Don't Miss!
- News ಆಕ್ಸಿಸ್ ಬ್ಯಾಂಕ್ಗೆ ಬರೋಬ್ಬರಿ 7,129 ಕೋಟಿ ರೂಪಾಯಿ ಲಾಭ!
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸಾವಿತ್ರಿಬಾಯಿ ಫುಲೆ' ಯಾದ ನಟಿ ತಾರಾ
'ಹೆಬ್ಬೆಟ್ ರಾಮಕ್ಕ' ಸಿನಿಮಾ ಮೂಲಕ ಅದ್ಬುತ ನಟನೆ ಮಾಡಿ ಎಲ್ಲರ ಗಮನ ಸೆಳೆದಿದ್ದ ನಟಿ ತಾರಾ ಮತ್ತೊಂದು ವಿಶೇಷ ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ತಾರಾ ಅನುರಾಧ ಅಭಿನಯದ ಹೊಸ ಸಿನಿಮಾ 'ಸಾವಿತ್ರಿಬಾಯಿ ಫುಲೆ' ತೆರೆಗೆ ಬರಲು ಸಿದ್ದವಾಗಿದೆ.
ಭಾರತದ ಮೊಟ್ಟ ಮೊದಲ ಶಿಕ್ಷಕಿ, ದಮನಿತರ ಮೊದಲ ಧ್ವನಿ 'ಸಾವಿತ್ರಿಬಾಯಿ ಫುಲೆ' ಅವರ ಜೀವನ ಆಧಾರಿತ ಚಿತ್ರ ಇದಾಗಿದ್ದು, ವಿಶಾಲ್ ರಾಜ್ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಡಾ, ಸರಾಜೂ ಕಾಟ್ಕರ್ ಅವರ ಕಾದಂಬರಿ ಆಧರಿಸಿ ಚಿತ್ರಕ್ಕೆ ಕಥೆಯನ್ನು ಬರೆಯಲಾಗಿದೆ.
ಬಸವರಾಜು 'ಸಾವಿತ್ರಿಬಾಯಿ ಫುಲೆ' ಚಿತ್ರಕ್ಕೆ ಬಂಡವಾಳ ಹಾಕಿದ್ದು ಚಿತ್ರ ಮುಂದಿನ ತಿಂಗಳು ಆಗಸ್ಟ್ 10 ರಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಸಮಾಜದ ಮೇಲೆ ಪ್ರಭಾವ ಬೀರುವಂತಹ ಪಾತ್ರಗಳಿಗೆ ಜೀವ ತುಂಬಿರುವ ನಟಿ ತಾರಾ ಅಭಿನಯದ 'ಸಾವಿತ್ರಿಬಾಯಿ ಫುಲೆ' ಕೂಡ ಜನರ ಮನಸ್ಸು ಗೆಲ್ಲುವ ಸೂಚನೆ ಕೊಟ್ಟಿದೆ.
ನಟಿ ತಾರಾ ಜೊತೆಯಲ್ಲಿ ಸುಚೇಂದ್ರ ಪ್ರಸಾದ್ ಕೂಡ ಸಿನಿಮಾದ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರ ವಿಭಿನ್ನವಾಗಿರುವ ಪೋಸ್ಟರ್ ಬಿಡುಗಡೆ ಆಗಿದ್ದು ಇನ್ನು ಕೆಲವೇ ದಿನಗಳಲ್ಲಿ ಟ್ರೇಲರ್ ಕೂಡ ರಿಲೀಸ್ ಆಗಲಿದೆ.