Don't Miss!
- Finance mukesh ambaniಗೆ 67 ವರ್ಷ, ಅವರು ಹೊಂದಿರುವ ದುಬಾರಿ ವಸ್ತುಗಳು ಏನೇನು ಗೊತ್ತಾ?
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಿರಿಯ ಕಲಾವಿದ ಸದಾಶಿವ ಬ್ರಹ್ಮಾವರ್ ವಿಧಿವಶ
Recommended Video
ವಯಸ್ಸಾದ ತಂದೆ, ಸ್ವಾತಂತ್ರ್ಯ ಹೋರಾಟಗಾರ, ಬಡ ಮೇಷ್ಟ್ರು, ಅಸಹಾಯಕ ಅಜ್ಜ, ದೇವಸ್ಥಾನದ ಪೂಜಾರಿ, ನೀತಿ ಪಾಠ ಹೇಳುವ ಪ್ರಾಮಾಣಿಕ ರಾಜಕಾರಣಿ.. ಹೀಗೆ ಬಹುತೇಕ ಎಲ್ಲ ಪಾತ್ರಗಳಿಗೂ ಜೀವ ತುಂಬುತ್ತಿದ್ದ ಕಲಾವಿದ ಸದಾಶಿವ ಬ್ರಹ್ಮಾವರ್ ವಿಧಿವಶರಾಗಿದ್ದಾರೆ.
ಮನೆ, ಮಕ್ಕಳನ್ನ ಬಿಟ್ಟು ಸದಾಶಿವ ಬ್ರಹ್ಮಾವರ್ ಸಂಕಷ್ಟದ ಸ್ಥಿತಿಯಲ್ಲಿದ್ದಾರೆ ಎಂದು ಕಳೆದ ವರ್ಷ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ನಂತರ ಮನೆಯವರ ಜೊತೆ ಮನೆಗೆ ತೆರಳಿದ ಬ್ರಹ್ಮಾವರ್ ಅವರ ಬಗ್ಗೆ ಇಂದು ಸಾವಿನ ಸುದ್ದಿ ಬಂದು ತಲುಪಿದೆ.
ಬೀದಿಪಾಲಾಗಿದ್ದ ಹಿರಿಯ ನಟನಿಗೆ ಕಿಚ್ಚ ಸುದೀಪ್ ನೆರವು
ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಬ್ರಹ್ಮಾವರ್ ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರಂತೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ (ಸೆಪ್ಟೆಂಬರ್ 19) ಮಧ್ಯಾಹ್ನ ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಸಾವಿನ ಸುದ್ದಿಯನ್ನ ಕುಟುಂಬದವರಿಗೆ ಹೊರತು ಬೇರೆ ಯಾರಿಗೂ ಗೊತ್ತಾಗಬಾರದು ಎಂದು ಬ್ರಹ್ಮಾವರ್ ಅವರು ಮಕ್ಕಳಿಗೆ ಹೇಳಿದ್ದ ಹಿನ್ನೆಲೆಯಲ್ಲಿ, ಅವರ ಮಾತಿನಂತೆ ಇಂದು ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ಮುಗಿಸಿದೆ ಕುಟುಂಬ.
ಹಿರಿಯ ನಟ ಸದಾಶಿವ ಬ್ರಹ್ಮಾವರ್ ಸ್ಥಿತಿ ಕಂಡು ಮಿಡಿದ ನಟ ಜಗ್ಗೇಶ್
ಸುಮಾರು 150ಕ್ಕೂ ಹೆಚ್ಚು ಚಿತ್ರಗಳಲ್ಲಿ ಸದಾಶಿವ ಬ್ರಹ್ಮಾವರ್ ಅವರು ಬಣ್ಣ ಹಚ್ಚಿದ್ದಾರೆ. ಡಾ. ರಾಜ್, ವಿಷ್ಣುವರ್ಧನ್, ಅಂಬರೀಷ್, ಶಿವರಾಜ್ ಕುಮಾರ್, ರವಿಚಂದ್ರನ್, ಉಪೇಂದ್ರ, ಜಗ್ಗೇಶ್, ಪುನೀತ್ ರಾಜ್ಕುಮಾರ್, ಸುದೀಪ್, ದರ್ಶನ್.. ಹೀಗೆ ಕನ್ನಡ ಚಿತ್ರರಂಗದ ಈಗಿನ ಜನರೇಷನ್ ಸ್ಟಾರ್ಗಳೊಂದಿಗೆ ಈ ಹಿರಿಯ ಕಲಾವಿದ ಅಭಿನಯಿಸಿದ್ದರು.
ಸದಾಶಿವ ಬ್ರಹ್ಮಾವರ್ ಗೆ ನೆರವು ನೀಡಲು ಮುಂದಾದ ಡಾ.ರಾಜ್ ಕುಟುಂಬ
ಒಂದು ಕಾಲದಲ್ಲಿ ಬಹುತೇಕ ಸಿನಿಮಾಗಳಿಗೆ ಖಾಯಂ ನಟನಾಗಿದ್ದ ಹಿರಿಯ ಕಲಾವಿದ, ಇಂದು ಯಾರು ಹಂಗು ಬಯಸದೇ, ಯಾವ ನೆರವು ಕೋರದೆ ಕೊನೆಯುಸಿರೆಳೆದಿದ್ದಾರೆ. ಚಿತ್ರರಂಗಕ್ಕೆ ಕಲಾಸೇವೆ ನೀಡಿದ ಇಂತಹ ಕಲಾವಿದನಿಗೆ ಚಿತ್ರರಂಗ ಕೊನೆಯ ಘಳಿಗೆಯಲ್ಲಿ ಏನು ಕೊಟ್ಟಿದೆ ಎಂಬುದನ್ನ ಪ್ರಶ್ನಿಸಿಕೊಳ್ಳಬೇಕಿದೆ.?