Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಿರಿಯ ಕಲಾವಿದ ಸದಾಶಿವ ಬ್ರಹ್ಮಾವರ್ ವಿಧಿವಶ
Recommended Video
ವಯಸ್ಸಾದ ತಂದೆ, ಸ್ವಾತಂತ್ರ್ಯ ಹೋರಾಟಗಾರ, ಬಡ ಮೇಷ್ಟ್ರು, ಅಸಹಾಯಕ ಅಜ್ಜ, ದೇವಸ್ಥಾನದ ಪೂಜಾರಿ, ನೀತಿ ಪಾಠ ಹೇಳುವ ಪ್ರಾಮಾಣಿಕ ರಾಜಕಾರಣಿ.. ಹೀಗೆ ಬಹುತೇಕ ಎಲ್ಲ ಪಾತ್ರಗಳಿಗೂ ಜೀವ ತುಂಬುತ್ತಿದ್ದ ಕಲಾವಿದ ಸದಾಶಿವ ಬ್ರಹ್ಮಾವರ್ ವಿಧಿವಶರಾಗಿದ್ದಾರೆ.
ಮನೆ, ಮಕ್ಕಳನ್ನ ಬಿಟ್ಟು ಸದಾಶಿವ ಬ್ರಹ್ಮಾವರ್ ಸಂಕಷ್ಟದ ಸ್ಥಿತಿಯಲ್ಲಿದ್ದಾರೆ ಎಂದು ಕಳೆದ ವರ್ಷ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ನಂತರ ಮನೆಯವರ ಜೊತೆ ಮನೆಗೆ ತೆರಳಿದ ಬ್ರಹ್ಮಾವರ್ ಅವರ ಬಗ್ಗೆ ಇಂದು ಸಾವಿನ ಸುದ್ದಿ ಬಂದು ತಲುಪಿದೆ.
ಬೀದಿಪಾಲಾಗಿದ್ದ ಹಿರಿಯ ನಟನಿಗೆ ಕಿಚ್ಚ ಸುದೀಪ್ ನೆರವು
ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಬ್ರಹ್ಮಾವರ್ ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರಂತೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ (ಸೆಪ್ಟೆಂಬರ್ 19) ಮಧ್ಯಾಹ್ನ ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಸಾವಿನ ಸುದ್ದಿಯನ್ನ ಕುಟುಂಬದವರಿಗೆ ಹೊರತು ಬೇರೆ ಯಾರಿಗೂ ಗೊತ್ತಾಗಬಾರದು ಎಂದು ಬ್ರಹ್ಮಾವರ್ ಅವರು ಮಕ್ಕಳಿಗೆ ಹೇಳಿದ್ದ ಹಿನ್ನೆಲೆಯಲ್ಲಿ, ಅವರ ಮಾತಿನಂತೆ ಇಂದು ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ಮುಗಿಸಿದೆ ಕುಟುಂಬ.
ಹಿರಿಯ ನಟ ಸದಾಶಿವ ಬ್ರಹ್ಮಾವರ್ ಸ್ಥಿತಿ ಕಂಡು ಮಿಡಿದ ನಟ ಜಗ್ಗೇಶ್
ಸುಮಾರು 150ಕ್ಕೂ ಹೆಚ್ಚು ಚಿತ್ರಗಳಲ್ಲಿ ಸದಾಶಿವ ಬ್ರಹ್ಮಾವರ್ ಅವರು ಬಣ್ಣ ಹಚ್ಚಿದ್ದಾರೆ. ಡಾ. ರಾಜ್, ವಿಷ್ಣುವರ್ಧನ್, ಅಂಬರೀಷ್, ಶಿವರಾಜ್ ಕುಮಾರ್, ರವಿಚಂದ್ರನ್, ಉಪೇಂದ್ರ, ಜಗ್ಗೇಶ್, ಪುನೀತ್ ರಾಜ್ಕುಮಾರ್, ಸುದೀಪ್, ದರ್ಶನ್.. ಹೀಗೆ ಕನ್ನಡ ಚಿತ್ರರಂಗದ ಈಗಿನ ಜನರೇಷನ್ ಸ್ಟಾರ್ಗಳೊಂದಿಗೆ ಈ ಹಿರಿಯ ಕಲಾವಿದ ಅಭಿನಯಿಸಿದ್ದರು.
ಸದಾಶಿವ ಬ್ರಹ್ಮಾವರ್ ಗೆ ನೆರವು ನೀಡಲು ಮುಂದಾದ ಡಾ.ರಾಜ್ ಕುಟುಂಬ
ಒಂದು ಕಾಲದಲ್ಲಿ ಬಹುತೇಕ ಸಿನಿಮಾಗಳಿಗೆ ಖಾಯಂ ನಟನಾಗಿದ್ದ ಹಿರಿಯ ಕಲಾವಿದ, ಇಂದು ಯಾರು ಹಂಗು ಬಯಸದೇ, ಯಾವ ನೆರವು ಕೋರದೆ ಕೊನೆಯುಸಿರೆಳೆದಿದ್ದಾರೆ. ಚಿತ್ರರಂಗಕ್ಕೆ ಕಲಾಸೇವೆ ನೀಡಿದ ಇಂತಹ ಕಲಾವಿದನಿಗೆ ಚಿತ್ರರಂಗ ಕೊನೆಯ ಘಳಿಗೆಯಲ್ಲಿ ಏನು ಕೊಟ್ಟಿದೆ ಎಂಬುದನ್ನ ಪ್ರಶ್ನಿಸಿಕೊಳ್ಳಬೇಕಿದೆ.?