Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಿರಿಯ ನಿರ್ದೇಶಕ ಕೆಎಸ್ಎಲ್ ಸ್ವಾಮಿ ಆರೋಗ್ಯ ಸ್ಥಿರ
ಕನ್ನಡ ಚಿತ್ರರಂಗದ ಹಿರಿಯ ಚೇತನ ಕೆಎಸ್ಎಲ್ ಸ್ವಾಮಿ(ರವಿ) ಅವರ ಆರೋಗ್ಯದಲ್ಲಿ ಏರು ಪೇರು ಕಂಡುಬಂದಿದೆ. ಶ್ವಾಸಕೋಶದ ಸೋಂಕು ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಯಶವಂತಪುರ ಸಮೀಪದ ಕೊಲಂಬಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೆ.ಎಸ್.ಎಲ್ ಸ್ವಾಮಿ ಅವರ ಆರೋಗ್ಯ ಕಳೆದ ಒಂದು ವಾರದಿಂದ ಕೈಕೊಟ್ಟಿತ್ತು. ರವಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.[ಕೆಎಸ್ ಎಲ್ ಸ್ವಾಮಿ ಧಾರಾವಾಹಿ ಶ್ರೀ ಶಂಕರ ದಿಗ್ವಿಜಯ]
ಗಾಂಧಿನಗರ, ಭಾಗ್ಯಜ್ಯೋತಿ, ಮಲಯ ಮಾರುತ ಸೇರಿದಂತೆ 35 ಕ್ಕೂ ಅಧಿಕ ಚಿತ್ರಗಳನ್ನು ರವಿ ನಿರ್ದೇಶನ ಮಾಡಿದ್ದಾರೆ. ರವಿ ನಿರ್ದೇಶನದ ಜಂಬೂ ಸವಾರಿ ಮಕ್ಕಳ ಸಿನಿಮಾಕ್ಕೆ ಸ್ವರ್ಣ ಕಮಲ ಪ್ರಶಸ್ತಿ ಸಿಕ್ಕದೆ. ಪುಟ್ಟಣ್ಣ ಕಣಗಾಲ್ ಜೊತೆಯೂ ಅವರು ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ಸ್ವಾಮಿ ಕಥೆಗಾರ, ನಟ, ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ.
ಕಿರುತೆರೆಯಲ್ಲೂ ಕಾಣಿಸಿಕೊಂಡಿದ್ದ ಸ್ವಾಮಿ ಅವರ ನಟನೆಗೆ ಮಾರು ಹೋಗದವರಿಲ್ಲ. ಮೇರು ನಿರ್ದೇಶಕ ಜಿ.ವಿ.ಅಯ್ಯರ್ ಮತ್ತು ಎಂ.ಆರ್.ವಿಠಲ್ ಅವರ ಬಳಿ ಕೆಲಸ ಕಲಿತಿದ್ದ ಸ್ವಾಮಿ 1966ರಲ್ಲಿ 'ತೂಗುದೀಪ' ಸಿನಿಮಾದ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡರು.