Don't Miss!
- News ಕಾಂಗ್ರೆಸ್ ನೇತೃತ್ವದ ಒಕ್ಕೂಟಕ್ಕೆ ನಾಯಕನೇ ಇಲ್ಲ: ಪ್ರಧಾನಿ ಮೋದಿ!
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
BREAKING: 'ಮಗಳು ಜಾನಕಿ' ಖ್ಯಾತಿಯ ಕಿರುತೆರೆ ಕಲಾವಿದ ಮಂಡ್ಯ ರವಿ ವಿಧಿವಶ
ಕನ್ನಡ ಕಿರುತೆರೆಯ ಚಿರಪರಿಚಿತ ನಟ ಮಂಡ್ಯ ರವಿ ಇಂದು (ಸಪ್ಟೆಂಬರ್14) ವಿಧಿವಶರಾಗಿದ್ದಾರೆ.
ಕಳೆದ ಕೆಲದಿನಗಳಿಂದ ಲಿವರ್ ಸಿರೋಸಿಸ್ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಹವ್ಯಾಸಿ ನಾಟಕ ತಂಡದ ಕಲಾವಿದರಾಗಿದ್ದ ಮಂಡ್ಯ ರವಿ ಅವರ ಪೂರ್ಣ ಹೆಸರು ರವಿ ಪ್ರಸಾದ್ ಎಂ. ಟಿ.ಎಸ್ ನಾಗಾಭರಣ ಅವರ ನಿರ್ದೇಶನದ ಮಹಾಮಾಯಿ ಧಾರವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟ ಅವರು, ಸಿನಿಮಾಗಳಲ್ಲೂ ನಟಿಸಿದ್ದರು.
ಖ್ಯಾತ ನಿರ್ದೇಶಕ ಟಿ.ಎನ್ ಸೀತಾರಾಮ್ ಅವರ ಆತ್ಮೀಯ ನಟರಾದ ಮಂಡ್ಯ ರವಿ ಪುಟ್ಟಗೌರಿ ಮದುವೆ, ಮಗಳು ಜಾನಕಿ, ಯಶೋಧೆ, ಚಿತ್ರಲೇಖ, ನಮ್ಮನೆ ಯುವರಾಣಿ ಸೇರಿದಂತೆ ಅನೇಕ ಧಾರಾವಾಹಿಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚಿಗೆ ಪ್ರಸಾರವಾಗುತ್ತಿದ್ದ ವರಲಕ್ಷ್ಮಿ ಸ್ಟೋರ್ಸ್ ಧಾರವಾಹಿಯಲ್ಲಿ ಹಿರಿಯಣ್ಣನ ಪಾತ್ರದಲ್ಲಿ ನಟಿಸಿದ್ದರು.
ರವಿ ಅವರ ನಟನಾ ವೃತ್ತಿಗೆ ಬೆನ್ನೆಲುಬಾಗಿದ್ದ ನಿರ್ದೇಶಕ ಟಿ.ಎನ್.ಸೀತಾರಾಮ್, ತಮ್ಮ ನೆಚ್ಚಿನ ನಟನ ನಿಧನಕ್ಕೆ ಫೇಸ್ಬುಕ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದು, ''ಮಗಳು ಜಾನಕಿ ಯ 'ಚಂದು ಭಾರ್ಗಿ' ರವಿ ಅಸ್ತಂಗತ. ಇನ್ನೂ 42..ನಾಲ್ಕು ಜನ್ಮಕ್ಕಾಗುವಷ್ಟು ಪ್ರತಿಭೆ. ಅತ್ಯಂತ ಆಘಾತಕಾರಿ'' ಎಂದು ಬರೆದಿದ್ದಾರೆ. ಟಿ.ಎನ್.ಸೀತಾರಾಮ್ ನಿರ್ದೇಶನದ ಹಲವು ಧಾರಾವಾಹಿಗಳಲ್ಲಿ ಮಂಡ್ಯ ರವಿ ನಟಿಸಿದ್ದರು. ಇವರ ಧಾರಾವಾಹಿಗಳ ಮೂಲಕವೇ ಜನಪ್ರಿಯತೆ ಗಳಿಸಿದ್ದರು ರವಿ.