"ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು": ಕಿಶೋರ್

By ಫಿಲ್ಮಿಬೀಟ್ ಡೆಸ್ಕ್

ಬಹುಭಾಷಾ ನಟ ಕಿಶೋರ್ ತಮ್ಮ ನೇರ ನಡೆ ನುಡಿಯಿಂದಲೂ ಪದೇ ಪದೇ ಚರ್ಚೆ ಹುಟ್ಟಾಕುತ್ತಾರೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಕುಸ್ತಿಪಟುಗಳು, ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್‌ ಭೂಷಣ್‌ ಲೈಂಗಿಕ ದೌರ್ಜನ್ಯದ ವಿರುದ್ಧ ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಗ್ಗೆ ಇದೀಗ ನಟ ಕಿಶೋರ್ ಮಾತನಾಡಿದ್ದು, ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

"ಹಿಜಾಬು ಮತ್ತು ಕುಸ್ತಿ ಅಖಾಡದಲ್ಲಿ ಮನುವಾದಿ ಮಸಲತ್ತು ಭಯದ ಮತ್ತು ಬಹುಸಂಖ್ಯಾವಾದಿ ರಾಜಕಾರಣ" ಎಂದು ಹೇಳಿ ಸೋಶಿಯಲ್ ಮೀಡಿಯಾದಲ್ಲಿ ಕಿಶೋರ್ ಪೋಸ್ಟ್ ಮಾಡಿದ್ದಾರೆ. "ಯಾವ ಮುಸಲ್ಮಾನ ಮಹಿಳೆ, ಪುರುಷ ಪ್ರಾಬಲ್ಯದ ಸಂಕೇತವಾದ ಹಿಜಾಬನ್ನು ವಿರೋಧಿಸಿಯೂ ವಿರೋಧಿಸದಂತೆ ಮೆಲ್ಲ ಮೆಲ್ಲನೆ ಅದರಿಂದ ಸ್ವತಂತ್ರಳಾಗಿ ಶಿಕ್ಷಿತಳೂ ಸಶಕ್ತಳೂ ಆಗುತ್ತಿದ್ದಳೊ ಅವಳನ್ನು ಅಡ್ಡಗಟ್ಟಿ ಅವಳಲ್ಲಿ ಭಯ ಹುಟ್ಟಿಸಿ, ಆಕೆ ತನ್ನ ಆತ್ಮರಕ್ಷಣೆಗಾಗಿ ತನ್ನ ಅಸ್ಮಿತೆಯ ಹುಡುಕಾಟದಲ್ಲಿ ತನ್ನನ್ನು ಬಂಧನದಲ್ಲಿಟ್ಟಿದ್ದ ಅದೇ ಹಿಜಾಬಿನ ಮೊರೆ ಹೋಗುವ ಹಾಗೆ ಮಾಡಿದ ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು.

Kantara Actor Kishore Reacts on Hijab Ban and Wrestlers protest

ಒಂದು ಹೆಣ್ಣು ಶಿಕ್ಷಣ ಪಡೆದರೆ ಅವಳ ಮುಂದಿನ ಇಡೀ ಪೀಳಿಗೆ ಶಿಕ್ಷಣ ಪಡೆಯುತ್ತದೆ. ಸರಕಾರಿ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿ ಇಂದೂ ಸಹ ನೂರರಲ್ಲಿ ಹದಿನಾಲ್ಕು ಮುಸ್ಲಿಂ ಹೆಣ್ಣು ಮಕ್ಕಳು ಮಾತ್ರ ಕಾಲೇಜು ಶಿಕ್ಷಣ ಪಡೆಯಲು ಸಾಧ್ಯವಾಗಿದೆ, ಇಂಥಾ ಕಾಲದಲ್ಲಿ ಅದನ್ನೂ ತಡೆದು ಬಿಟ್ಟರೆ .. ಮುಸಲ್ಮಾನರನ್ನು ಮುಖ್ಯವಾಹಿನಿಯಿಂದ ಹೊರಗಿಡುವ ಷಡ್ಯಂತ್ರ ಯಶಸ್ವಿಯಾದಂತೆಯೇ ಸರಿ.

