ಕೊರೊನಾ ಸೋಂಕಿಗೆ ಬಲಿಯಾದ ಚಂದನವನದ ಯುವ ನಟ, ನಿರ್ಮಾಪಕ ಅರ್ಜುನ್ ಮಂಜುನಾಥ್
ಸ್ಯಾಂಡಲ್ ವುಡ್ ನ ಯುವ ನಟ ಮತ್ತು ನಿರ್ಮಾಪಕ ಅರ್ಜುನ್ ಮಂಜುನಾಥ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಕೆಮಿಸ್ಟ್ರಿ ಆಫ್ ಕರಿಯಪ್ಪ, ಸಂಯುಕ್ತ 2 ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಮಂಜುನಾಥ್ ಇಂದು ಕೊರೊನಾದಿಂದ ಮೃತಪಟ್ಟಿದ್ದಾರೆ.
ಸದ್ಯ '0% ಲವ್' ಸಿನಿಮಾ ನಿರ್ಮಾಣ ಮಾಡಿ ನಟಿಸುತ್ತಿದ್ದ ಅರ್ಜುನ್ ಮಂಜುನಾಥ್ ಸಿನಿಮಾ ಬಿಡುಗಡೆಗೂ ಮೊದಲೇ ಇಹಲೋಕ ತ್ಯಜಿಸಿದ್ದಾರೆ. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ ಸೋಂಕಿನಿಂದ ಅನೇಕರು ಬಲಿಯಾಗುತ್ತಿದ್ದಾರೆ.
ಕಳೆದ ವರ್ಷವೂ ಇದೇ ಸಮಯದಲ್ಲಿ ಕೊರೊನಾ ಹಾವಳಿ ಮಿತಿಮೀರಿತ್ತು. ಲಾಕ್ ಡೌನ್ ಇದ್ದರೂ ಸಹ ಕೊರೊನಾಗೆ ಅನೇಕರು ಬಲಿಯಾಗಿದ್ದರು. ಅನೇಕ ಸೆಲೆಬ್ರಿಟಿಗಳನ್ನು ಸಹ ಕೊರೊನಾ ಬಲಿ ಪಡೆದಿತ್ತು. ಹುಲಿವಾನ್ ಗಂಗಾಧರಯ್ಯ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕರು ಕೊರೊನಾದಿಂದ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ದಿನಕ್ಕೆ 10,000 ಕ್ಕೂ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗುತ್ತಿದ್ದು, ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ ಸೋಂಕಿನಿಂದ ಆತಂಕ ಸೃಷ್ಟಿಯಾಗಿದೆ. ಸೋಂಕಿತರು ಚಿಕಿತ್ಸೆಗಾಗಿ ಪರದಾಡುತ್ತಿದ್ದಾರೆ.


Click it and Unblock the Notifications











