Don't Miss!
- Automobiles ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೆವರೇಟ್ ಆಗುವುದು ಪಕ್ಕಾ!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- News Priyank Kharge Life Threat: ಎನ್ಕೌಂಟರ್ ಮಾಡುವುದಾಗಿ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ!
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊರೊನಾ ಸೋಂಕಿಗೆ ಬಲಿಯಾದ ಚಂದನವನದ ಯುವ ನಟ, ನಿರ್ಮಾಪಕ ಅರ್ಜುನ್ ಮಂಜುನಾಥ್
ಸ್ಯಾಂಡಲ್ ವುಡ್ ನ ಯುವ ನಟ ಮತ್ತು ನಿರ್ಮಾಪಕ ಅರ್ಜುನ್ ಮಂಜುನಾಥ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಕೆಮಿಸ್ಟ್ರಿ ಆಫ್ ಕರಿಯಪ್ಪ, ಸಂಯುಕ್ತ 2 ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಮಂಜುನಾಥ್ ಇಂದು ಕೊರೊನಾದಿಂದ ಮೃತಪಟ್ಟಿದ್ದಾರೆ.
ಸದ್ಯ '0% ಲವ್' ಸಿನಿಮಾ ನಿರ್ಮಾಣ ಮಾಡಿ ನಟಿಸುತ್ತಿದ್ದ ಅರ್ಜುನ್ ಮಂಜುನಾಥ್ ಸಿನಿಮಾ ಬಿಡುಗಡೆಗೂ ಮೊದಲೇ ಇಹಲೋಕ ತ್ಯಜಿಸಿದ್ದಾರೆ. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ ಸೋಂಕಿನಿಂದ ಅನೇಕರು ಬಲಿಯಾಗುತ್ತಿದ್ದಾರೆ.
ಕೋವಿಡ್ಗೆ ಸುನೇತ್ರ ಪಂಡಿತ್ ಸಹೋದರಿ ಬಲಿ: ಬಿಬಿಎಂಪಿಗೆ ತಿವಿದ ನಟಿ
ಕಳೆದ ವರ್ಷವೂ ಇದೇ ಸಮಯದಲ್ಲಿ ಕೊರೊನಾ ಹಾವಳಿ ಮಿತಿಮೀರಿತ್ತು. ಲಾಕ್ ಡೌನ್ ಇದ್ದರೂ ಸಹ ಕೊರೊನಾಗೆ ಅನೇಕರು ಬಲಿಯಾಗಿದ್ದರು. ಅನೇಕ ಸೆಲೆಬ್ರಿಟಿಗಳನ್ನು ಸಹ ಕೊರೊನಾ ಬಲಿ ಪಡೆದಿತ್ತು. ಹುಲಿವಾನ್ ಗಂಗಾಧರಯ್ಯ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕರು ಕೊರೊನಾದಿಂದ ಮೃತಪಟ್ಟಿದ್ದಾರೆ.
Recommended Video
ಬೆಂಗಳೂರಿನಲ್ಲಿ ದಿನಕ್ಕೆ 10,000 ಕ್ಕೂ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗುತ್ತಿದ್ದು, ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ ಸೋಂಕಿನಿಂದ ಆತಂಕ ಸೃಷ್ಟಿಯಾಗಿದೆ. ಸೋಂಕಿತರು ಚಿಕಿತ್ಸೆಗಾಗಿ ಪರದಾಡುತ್ತಿದ್ದಾರೆ.