Don't Miss!
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- News RCB vs KKR: ಕ್ರಿಕೆಟ್ ಪ್ರೇಮಿಗಳೇ... ಪ್ರಯಾಣಿಕರೇ ರಸ್ತೆಗಿಳಿಯುವ ಮುನ್ನ ಒಮ್ಮೆ ಗಮನಿಸಿ
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Automobiles Jonty Rhodes: ರಾಯಲ್ ಎನ್ಫೀಲ್ಡ್ ಬೈಕ್ಗಳಿಗೆ ಮನಸೋತ ದ.ಆಫ್ರಿಕಾ ಕ್ರಿಕೆಟರ್!
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Technology ಬಿಎಸ್ಎನ್ಎಲ್ ಗ್ರಾಹಕರಿಗೆ ಸಿಹಿಸುದ್ದಿ!..ಬಜೆಟ್ ದರದಲ್ಲಿ ಹೊಸ ಪ್ಲ್ಯಾನ್ ಲಾಂಚ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಪಡ್ಡೆ ಹುಲಿ' ಆಗಮನಕ್ಕೆ ಅರ್ಧ ಕೋಟಿ ಸುರಿದ ನಿರ್ಮಾಪಕರು
'ರಾಜಹುಲಿ', 'ರುದ್ರತಾಂಡವ' ಸಿನಿಮಾಗಳನ್ನ ನಿರ್ದೇಶನ ಮಾಡಿ ಕಮರ್ಷಿಯಲ್ ಆಗಿ ಸಕ್ಸಸ್ ಕಂಡಿದ್ದ ನಿರ್ದೇಶಕ ಗುರುದೇಶ್ ಪಾಂಡೆ ಗಾಂಧಿನಗರಕ್ಕೆ ಪಡ್ಡೆಹುಲಿಯನ್ನ ಪರಿಚಯಿಸುತ್ತಿದ್ದಾರೆ. ಈಗಾಗಲೇ ಎಲ್ಲರಿಗೂ ತಿಳಿದಿರುವಂತೆ ಕೆ ಮಂಜು ಅವರ ಪುತ್ರ ಶ್ರೇಯಸ್ ಪಡ್ಡೆಹುಲಿ ಸಿನಿಮಾ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.
ಶ್ರೇಯಸ್ ಅವರನ್ನ ಚಿತ್ರರಂಗಕ್ಕೆ ಪರಿಚಯಿಸುವ ಮೊದಲ ಚಿತ್ರದ ಪ್ರೋಮೋ ಚಿತ್ರೀಕರಣವನ್ನ ಆರಂಭ ಮಾಡಿದ್ದಾರೆ ನಿರ್ದೇಶಕ ಗುರುದೇಶ್ ಪಾಂಡೆ. ಚಿತ್ರದ ಪ್ರೋಮೊ ಶೂಟ್ ಗಾಗಿ 45 ರಿಂದ 50 ಲಕ್ಷ ರೂಪಾಯಿಗಳನ್ನು ಖಚು೯ ಮಾಡಲಾಗಿದೆ.
"ತೇಜಸ್ವಿನಿ ಎಂಟರ್ ಪ್ರೈಸಸ್" ಬ್ಯಾನರ್ ನಲ್ಲಿ ಎಂ. ರಮೇಶ್ ರವರು ಪಡ್ಡೆಹುಲಿ ಚಿತ್ರವನ್ನು ನಿಮಿ೯ಸುತ್ತಿದ್ದಾರೆ. ಪ್ರೋಮೋ ಚಿತ್ರೀಕರಣಕ್ಕಾಗಿ ಆರು ಸೆಟ್ ಗಳನ್ನ ಹಾಕಲಾಗಿದೆ. ಸಿನಿಮಾರಂಗಕ್ಕೆ ಬರುವ ಮುಂಚೆಯೇ ಎಲ್ಲಾ ರೀತಿಯ ತಯಾರಿ ಮಾಡಿಕೊಂಡಿರುವ ಶ್ರೇಯಸ್ ಯಾವುದೇ ಡ್ಯುಪ್ ಇಲ್ಲದೆ ಚಿತ್ರೀಕರಣದಲ್ಲಿ ಭಾಗಿ ಆಗುತ್ತಿದ್ದಾರೆ.
ಚಿತ್ರದ ಮಹೂರ್ತಕ್ಕಾಗಿ ತಯಾರಿ ಮಾಡಿಕೊಳ್ಳುತ್ತಿರುವ ಚಿತ್ರತಂಡ ಮಾಚ್೯ ಮೊದಲ ವಾರದಲ್ಲಿ ಚಿತ್ರೀಕರಣ ಪ್ರಾರಂಭಿಸಲಿದ್ದಾರೆ. ಅದಕ್ಕೂ ಮುನ್ನವಾಗಿ ಪಡ್ಡೆಹುಲಿಯ ಫಸ್ಟ್ ಲುಕ್ ರಿಲೀಸ್ ಮಾಡಲಿದ್ದಾರೆ.