Don't Miss!
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- News 'ವಲಸೆ ಯಾಕ್ರಿ ನಿಮ್ಮೂರಲ್ಲೆ ಉದ್ಯೋಗ ಖಾತರಿ'- ನರೇಗಾ ಯೋಜನೆಯಡಿ ಲಕ್ಷಾಂತರ ನಿರುದ್ಯೋಗಿಗಳಿಗೆ ಉದ್ಯೋಗ
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಪ್ರಾರ್ಥನ' ಕಥೆಗೆ ನಿರ್ಮಾಪಕ ಫಿದಾ: ಸಿನಿಮಾ ಆಗಲಿದೆ ಈ ಕಿರುಚಿತ್ರ
'ಮಹಾನುಭಾವರು', 'ಕರ್ಷಣಂ', 'ಬಿಎಂಡಬ್ಲ್ಯೂ' ಸೇರಿದಂತೆ ಹಲವು ಚಿತ್ರಗಳಲ್ಲಿ ನಾಯಕಿಯಾಗಿ ಅಭಿನಯಿಸಿರುವ ಅನುಷಾ ರೈ ಈಗ ಕಿರುಚಿತ್ರದಲ್ಲಿ ಮೋಡಿ ಮಾಡುತ್ತಿದ್ದಾರೆ.
ಅನುಷಾ ರೈ ನಾಯಕಿಯಾಗಿ ಅಭಿನಯದ 'ಪ್ರಾರ್ಥನ' ಕಿರುಚಿತ್ರ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು, ಎಲ್ಲರಿಂದಲೂ ಮೆಚ್ಚುಗೆ ಗಳಿಸಿಕೊಂಡಿದೆ. ಈ ಸಿನಿಮಾವನ್ನ ನಿರ್ಮಾಣ ಮಾಡಿದ್ದ ನಿರ್ಮಾಪಕರಿಗೆ, ಈ ಕಥೆ ತುಂಬಾ ಇಷ್ಟವಾಗಿ, ಇದನ್ನೇ ಸಿನಿಮಾ ಮಾಡಲು ಕೂಡ ಚಿಂತನೆ ನಡೆಸಿದ್ದಾರೆ.
ಸಾಮಾನ್ಯವಾಗಿ ಕತೆಯಲ್ಲಿ ನಾಯಕ, ನಾಯಕಿ, ಪೋಷಕಪಾತ್ರಗಳು, ಹಾಡು, ಹಾಸ್ಯ, ಸಾಹಸ, ಸುಂದರ ತಾಣಗಳು ಇವೆಲ್ಲವು ಸೇರಿಕೊಂಡರೆ ಒಂದು ಸಿನಿಮಾ ಆಗುತ್ತದೆ ಎಂದು ಹೇಳುವುದುಂಟು. ಇದೆಲ್ಲಾವನ್ನು ಕೇವಲ ಹದಿನೈದು ನಿಮಿಷದಲ್ಲಿ ಹೇಳಬಹುದೆಂದು 'ಪ್ರಾರ್ಥನ' ಎನ್ನುವ ಕಿರುಚಿತ್ರದಲ್ಲಿ ತೋರಿಸುವ ಪ್ರಯುತ್ನ ಮಾಡಲಾಗಿದೆ.
ಚಿತ್ರದಲ್ಲಿ ಪ್ರಾರ್ಥನಾಗೆ ಪುಕ್ಕಲ ಪ್ರೇಮಿ ಇರುತ್ತಾನೆ. ಪ್ರೀತಿಸುವ ವಿಷಯವನ್ನು ಮನೆಯಲ್ಲಿ ಹೇಳಲು ಹೆದರುತ್ತಾನೆ. ಆಕೆ ಧೈರ್ಯ ಮಾಡಿ ಯಾರಿಗೂ ಹೇಳದೆ ದೂರದ ಊರಿಗೆ ಪ್ರಯಾಣ ಬೆಳಸಿ, ಆತನ ಅಪ್ಪನ ಬಳಿ ಎಲ್ಲವನ್ನು ತಿಳಿಸಿ ಮದುವೆ ಮಾಡಿಕೊಡಿ ಎಂದು ಕೇಳಿಕೊಳ್ಳುತ್ತಾಳೆ. ಈಕೆಯ ಮನೆಯಲ್ಲಿ ತಂಗಿಯು ಬೇರೆ ಜಾತಿಯವನನ್ನು ಮದುವೆ ಆದರೆ ಆಸ್ತಿ ಹೋಗುತ್ತದೆಂಬ ಅಣ್ಣನಿಗೆ ಚಿಂತೆ. ಮನೆಗೆ ಬಾರದಿರುವುದನ್ನು ನೋಡಿ ದೂರು ಕೊಡುತ್ತಾನೆ.
