Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಒರಟ ಐ ಲವ್ ಯು' ಖ್ಯಾತಿಯ ಸಂಗೀತ ನಿರ್ದೇಶಕ ಶಂಕರ್ ನಿಧನ
ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ವರ್ಷಗಳಿಂದ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ ಜಿ.ಆರ್.ಶಂಕರ್ ನಿನ್ನೆ ನಿಧನ ಹೊಂದಿದ್ದಾರೆ. ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಅವರು ನಿನ್ನೆ ಮೃತರಾದರು.
2007ರಲ್ಲಿ ಬಿಡುಗಡೆಯಾದ 'ಒರಟ ಐ ಲವ್ ಯು' ಸಿನಿಮಾದ ಮೂಲಕ ತಮ್ಮ ಚಿತ್ರ ಜೀವನ ಶುರು ಮಾಡಿದ ಶಂಕರ್ ಬಳಿಕ ಸಾಕಷ್ಟು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಕಾಶೀನಾಥ್ ಪುತ್ರ ಅಭಿ ನಟನೆಯ 'ಬಾಜಿ', ಶ್ರೀ ಮುರಳಿ ಅಭಿನಯದ 'ಸಿಹಿಗಾಳಿ', ಲೂಸ್ ಮಾದ ಯೋಗೀಶ್ ಅವರ 'ಮಿಸ್ಟರ್ ಪೈಂಟರ್', 'ಚಿರಾಯು' ಹಾಗೂ 'ಮೇಸ್ತ್ರಿ ಸೇರಿದಂತೆ ಹದಿನಾಲ್ಕು ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ.
ಇವರ ಸಂಗೀತ ನಿರ್ದೇಶನದಲ್ಲಿ ಬಂದ 'ಒರಟ ಐ ಲವ್ ಯು' ಸಿನಿಮಾದ ಹಾಡುಗಳು ಹಿಟ್ ಆಗಿದ್ದವು. ಇದೇ ಚಿತ್ರ ಮುಂದೆ ಒಂದಷ್ಟು ಅವಕಾಶಗಳು ಬರಲು ಸಹಾಯ ಮಾಡಿತ್ತು. 2016ರಲ್ಲಿ ಬಂದ 'ಬರ್ತ್' ಸಿನಿಮಾ ಇವರ ಕೊನೆಯ ಸಿನಿಮಾವಾಗಿದೆ
ನೆಲಮಂಗಲದ ದಾಸನಪುರದ ನಿವಾಸಿಯಾಗಿದ್ದ ಶಂಕರ್ ತಮ್ಮ ಪತ್ನಿ ಹಾಗು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅವರ ಮೃತದೇಹದ ಅಂತ್ಯ ಸಂಸ್ಕಾರ ಇಂದು ದಾಸನಪುರದಲ್ಲಿ ನಡೆಯಲಿದೆ.