Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸಾವಿತ್ರಿಬಾಯಿ ಫುಲೆ' ಯಾದ ನಟಿ ತಾರಾ
'ಹೆಬ್ಬೆಟ್ ರಾಮಕ್ಕ' ಸಿನಿಮಾ ಮೂಲಕ ಅದ್ಬುತ ನಟನೆ ಮಾಡಿ ಎಲ್ಲರ ಗಮನ ಸೆಳೆದಿದ್ದ ನಟಿ ತಾರಾ ಮತ್ತೊಂದು ವಿಶೇಷ ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ತಾರಾ ಅನುರಾಧ ಅಭಿನಯದ ಹೊಸ ಸಿನಿಮಾ 'ಸಾವಿತ್ರಿಬಾಯಿ ಫುಲೆ' ತೆರೆಗೆ ಬರಲು ಸಿದ್ದವಾಗಿದೆ.
ಭಾರತದ ಮೊಟ್ಟ ಮೊದಲ ಶಿಕ್ಷಕಿ, ದಮನಿತರ ಮೊದಲ ಧ್ವನಿ 'ಸಾವಿತ್ರಿಬಾಯಿ ಫುಲೆ' ಅವರ ಜೀವನ ಆಧಾರಿತ ಚಿತ್ರ ಇದಾಗಿದ್ದು, ವಿಶಾಲ್ ರಾಜ್ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಡಾ, ಸರಾಜೂ ಕಾಟ್ಕರ್ ಅವರ ಕಾದಂಬರಿ ಆಧರಿಸಿ ಚಿತ್ರಕ್ಕೆ ಕಥೆಯನ್ನು ಬರೆಯಲಾಗಿದೆ.
ಬಸವರಾಜು 'ಸಾವಿತ್ರಿಬಾಯಿ ಫುಲೆ' ಚಿತ್ರಕ್ಕೆ ಬಂಡವಾಳ ಹಾಕಿದ್ದು ಚಿತ್ರ ಮುಂದಿನ ತಿಂಗಳು ಆಗಸ್ಟ್ 10 ರಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಸಮಾಜದ ಮೇಲೆ ಪ್ರಭಾವ ಬೀರುವಂತಹ ಪಾತ್ರಗಳಿಗೆ ಜೀವ ತುಂಬಿರುವ ನಟಿ ತಾರಾ ಅಭಿನಯದ 'ಸಾವಿತ್ರಿಬಾಯಿ ಫುಲೆ' ಕೂಡ ಜನರ ಮನಸ್ಸು ಗೆಲ್ಲುವ ಸೂಚನೆ ಕೊಟ್ಟಿದೆ.
ನಟಿ ತಾರಾ ಜೊತೆಯಲ್ಲಿ ಸುಚೇಂದ್ರ ಪ್ರಸಾದ್ ಕೂಡ ಸಿನಿಮಾದ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರ ವಿಭಿನ್ನವಾಗಿರುವ ಪೋಸ್ಟರ್ ಬಿಡುಗಡೆ ಆಗಿದ್ದು ಇನ್ನು ಕೆಲವೇ ದಿನಗಳಲ್ಲಿ ಟ್ರೇಲರ್ ಕೂಡ ರಿಲೀಸ್ ಆಗಲಿದೆ.