ಬೆಳ್ಳಿತೆರೆಯಲ್ಲಿ ಮೋಡಿ ಮಾಡುತ್ತಿರುವ ಮುದ್ದು ಚೆಲುವೆ ಅನುಷಾ.!
ಮತ್ತೊಂದು ಕಡೆ ಅಪ್ಪನ ಬಳಿ ಹೋಗದಂತೆ ತಡೆಯಲು ಗೆಳತಿಯ ಜೊತೆ ಸೇರಿಕೊಂಡು ಉಪಾಯ ಮಾಡುತ್ತಾನೆ. ಇಷ್ಟರಲ್ಲೇ ಆಕೆ ನಿಗೂಢವಾಗಿ ಕೊಲೆಯಾಗುತ್ತಾಳೆ. ಪೋಲೀಸ್ ಅಧಿಕಾರಿ ತನಿಖೆ ನಡೆಸಿ ಹುಡುಗನ ಅಪ್ಪನ ಮೇಲೆ ಅನುಮಾನ ಪಡುತ್ತಾನೆ. ಪೇದೆಗಳು ಆಸ್ತಿ ಸಲುವಾಗಿ ಆಕೆಯ ಅಣ್ಣ ಕೊಲೆ ಮಾಡಿರಬಹುದೆಂದು ಹೇಳುತ್ತಾರೆ. ಅಧಿಕಾರಿಯು ಚರ್ಚ್ನಲ್ಲಿ ಪಾಪವನ್ನು ನಿವೇದನೆ ಮಾಡಿಕೊಳ್ಳುತ್ತಾನೆ. ಆದರೆ ಕೊಲೆ ಮಾಡಿದ್ದು ಯಾರು, ಕಾರಣವಾದರೂ ಏನು? ಎಂಬುದರ ಸೆಸ್ಪನ್ಸ್, ಥ್ರಿಲ್ಲರ್ ಚಿತ್ರವನ್ನು ಯು ಟ್ಯೂಬ್ನಲ್ಲಿ ನೋಡಿ ತಿಳಿಯಬಹುದು.
ಅಭಿಷೇಕ್ ದಾಸ್ ನಾಯಕನಾಗಿ ಇದು ಹೊಸ ಅನುಭವ. ಈ ಮೊದಲೇ ಹೇಳಿದಂತೆ ಅನುಷಾ ರೈ ಈ ಕಿರುಚಿತ್ರಕ್ಕೆ ನಾಯಕಿ. ಇವರೊಂದಿಗೆ ಗಿರೀಶ್ ಜತ್ತಿ, ಯಮು ನಾಶ್ರೀನಿಧಿ, ಸುನಿಲ್, ಅರಸಿಕೆರೆ ರಾಜು ತಾರಬಳಗದಲ್ಲಿ ಇದ್ದಾರೆ. ಕತೆ ಬರೆದು ನಿರ್ದೇಶನ, ನಿರ್ಮಾಣ ಮಾಡಿರುವುದು ಕೆ.ಎಲ್.ಪ್ರಭಾಕರ್. ಚಿತ್ರಕತೆ ಕಾರ್ತಿಕ್ಮೂನಿ, ಸಂಭಾಷಣೆ ಶ್ರೀನಿಧಿ.ಡಿ.ಎಸ್. ಸಂಕಲನ ಗಣಪತಿಭಟ್, ಛಾಯಗ್ರಹಣ ಸಂತೋಷ್ಖಾರ್ವಿ, ಸಂಗೀತ ಸುನಾದ್ ಗೌತಂ ನಿರ್ವಹಿಸಿದ್ದಾರೆ. ಚಿಕ್ಕಮಗಳೂರು, ಬೆಂಗಳೂರು ಕಡೆಗಳಲ್ಲಿ ಏಳು ದಿನಗಳ ಕಾಲ ಚಿತ್ರೀಕರಿಸಲಾಗಿದೆ.