Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಿರಿಯ ನಟ ಸುರೇಶ್ ಹೆಬ್ಳೀಕರ್ ಹೆಸರಿನಲ್ಲಿ ವಂಚನೆಗೆ ಯತ್ನ
ಸ್ಯಾಂಡಲ್ ವುಡ್ ನ ಹಿರಿಯ ನಟ ಮತ್ತು ನಿರ್ದೇಶಕ ಸುರೇಶ್ ಹೆಬ್ಳೀಕರ್ ಹೆಸರಿನಲ್ಲಿ ಹಣ ದೋಚುತಿದ್ದಾರೆ. ಸುರೇಶ್ ಹೆಬ್ಳೀಕರ್ ಅಂತ ಹೇಳಿ ಅವರ ಸ್ನೇಹಿತರ ಮತ್ತು ಹಿಂಬಾಲಕರ ಬಳಿ ಹಣ ವಸೂಲಿ ಮಾಡುತ್ತಿದ್ದಾರೆ. ಫೇಸ್ ಬುಕ್, Gmail ಮತ್ತು Rediff ಮೂಲಕ ಹಣ ದೋಚುತ್ತಿದ್ದಾರೆ.
ಅಂದ್ಹಾಗೆ ಸುರೇಶ್ ಅವರ Gmail ಮತ್ತು Rediff ಅಕೌಂಟ್ ಅನ್ನು ಯಾರೋ ಹ್ಯಾಕ್ ಮಾಡಿದ್ದಾರೆ. ಹ್ಯಾಕ್ ಮಾಡಿ ಅವರ ಕಾಂಟ್ಯಾಕ್ಟ್ ನಲ್ಲಿ ಇದ್ದವರಿಗೆಲ್ಲ ಹಣ ಕೊಡಿ ಎಂದು ಸಂದೇಶ ಕಳುಹಿಸುತ್ತಿದ್ದಾರೆ. ಇದನ್ನ ನೋಡಿ ಶಾಕ್ ಆದ ಪರಿಚಯದವರು ಸುರೇಶ್ ಅವರಿಗೆ ಹೇಳಿದ್ದಾರೆ.
Recommended Video
ವಿಷಯ ಗೊತ್ತಾಗುತ್ತಿದ್ದಂತೆ ಸುರೇಶ್ ಎಲ್ಲರಿಗೂ ತಮ್ಮ ಅಕೌಂಟ್ ಹ್ಯಾಕ್ ಆಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. "ನನ್ನ ಸ್ನೇಹಿತರು ಮತ್ತು ಪರಿಚಯದವರಿಗೆ ಹಣ ಕೊಡಿ ಎನ್ನುವ ಸಂದೇಶ, ನನ್ನ ಅಕೌಂಟ್ ನಿಂದ ಹೋಗಿದೆ. ನನ್ನ Gmail ಮತ್ತು Rediff ಅಕೌಂಟ್ ಹ್ಯಾಕ್ ಆಗಿದೆ. ಆ ರೀತಿಯ ಸಂದೇಶ ಬಂದರೆ ನಿರ್ಲಕ್ಷಿಸಿ" ಎಂದು ಹೇಳಿದ್ದಾರೆ.
ಹಿರಿಯ ನಟ ಸುರೇಶ್ ಹೆಬ್ಳೀಕರ್ ಕೊನೆಯದಾಗಿ ಬೀರಬಲ್ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. 2017ರಲ್ಲಿ ತೆರೆಗೆ ಬಂದ ಮನ ಮಂಥನ ಸುರೇಶ್ ನಿರ್ದೇಶನದ ಕೊನೆಯ ಚಿತ್ರ. ನಿರ್ದೇಶನ ಮತ್ತು ಅಭಿನಯದ ಜೊತೆಗೆ ಪರಿಸರವಾದಿಯಾಗಿರುವ ಸುರೇಶ್ ಪರಿಸರ ಸಂರಕ್ಷಣೆಯ ಬಗ್ಗೆ ಸಾಕಷ್ಟು ಡಾಕ್ಯುಮೆಂಟರಿಗಳನ್ನು ಮಾಡಿದ್ದಾರೆ.