Don't Miss!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- News ಅಮಿತ್ ಶಾ ಓರ್ವ ಗೂಂಡಾ, ರೌಡಿ.! ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ
- Automobiles Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಒರಟ ಐ ಲವ್ ಯು' ಖ್ಯಾತಿಯ ಸಂಗೀತ ನಿರ್ದೇಶಕ ಶಂಕರ್ ನಿಧನ
ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ವರ್ಷಗಳಿಂದ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ ಜಿ.ಆರ್.ಶಂಕರ್ ನಿನ್ನೆ ನಿಧನ ಹೊಂದಿದ್ದಾರೆ. ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಅವರು ನಿನ್ನೆ ಮೃತರಾದರು.
2007ರಲ್ಲಿ ಬಿಡುಗಡೆಯಾದ 'ಒರಟ ಐ ಲವ್ ಯು' ಸಿನಿಮಾದ ಮೂಲಕ ತಮ್ಮ ಚಿತ್ರ ಜೀವನ ಶುರು ಮಾಡಿದ ಶಂಕರ್ ಬಳಿಕ ಸಾಕಷ್ಟು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಕಾಶೀನಾಥ್ ಪುತ್ರ ಅಭಿ ನಟನೆಯ 'ಬಾಜಿ', ಶ್ರೀ ಮುರಳಿ ಅಭಿನಯದ 'ಸಿಹಿಗಾಳಿ', ಲೂಸ್ ಮಾದ ಯೋಗೀಶ್ ಅವರ 'ಮಿಸ್ಟರ್ ಪೈಂಟರ್', 'ಚಿರಾಯು' ಹಾಗೂ 'ಮೇಸ್ತ್ರಿ ಸೇರಿದಂತೆ ಹದಿನಾಲ್ಕು ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ.
ಇವರ ಸಂಗೀತ ನಿರ್ದೇಶನದಲ್ಲಿ ಬಂದ 'ಒರಟ ಐ ಲವ್ ಯು' ಸಿನಿಮಾದ ಹಾಡುಗಳು ಹಿಟ್ ಆಗಿದ್ದವು. ಇದೇ ಚಿತ್ರ ಮುಂದೆ ಒಂದಷ್ಟು ಅವಕಾಶಗಳು ಬರಲು ಸಹಾಯ ಮಾಡಿತ್ತು. 2016ರಲ್ಲಿ ಬಂದ 'ಬರ್ತ್' ಸಿನಿಮಾ ಇವರ ಕೊನೆಯ ಸಿನಿಮಾವಾಗಿದೆ
ನೆಲಮಂಗಲದ ದಾಸನಪುರದ ನಿವಾಸಿಯಾಗಿದ್ದ ಶಂಕರ್ ತಮ್ಮ ಪತ್ನಿ ಹಾಗು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅವರ ಮೃತದೇಹದ ಅಂತ್ಯ ಸಂಸ್ಕಾರ ಇಂದು ದಾಸನಪುರದಲ್ಲಿ ನಡೆಯಲಿದೆ.