಕ ತಮ್ಮ ಚಿತ್ರ ಜೀವನ ಶುರು ಮಾಡಿದ ಶಂಕರ್ ಬಳಿಕ ಸಾಕಷ್ಟು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಕಾಶೀನಾಥ್ ಪುತ್ರ ಅಭಿ ನಟನೆಯ 'ಬಾಜಿ', ಶ್ರೀ ಮುರಳಿ ಅಭಿನಯದ 'ಸಿಹಿಗಾಳಿ', ಲೂಸ್ ಮಾದ ಯೋಗೀಶ್ ಅವರ 'ಮಿಸ್ಟರ್ ಪೈಂಟರ್', 'ಚಿರಾಯು' ಹಾಗೂ 'ಮೇಸ್ತ್ರಿ ಸೇರಿದಂತೆ ಹದಿನಾಲ್ಕು ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ.
ಇವರ ಸಂಗೀತ ನಿರ್ದೇಶನದಲ್ಲಿ ಬಂದ 'ಒರಟ ಐ ಲವ್ ಯು' ಸಿನಿಮಾದ ಹಾಡುಗಳು ಹಿಟ್ ಆಗಿದ್ದವು. ಇದೇ ಚಿತ್ರ ಮುಂದೆ ಒಂದಷ್ಟು ಅವಕಾಶಗಳು ಬರಲು ಸಹಾಯ ಮಾಡಿತ್ತು. 2016ರಲ್ಲಿ ಬಂದ 'ಬರ್ತ್' ಸಿನಿಮಾ ಇವರ ಕೊನೆಯ ಸಿನಿಮಾವಾಗಿದೆ
ನೆಲಮಂಗಲದ ದಾಸನಪುರದ ನಿವಾಸಿಯಾಗಿದ್ದ ಶಂಕರ್ ತಮ್ಮ ಪತ್ನಿ ಹಾಗು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅವರ ಮೃತದೇಹದ ಅಂತ್ಯ ಸಂಸ್ಕಾರ ಇಂದು ದಾಸನಪುರದಲ್ಲಿ ನಡೆಯಲಿದೆ.