Don't Miss!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಕಷ್ಟದಲ್ಲಿ ಹಿರಿಯ ನಟ ವಿಶ್ವನಾಥ್: ಸಹಾಯಕ್ಕೆ ಮನವಿ
ಬಹುಭಾಷಾ ನಟ, ಕನ್ನಡದ ಹಿರಿಯ ಕಲಾವಿದ ವಿಶ್ವನಾಥ್ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ವಿಶ್ವನಾಥ್ ಕುಟುಂಬ ಆರ್ಥಿಕ ಸಂಕಷ್ಟಕ್ಕೆ ಸಿಲುಕ್ಕಿದ್ದು, ಸಹಾಯ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.
ವಿಶ್ವನಾಥ್, ಪುಟ್ಟಣ್ಣ ಕಣಗಾಲ್ ನಿರ್ದೇಶನದ 'ಪಡುವಾರಹಳ್ಳಿ ಪಾಂಡವರು' ಚಿತ್ರದ ಮುಖ್ಯ ಪಾತ್ರದಲ್ಲಿ ಬಣ್ಣ ಹಚ್ಚುವ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ನಂತರ 'ಚಲಿಸುವ ಮೋಡಗಳು' ಸಿನಿಮಾ ಸೇರಿದಂತೆ ಡಾ. ರಾಜ್ಕುಮಾರ್ ಜೊತೆ 5 ಸಿನಿಮಾಗಳಲ್ಲಿ ನಟಿಸಿ, ರಾಜ್ ಕುಮಾರ್ ರಿಂದ ಮೆಚ್ಚುಗೆ ಪಡೆದ ನಟ.
ಕನ್ನಡ ಮಾತ್ರವಲ್ಲದೆ ತಮಿಳಿನಲ್ಲಿ ಕೆ. ಬಾಲಚಂದರ್ ಅವರ ಸಿನಿಮಾಗಳಲ್ಲಿ ನಟಿಸಿದ್ದಾರೆ. ತೆಲುಗಿನ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ನಿರ್ದೇಶನದ, ನಾಗಾರ್ಜುನ ಅಭಿನಯದ 'ಶಿವ' ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿ ಖ್ಯಾತಿ ಪಡೆದಿದ್ದಾರೆ.
ಮಧುಮೇಹದಿಂದ ಬಳಲುತ್ತಿರುವ ವಿಶ್ವನಾಥ್ ಕಾಲಿಗೆ ಶಸ್ತ್ರ ಚಿಕಿತ್ಸೆ ಕೂಡ ಆಗಿದೆ. ವಿಜಯನಗರದ ಬಿ.ಜಿ.ಎಸ್ ಆಸ್ಪತ್ರೆಯಲ್ಲಿ ಸುಮಾರು 15 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯ ಚಿಕಿತ್ಸೆಗೆ ಸಾಕಷ್ಟು ಹಣದ ಅಗತ್ಯತೆಯಿದ್ದು ಕನ್ನಡ ಚಿತ್ರರಂಗದ ನಟರು ಹಾಗೂ ಕನ್ನಡದ ಪ್ರೇಕ್ಷಕರಲ್ಲಿ ನೆರವು ನೀಡುವಂತೆ ಕೋರಿದ್ದಾರೆ.
ಕೆ.ವಿಶ್ವನಾಥ್ ಅವರ ಖಾತೆ ವಿವರ- ಕೆ.ವಿಶ್ವನಾಥ್ a/c no: 0442010062749, IFSC code: 0000440