Don't Miss!
- News Bengaluru Rain: ಸುದೀರ್ಘ ಕಾಯುವಿಕೆ ಅಂತ್ಯ: ಬೆಂಗಳೂರಿಗೆ ಎಂಟ್ರಿ ಕೊಟ್ಟ ಮಳೆ; ವಿಡಿಯೋ ನೋಡಿ
- Automobiles ಹ್ಯುಂಡೈನ ಈ ಕಾರಿಗೆ ಭಾರತದಲ್ಲಿ ಭರ್ಜರಿ ಡಿಸ್ಕೌಂಟ್: ಇದಕ್ಕಿಂತ ಉತ್ತಮ ಆಫರ್ ಸದ್ಯಕ್ಕಿಲ್ಲ!
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪೋಷಕ ನಟ ಕಿರುತೆರೆ ಕಲಾವಿದ ಎಚ್ ವಿ ಪ್ರಕಾಶ್ ಇನ್ನಿಲ್ಲ
ಜೂ.23ರಂದು ಪ್ರಕಾಶ್ ಅವರು ಯಶವಂತಪುರ ತ್ರಿವೇಣಿ ರಸ್ತೆಯಲ್ಲಿ ಬೈಕ್ ನಿಂದ ಬಿದ್ದು ತಲೆಗೆ ಪೆಟ್ಟಾಗಿತ್ತು. ಕೂಡಲೆ ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಅವರು ಭಾನುವಾರ ಚಿರನಿದ್ರೆಗೆ ಜಾರಿದ್ದಾರೆ. ಅವರಿಗೆ 53 ವರ್ಷ ವಯಸ್ಸಾಗಿತ್ತು.
ಹಾಸನ ಜಿಲ್ಲೆಯವರಾದ ಪ್ರಕಾಶ್ ಅವರು ಬೆಂಗಳೂರಿನ ರಾಜಾಜಿನಗರಲ್ಲಿ ಕೆಲವರ್ಷಗಳಿಂದ ವಾಸವಾಗಿದ್ದರು. ಅವರಿಗೆ ಪತ್ನಿ ಹಾಗೂ ಒಬ್ಬ ಮಗನಿದ್ದಾನೆ. ಬಾಲಕಲಾವಿದನಾಗಿ ಬೆಳ್ಳಿತೆರೆಗೆ ಅಡಿಯಿಟ್ಟ ಅವರು ಹಲವಾರು ರೇಡಿಯೋ ನಾಟಕಗಳಲ್ಲಿ, ರಂಗ ಪ್ರಯೋಗಗಳಲ್ಲಿ ತೊಡಗಿಕೊಂಡವರು.
ಕನ್ನಡದ ತೂಗುವೆ ಕೃಷ್ಣನ, ಮತ್ಸರ, ಒಂದು ಸಿನಿಮಾ ಕಥೆ, ಅಜಗಜಾಂತರ, ಕೆರಳಿದ ಕೇಸರಿ, ಶ್ವೇತಾಗ್ನಿ ಸೇರಿದಂತೆ 17ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಕಿರುತೆರೆಯ ಜನಪ್ರಿಯ ಧಾರಾವಾಹಿಗಳಾದ ಸಿಹಿಕಹಿ, ಪಾಪ ಪಾಂಡು, ಸಿಲ್ಲಿ ಲಲ್ಲಿ ಮುಂತಾದವುಗಳಲ್ಲೂ ಅಭಿನಯಿಸಿದ್ದಾರೆ.
ಸರಿ ಸುಮಾರು 25ಕ್ಕೂ ಹೆಚ್ಚು ಸಾಕ್ಷ್ಯಚಿತ್ರಗಳನ್ನು ನಿರ್ದೆಶಿಸಿದ್ದಾರೆ ಪ್ರಕಾಶ್. ಅವರ ನಿಧನಕ್ಕೆ ಕನ್ನಡ ಚಿತ್ರರಂಗ ಅತೀವ ಸಂತಾಪ ವ್ಯಕ್ತಪಡಿಸಿದೆ. ಸೋಮವಾರ ಮಧ್ಯಾಹ್ನ 12 ಗಂಟೆಗೆ ಅವರ ಅಂತ್ಯಕ್ರಿಯೆ ರಾಜಾಜಿನಗರದ ಹರಿಶ್ಚಂದ್ರಘಾಟ್ ನಲ್ಲಿ ನೆರವೇರಲಿದೆ. (ಏಜೆನ್ಸೀಸ್)