Don't Miss!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- News BMRCL: ಚಲ್ಲಘಟ್ಟ ಮೆಟ್ರೋ ನಿಲ್ದಾಣದ ಬಳಿ ಪಾದಚಾರಿ ಸೇತುವೆ ನಿರ್ಮಾಣ-ಪ್ರಯೋಜನೆಗಳೇನು ಹಾಗೂ ವೆಚ್ಚ ಎಷ್ಟು?
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Automobiles ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- Finance ಎಮರ್ಜೆನ್ಸಿ ಲೋನ್ ಅಂದ್ರೆ ಏನು, ಇದನ್ನು ಪಡೆದುಕೊಳ್ಳುವುದು ಹೇಗೆ ? ಇಲ್ಲಿದೆ ನೋಡಿ ಸುಲಭ ಉಪಾಯ
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಈ ವಾರ 'ಬೆಳ್ಳಿ ಹೆಜ್ಜೆ'ಯಲ್ಲಿ ಇರ್ತಾರಣ್ಣ 'ನೀರ್ ದೋಸೆ' ದತ್ತಣ್ಣ
ಕನ್ನಡ ಚಿತ್ರರಂಗ ಕಂಡ ಅದ್ಬುತ ಕಲಾವಿದ ಹೆಚ್.ಜೆ.ದತ್ತಾತ್ರೇಯ 'ದತ್ತಣ್ಣ' ಅಂತಲೇ ಜನಪ್ರಿಯ. 75 ವರ್ಷವಾಗಿದ್ದರೂ ಇನ್ನೂ ಯುವಕನಂತೆ ಉತ್ಸಾಹ ಹೊಂದಿರುವ ದತ್ತಣ್ಣನ ಬಗ್ಗೆ ಈಗ ಒಂದು ವಿಶೇಷ ಕಾರ್ಯಕ್ರಮ ನಡೆಯುತ್ತಿದೆ.
ಕರ್ನಾಟಕ ಚಲನಚಿತ್ರ ಅಕಾಡಮಿ ಪ್ರತಿ ವಾರ ಬೆಳ್ಳಿ ಹೆಜ್ಜೆ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದೆ. ಈ ವಾರ ಈ ಕಾರ್ಯಕ್ರಮ ದತ್ತಣ್ಣನ ವಿಶೇಷವಾಗಿದೆ. ಜುಲೈ 27 ರಂದು ಸಂಜೆ 5 ಗಂಟೆಗೆ ಬೆಂಗಳೂರಿನ ಗಾಂಧಿಭವನದಲ್ಲಿ ಈ ಸಮಾರಂಭ ನಡೆಯುತ್ತದೆ.
ನೀರ್ ದೋಸೆ 'ದತ್ತಣ್ಣ'ಗೆ 75 ವರ್ಷ ಆಯ್ತಣ್ಣಾ.!
ನಿರ್ದೇಶಕರಾದ ಟಿ.ಎಸ್.ನಾಗಭರಣ, ಶೇಷಾದ್ರಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಚಿನ್ನೇಗೌಡ, ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯ ಆಯುಕ್ತರಾದ ಡಾ ಪಿ.ಎಸ್.ಹರ್ಷ ಈ ವಾರದ ಬೆಳ್ಳಿ ಹೆಜ್ಜೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ರಂಗಭೂಮಿಯಿಂದ ಸಿನಿಮಾರಂಗಕ್ಕೆ ಕಾಲಿಟ್ಟ ದತ್ತಣ್ಣ 46 ವರ್ಷಗಳ ಕಾಲ ಕನ್ನಡ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ. 'ಆಸ್ಫೋಟ', 'ಶರವೇಗದ ಸರದಾರ', 'ಮಾಧುರಿ', 'ಚಿನ್ನಾರಿ ಮುತ್ತ', 'ಬೆಟ್ಟದ ಜೀವ', ಇತ್ತೀಚಿಗಿನ 'ನೀರ್ ದೋಸೆ', 'ರಾಜಕುಮಾರ' ಸೇರಿದಂತೆ 185 ಹೆಚ್ಚು ಸಿನಿಮಾಗಳನ್ನು ಮಾಡಿದ್ದಾರೆ.
ಉಳಿದಂತೆ, ಪೋಷಕ ನಟ ರಾಜ್ಯ ಪ್ರಶಸ್ತಿ (ಆಸ್ಫೋಟ), ಬೆಸ್ಟ್ ನಟ ರಾಜ್ಯ ಪ್ರಶಸ್ತಿ (ಮುನ್ನುಡಿ), ಪೋಷಕ ನಟ ರಾಷ್ಟ್ರ ಪ್ರಶಸ್ತಿ (ಮುನ್ನುಡಿ), ನಟನೆಗಾಗಿ ಎರಡು ಬಾರಿ ಸ್ಪೆಸಲ್ ಮೆನ್ಷನ್ ರಾಷ್ಟ್ರ ಪ್ರಶಸ್ತಿಗಳು ( ಮೌನಿ, ಭಾರತ್ ಸ್ಟೋರ್ಸ್ ), ಫೀಜಿ ಫಿಲಂ ಫೆಸ್ಟಿವಲ್ ನ ಬೆಸ್ಟ್ ಆಕ್ಟರ್ ಪ್ರಶಸ್ತಿ (ಭಾರತ್ ಸ್ಟೋರ್ಸ್) ಪ್ರಶಸ್ತಿ ಸೇರಿದಂತೆ ಸಾಕಷ್ಟು ಪ್ರಶಸ್ತಿಗಳು ದತ್ತಣ್ಣ ಅವರನ್ನ ಅರಸಿ ಬಂದಿವೆ.