Don't Miss!
- Technology ಇಂದು 3D ಕರ್ವ್ಡ್ ಡಿಸ್ಪ್ಲೇ ಇರುವ ಈ ಫೋನಿನ ಸೇಲ್!..ಆಫರ್ ಬೆಲೆ ಎಷ್ಟು?
- Automobiles ಮತ್ತೆ ಅಖಾಡಕ್ಕೆ ಅಮೇರಿಕನ್ ಆಫ್ರೋಡ್ ಕಿಂಗ್: 2024 ಜೀಪ್ ರಾಂಗ್ಲರ್ ಫೇಸ್ಲಿಫ್ಟ್ ರಿವ್ಯೂ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹರಿಕೃಷ್ಣ ಬರ್ತ್ ಡೇ : ದರ್ಶನ್ ಸೇರಿದಂತೆ ಅನೇಕರ ಶುಭಾಶಯ ಹೀಗಿವೆ
ಕನ್ನಡದ ಸ್ಟಾರ್ ಮ್ಯೂಸಿಕ್ ಡೈರೆಕ್ಟರ್ ಆಗಿರುವ ವಿ ಹರಿಕೃಷ್ಣ ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿ ಇದ್ದಾರೆ. ಬರ್ತ್ ಡೇ ಖುಷಿಯಲ್ಲಿ ಇರುವ ಈ ಸ್ವರ ಸಂಪನ್ನನಿಗೆ ಶುಭಾಶಯಗಳು ಹರಿದುಬರುತ್ತಿವೆ.
ನಟ ದರ್ಶನ್ ಬಳಗದಲ್ಲಿ ಗುರುತಿಸಿಕೊಂಡ ಹರಿಕೃಷ್ಣ 'ಜೊತೆ ಜೊತೆಯಲ್ಲಿ' ಸಿನಿಮಾದ ಮೂಲಕ ತಮ್ಮ ಸಂಗೀತ ಯಾತ್ರೆ ಶುರು ಮಾಡಿದರು. ಆ ಬಳಿಕ ಸಾಕಷ್ಟು ಸೂಪರ್ ಹಿಟ್ ಹಾಡುಗಳನ್ನು ನೀಡಿ ಹೊಸ ಟ್ರೆಂಡ್ ಶುರು ಮಾಡಿದರು.
ಈಗಾಗಲೇ, ಹರಿಕೃಷ್ಣ ನೂರಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ. ಎಷ್ಟೋ ನಿರ್ದೇಶಕರ ನೆಚ್ಚಿನ ಮ್ಯೂಸಿಕ್ ಡೈರೆಕ್ಟರ್ ಆಗಿದ್ದಾರೆ.
ಅಂದಹಾಗೆ, ಹರಿಕೃಷ್ಣ ಅವರ ಹುಟ್ಟುಹಬ್ಬದ ದಿನ ನಟ ದರ್ಶನ್ ಹಾಗೂ ಕನ್ನಡದ ಕೆಲ ನಿರ್ದೇಶಕರು ತಮ್ಮ ಶುಭಾಶಯ ತಿಳಿಸಿದ್ದಾರೆ. ಮುಂದೆ ಓದಿ....
|
ದರ್ಶನ್ ಟ್ವೀಟ್
''14 ವರ್ಷಗಳಿಂದ ಕನ್ನಡ ಚಿತ್ರರಂಗಕ್ಕೆ ಸೂಪರ್ ಹಿಟ್ ಹಾಡುಗಳನ್ನು ನೀಡುತ್ತಾ ಬಂದಿರುವ ಹರಿಕೃಷ್ಣಗೆ ಹುಟ್ಟುಹಬ್ಬದ ಹಾರ್ಧಿಕ ಶುಭಾಷಯಗಳು'' ಎಂದು ದರ್ಶನ್ ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಶುಭಾಶಯ ತಿಳಿಸಿದ್ದಾರೆ. ದರ್ಶನ್ ಅವರ 20ಕ್ಕೂ ಹೆಚ್ಚು ಸಿನಿಮಾಗೆ ಹರಿಕೃಷ್ಣ ಸಂಗೀತ ನೀಡಿದ್ದಾರೆ.
