Don't Miss!
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Lifestyle ಗ್ರಹಣ ಕಾಲದಲ್ಲಿ ಆಹಾರ ಸೇವಿಸಬಾರದೇಕೆ.? ಹಿರಿಯರ ವಾದವೇನು..?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊಡಗು ಜಿಲ್ಲೆಯ ಪ್ರವಾಹ ಪೀಡಿತರ ನೆರವಿಗೆ ಮುಂದಾದ ಚಂದನ್ ಶೆಟ್ಟಿ
ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದ್ದ ಕೊಡಗು ಇದೀಗ ನಿಮ್ಮೆಲ್ಲರ ಸಹಾಯಕ್ಕೆ ಕೈಚಾಚಿದೆ. ಕುಂಬದ್ರೋಣ ಮಳೆಗೆ ಕೊಡಗು ಜಿಲ್ಲೆ ಅಕ್ಷರಶಃ ನಲುಗಿಹೋಗಿದೆ. ಅತ್ತ ವರುಣ ಅಬ್ಬರಿಸುತ್ತಿದ್ದರೆ, ಇತ್ತ ಕೊಡಗಿನ ಗುಡ್ಡಗಳು ಕುಸಿಯುತ್ತಿವೆ. ಮನೆಗಳು ನೆಲಸಮವಾಗುತ್ತಿವೆ. ರಸ್ತೆಗಳು ಬಾಯಿ ಬಿಡುತ್ತಿವೆ. ನೂರಾರು ಮಂದಿ ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ.
ದೇಶಕ್ಕೆ ಅಪ್ರತಿಮ ಯೋಧರನ್ನು ಕೊಟ್ಟ ಕೊಡಗು ಜಿಲ್ಲೆಗೆ ವರುಣನ ವಕ್ರದೃಷ್ಟಿ ಬಿದ್ದಿದೆ. ಪರಿಣಾಮ ಜಿಲ್ಲೆಯ ಹಲವು ಗ್ರಾಮಗಳು ಜಲಾವೃತವಾಗಿದೆ. ಪ್ರವಾಹ ಪೀಡಿತರಿಗೆ ಈಗಾಗಲೇ ಹಲವಾರು ಮಂದಿ ಸಹಾಯ ಹಸ್ತ ಚಾಚಿದ್ದಾರೆ.
ಪ್ರವಾಹದಿಂದ ತೊಂದರೆಗೀಡಾಗಿರುವ ಕೊಡಗು ಹಾಗೂ ಇನ್ನಿತರ ಜಿಲ್ಲೆಯ ನೆರವಿಗೆ ಧಾವಿಸುವಂತೆ ಕನ್ನಡಿಗರಲ್ಲಿ ಕನ್ನಡದ ಖ್ಯಾತ Rapper ಚಂದನ್ ಶೆಟ್ಟಿ ಮನವಿ ಮಾಡಿದ್ದಾರೆ.
ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿ: ಚಂದನ್ ಶೆಟ್ಟಿ ಮನವಿ
''ಕೊಡಗು ಜಿಲ್ಲೆಯಲ್ಲಿ ಹಿಂದೆಂದೂ ಕಂಡರಿಯದ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈ ಸಮಯದಲ್ಲಿ ಅವರ ನೆರವಿಗೆ ನಾವು ನಿಲ್ಲಬೇಕು. ನಿಮ್ಮ ಕೈಲಾದ ಸಹಾಯವನ್ನು ಮಾಡಬೇಕು'' ಎಂದು ಚಂದನ್ ಶೆಟ್ಟಿ ಕರೆ ನೀಡಿದರು.
ತಮ್ಮ ಕಡೆಯಿಂದ ಅಗತ್ಯ ವಸ್ತುಗಳನ್ನು ಪ್ರವಾಹ ಸಂತ್ರಸ್ಥರಿಗೆ ತಲುಪಿಸಲು ಚಂದನ್ ಶೆಟ್ಟಿ ಮುಂದಾಗಿದ್ದಾರೆ. ಇಂದು ಮಡಿಕೇರಿ ಹಾಗೂ ಕೊಡಗು ಜಿಲ್ಲೆಯ ಗಂಜಿ ಕೇಂದ್ರಗಳಿಗೆ ಚಂದನ್ ಶೆಟ್ಟಿ ಭೇಟಿ ನೀಡಲಿದ್ದಾರೆ.
ಇನ್ನೂ ಕಿರುತೆರೆ ತಾರೆಯರಾದ ಆಶಿತಾ ಚಂದ್ರಪ್ಪ, ಕಿರಿಕ್ ಕೀರ್ತಿ, ಸೃಜನ್ ಲೋಕೇಶ್ ಕೂಡ ಪ್ರವಾಹ ಸಂತ್ರಸ್ತರಿಗೆ ನೆರವಾಗಲು ಜನತೆ ಬಳಿ ಮನವಿ ಮಾಡಿಕೊಂಡಿದ್ದಾರೆ.