Don't Miss!
- News Annamalai: ಒಂದು ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕಾಣೆಯಾಗಿದೆ: ಅಣ್ಣಾಮಲೈ ಆರೋಪ
- Sports Rishabh Pant: ಟಿ20 ವಿಶ್ವಕಪ್ಗೆ ರಿಷಭ್ ಪಂತ್ ಭಾರತ ತಂಡದಲ್ಲಿರಬೇಕು
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕವಿ, ಕಾದಂಬರಿಕಾರ ಎಂಎನ್ ವ್ಯಾಸರಾವ್ ಅಸ್ತಂಗತ
ನಾನು ಬ್ಯಾಂಕ್ ಉದ್ಯೋಗಿಯಾಗಿದ್ದಾಗ (1974) ಪುಟ್ಟಣ್ಣ ಕಣಗಾಲ್ರವರು 'ಲೆಕ್ಕದ ಮೇಲೆ' ಹಾಡು ಬರೆಯಲು ಕೇಳಿದರು. ಸನ್ನಿವೇಶ - ಇಷ್ಟವಿಲ್ಲದೆಯೂ ಇರಬೇಕಾದ ಮನೆಯಲ್ಲಿ ಎಲ್ಲಕ್ಕೂ ಲೆಕ್ಕವಿಟ್ಟು ಹಣ ಕೊಡುವೆನೆಂಬ ಮಹಿಳೆಗೆ ಆ ಮನೆಯಾತ ದ್ವಂದ್ವ ನಿವಾರಿಸುವುದು. ಪುಟ್ಟಣ್ಣ, ರವಿಯವರ ಜತೆ ಪ್ರಯಾಣದಲ್ಲಿ ಎಳನೀರು ಕುಡಿವಾಗ ನಡೆದ ಸಂಭಾಷಣೆ, ಪ್ರಕೃತಿ ಏನ್ ಲೆಕ್ಕ ಇಡತ್ತೆ ಸಾರ್? ಎಂದ ನನಗೆ 'ಬಿಡಿ ಬಂತು ಹಾಡು' ಎಂದರು ಪುಟ್ಟಣ್ಣ. ಆಗ ಮೂಡಿದ ಹಾಡೇ 'ನಾಕೊಂದ್ಲ ನಾಕು... ಇಷ್ಟೇ ಲೆಕ್ಕದ ನಂಟು'. ತಾಳ್ಮೆಯಿಂದ ಪ್ರೋತ್ಸಾಹಿಸಿ ರಾಗದ ಲೆಕ್ಕಾಚಾರ ತಿಳಿಸಿ ಮುನ್ನಡೆಸಿದರು. ಎಂದು ವಿಕ್ರಮ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಕವಿ ಎಂಎನ್ ವ್ಯಾಸರಾವ್ ಅವರು ಹಾಡು ಹುಟ್ಟಿದ ಕಥೆ ಹೇಳಿಕೊಂಡಿದ್ದರು.
'ಶುಭಮಂಗಳ' ಚಿತ್ರದಲ್ಲಿ ನಾಕ್ಲೊಂದ ನಾಕು, ನಾಕೆರಡ್ಲ ಎಂಟು ಹಾಡು ಬರೆದ ವ್ಯಾಸರಾವ್ ಅವರ ನೀ ಇಲ್ಲದೆ, ನನಗೇನಿದೆ.. ಭಾವಗೀತೆ ಜನಪ್ರಿಯ. ಭಾನುವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾದ ಕವಿಗೆ ಅಭಿಮಾನಿಗಳು ಅಶ್ರುತರ್ಪಣ ಸಲ್ಲಿಸಿದ್ದಾರೆ.
ಸಾಹಿತ್ಯ ಅಕಾಡೆಮಿ ಪ್ರಶಸ್ತಿಯೂ ಸೇರಿದಂತೆ ಕೆಂಪೇಗೌಡ, ಸ್ವರಮಂದಾರ, ಆರ್ಯಭಟ ಪ್ರಶಸ್ತಿ ವಿಜೇತ ಸೃಜನಶೀಲ ಕವಿ ಬಾರದ ಲೋಕಕ್ಕೆ ಪ್ರಯಾಣಿಸಿದ್ದಾರೆ..