ತನ್ನ ಮನೆ, ಸಂಬಂಧಿಕರು, ಮತ, ಸಂಪ್ರದಾಯವಾದ ಎಲ್ಲವನ್ನೂ ದಾಟಿಬಂದು ಕೊನೆಯ ಹಂತದಲ್ಲಿ ಶಿಕ್ಷಣ ವಂಚಿತಳಾಗುವುದಕ್ಕೆ ಕಾರಣ ಕೂಡ ಸ್ವಯಂ ಅವಳೇ ಆಗಿಬಿಟ್ಟರೆ?? ದೇಶದ ಮುಖ್ಯವಾಹಿನಿಯಿಂದ ಮುಸ್ಲಿಂ ಮಹಿಳೆ ಮತ್ತು ಜನಾಂಗ ಎರಡೂ ಹೊರಗೆ... ಅದೂ ತನ್ನ ಕಾಲ ಮೇಲೆ ತಾನೇ ಕೊಡಲಿ ಹಾಕಿಕೊಂಡು.. ಇದಲ್ಲವೇ ಮಾಸ್ಟರ್ ಸ್ಟ್ರೊಕ್.

ಜಂತರ್ ಮಂತರ್ ನಲ್ಲಿ ಲೈಂಗಿಕ ದೌರ್ಜನದ ವಿರುದ್ಧ ಧರಣಿ ಕುಳಿತ ಹೆಣ್ಣುಮಕ್ಕಳು, ಅತ್ಯಾಚಾರಿಯ ಹೂಂಕಾರ, ಆಗಾಗ ಆ ಹೆಣ್ಣುಮಕ್ಕಳ ಮೇಲೇ ತನ್ನ ಶಕ್ತಿ ತೋರಿಸುವ ನರಸತ್ತ ಪೊಲೀಸ್, ಕಮಕ್ ಕಿಮಕ್ ಅನ್ನದೇ ಅತ್ಯಾಚಾರಿಗೆ ಪರೋಕ್ಷ ಬೆಂಬಲ ಕೊಟ್ಟು ಕುಳಿತ ಏಕವ್ಯಕ್ತಿ ಸರ್ಕಾರವಾದ ಪ್ರಧಾನಿ....ಆಗ ಹೊರಟದ್ದು .... ವಿಶ್ವಮಟ್ಟದ ತಾರೆಯರಿಗೇ ಹೀಗಾದರೆ ನಮ್ಮಂಥ ಸಾಮಾನ್ಯರಿಗಾದರೆ ಹೇಗೆ ಎಂಬ ಜನಸಾಮಾನ್ಯರ ಉದ್ಗಾರ...

Kantara Actor Kishore Reacts on Hijab Ban and Wrestlers protest

ಇಷ್ಟು ಸಾಲದೇ, ಶತಮಾನಗಳು ಹೋರಾಡಿ ವಿಶ್ವದ ಉತ್ತುಂಗಕ್ಕೇರಿದ ಹೆಣ್ಣು ಮಕ್ಕಳನ್ನು, ಅವರ ಬೆಂಗಾವಲಾಗಿ ನಿಂತ ದೇಶದ ತಾಯಿ ತಂದೆಯರೇ ಮತ್ತೆ ಮನುವಿನ ಕಲ್ಪನೆಯ ನಾಲ್ಕು ಗೋಡೆಗಳ ಕೂಪಕ್ಕೆ ತಳ್ಳಲು. ಭಾರತಾಂಬೆ ಅಂದು ಹಿಜಾಬಿನಲ್ಲಿ ಇಂದು ಜಂತರ್ ಮಂತರ್ ಅಖಾಡದಲ್ಲಿ ಮನುವಾದಿಗಳಿಗೆ ಸವಾಲೆಸೆಯುತ್ತಲೇ ಬಂದಿದ್ದಾಳೆ. ಜೈ ಭಾರತಾಂಬೆ" ಎಂದು ಕಿಶೋರ್ ಬರೆದುಕೊಂಡಿದ್ದಾರೆ. ಅವರ ಪೋಸ್ಟ್‌ ಬಗ್ಗೆ ಪರ ವಿರೋಧ ಚರ್ಚೆ ನಡೀತಿದೆ.

More from Filmibeat

English summary
Kantara Actor Kishore Reacts on Hijab Ban and Wrestlers protest. Actor post Goes viral. know more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X