ಸಂಕಷ್ಟದಲ್ಲಿ ಹಿರಿಯ ನಟ ವಿಶ್ವನಾಥ್: ಸಹಾಯಕ್ಕೆ ಮನವಿ

By ಫಿಲ್ಮ್ ಡೆಸ್ಕ್

ಬಹುಭಾಷಾ ನಟ, ಕನ್ನಡದ ಹಿರಿಯ ಕಲಾವಿದ ವಿಶ್ವನಾಥ್ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ವಿಶ್ವನಾಥ್ ಕುಟುಂಬ ಆರ್ಥಿಕ ಸಂಕಷ್ಟಕ್ಕೆ ಸಿಲುಕ್ಕಿದ್ದು, ಸಹಾಯ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

ವಿಶ್ವನಾಥ್, ಪುಟ್ಟಣ್ಣ ಕಣಗಾಲ್ ನಿರ್ದೇಶನದ 'ಪಡುವಾರಹಳ್ಳಿ ಪಾಂಡವರು' ಚಿತ್ರದ ಮುಖ್ಯ ಪಾತ್ರದಲ್ಲಿ ಬಣ್ಣ ಹಚ್ಚುವ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ನಂತರ 'ಚಲಿಸುವ ಮೋಡಗಳು' ಸಿನಿಮಾ ಸೇರಿದಂತೆ ಡಾ. ರಾಜ್‌ಕುಮಾರ್ ಜೊತೆ 5 ಸಿನಿಮಾಗಳಲ್ಲಿ ನಟಿಸಿ, ರಾಜ್ ಕುಮಾರ್ ರಿಂದ ಮೆಚ್ಚುಗೆ ಪಡೆದ ನಟ.

ಕನ್ನಡ ಮಾತ್ರವಲ್ಲದೆ ತಮಿಳಿನಲ್ಲಿ ಕೆ. ಬಾಲಚಂದರ್ ಅವರ ಸಿನಿಮಾಗಳಲ್ಲಿ ನಟಿಸಿದ್ದಾರೆ. ತೆಲುಗಿನ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ನಿರ್ದೇಶನದ, ನಾಗಾರ್ಜುನ ಅಭಿನಯದ 'ಶಿವ' ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿ ಖ್ಯಾತಿ ಪಡೆದಿದ್ದಾರೆ.

kannada-senior-actor-k-viswanath-seeks-for-helps

ಮಧುಮೇಹದಿಂದ ಬಳಲುತ್ತಿರುವ ವಿಶ್ವನಾಥ್ ಕಾಲಿಗೆ ಶಸ್ತ್ರ ಚಿಕಿತ್ಸೆ ಕೂಡ ಆಗಿದೆ. ವಿಜಯನಗರದ ಬಿ.ಜಿ.ಎಸ್ ಆಸ್ಪತ್ರೆಯಲ್ಲಿ ಸುಮಾರು 15 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯ ಚಿಕಿತ್ಸೆಗೆ ಸಾಕಷ್ಟು ಹಣದ ಅಗತ್ಯತೆಯಿದ್ದು ಕನ್ನಡ ಚಿತ್ರರಂಗದ ನಟರು ಹಾಗೂ ಕನ್ನಡದ ಪ್ರೇಕ್ಷಕರಲ್ಲಿ ನೆರವು ನೀಡುವಂತೆ ಕೋರಿದ್ದಾರೆ.

ಕೆ.ವಿಶ್ವನಾಥ್‌ ಅವರ ಖಾತೆ ವಿವರ- ಕೆ.ವಿಶ್ವನಾಥ್ a/c no: 0442010062749, IFSC code: 0000440

More from Filmibeat

English summary
Kannada Actor K.Viswanath is in poor condition. He seeks for helps.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X