|
ತರುಣ್ ಸುಧೀರ್ ಶುಭಾಶಯ
ನಿರ್ದೇಶಕ ತರುಣ್ ಸುಧೀರ್ ಕೂಡ ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಹರಿಕೃಷ್ಣ ಹಾಗೂ 'ರಾಂಬೋ 2' ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ಅವರಿಗೆ ಶುಭಾಶಯ ತಿಳಿಸಿದ್ದಾರೆ. ತರುಣ್ ನಿರ್ದೇಶನದ 'ಚೌಕ' ಚಿತ್ರದ 'ಅಲ್ಲಾಡ್ಸು ಅಲ್ಲಾಡ್ಸು..' ಹಾಡಿಗೆ ಹರಿ ಸಂಗೀತವಿದೆ.
ಚೇತನ್ ಕುಮಾರ್ ವಿಶ್
ನಿರ್ದೇಶಕ ಚೇತನ್ ಕುಮಾರ್ ಸಹ ತಮ್ಮ ಮೆಚ್ಚಿನ ಸಂಗೀತ ನಿರ್ದೇಶಕರಾದ ಹರಿಕೃಷ್ಣ ಅವರಿಗೆ ವಿಶ್ ಮಾಡಿದ್ದಾರೆ. ಚೇತನ್ ನಿರ್ದೇಶನದ 'ಬಹದ್ದೂರ್' ಹಾಗೂ 'ಭರ್ಜರಿ' ಎರಡೂ ಚಿತ್ರಕ್ಕೆ ಹರಿಕೃಷ್ಣ ಅವರೇ ಸಂಗೀತ ನೀಡಿದ್ದಾರೆ.
|
ಸ್ವರಗಳ ರಾಜಕುಮಾರ ಎಂದ ಸಂತೋಷ್
''ಸ್ವರಗಳ ರಾಜಕುಮಾರನಿಗೆ ಹಾಡುಗಳ ಯಜಮಾನನಿಗೆ ಹುಟ್ಟು ಹಬ್ಬದ ಶುಭಾಶಯಗಳು'' ಎಂದು ಸಂತೋಷ್ ಆನಂದ್ ರಾಮ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. 'ರಾಜಕುಮಾರ' ನಂತರ 'ಯುವರತ್ನ' ಸಿನಿಮಾದಲ್ಲಿ ಕೂಡ ಈ ಜೋಡಿ ಒಂದಾಗಿದೆ.
|
ಹರಿನಾಮ ಜಪಿಸಿದ ರಘು ರಾಮ್
''ಹರಿ ನಾಮವೇ ಚಂದ ,ಹರಿಕೃಷ್ಣನ ಹಾಡುಗಳೇ ಅಂದ, ತನ್ನ ಸ್ವರಗಳ ಗೂಡಿನಿಂದ, ವೈವಿಧ್ಯಮಯ ರಾಗಗಳನ್ನು ತಂದ ,ತಾಯಿ ಶಾರದೆಯ ಮುದ್ದಿನ ಕಂದನಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು'' ಎಂದು ನಿರ್ದೇಶಕ ರಘು ರಾಮ್ ತಮ್ಮ ಶುಭಾಶಯ ತಿಳಿಸಿದ್ದಾರೆ.
ಅಭಿಮಾನಿಗಳ ಶುಭ ಹಾರೈಕೆ
ಇವುಗಳ ಜೊತೆಗೆ ಸ್ಟಾರ್ ನಟರಾದ ದರ್ಶನ್, ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಸುದೀಪ್, ಯಶ್ ಅಭಿಮಾನಿಗಳು ಸೇರಿದಂತೆ ಸಾಕಷ್ಟು ನಟರ ಫ್ಯಾನ್ಸ್ ಸಾಮಾಜಿಕ ಜಾಲತಾಣಗಳಲ್ಲಿ ಹರಿಕೃಷ್ಣ ಅವರಿಗೆ ಶುಭಾಶಯ ತಿಳಿಸುತ್ತಿದ್ದಾರೆ.