Don't Miss!
- Sports
ಭಾರತ vs ನ್ಯೂಜಿಲೆಂಡ್: ನಿರ್ಣಾಯಕ ಟಿ20 ಪಂದ್ಯಕ್ಕೆ ಅಡ್ಡಿಯಾಗಲಿದೆಯಾ ಮಳೆ?
- News
7th Pay Commission; ವೇತನ ಶ್ರೇಣಿ, ಹೊಸ ವೇತನ ರಚನೆ ಮಾನದಂಡಗಳು
- Lifestyle
Horoscope Today 1 Feb 2023: ಬುಧವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Technology
ದೇಶಿಯ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ ವಿವೋ Y100; ಖರೀದಿಗೆ ಕ್ಯೂ ಖಚಿತ!
- Automobiles
ಭಾರತದಲ್ಲಿ ಹ್ಯುಂಡೈ i20 ಕಾರುಗಳ ಬೆಲೆ ಏರಿಕೆ
- Finance
Jio 5G services: ಇಂದಿನಿಂದ ಮತ್ತೆ 34 ನಗರಗಳಲ್ಲಿ ಪ್ರಾರಂಭ- ಮಧ್ಯ ಕರ್ನಾಟಕದ ಯಾವ ನಗರಕ್ಕೆ ಕೊಡುಗೆ? ಮಾಹಿತಿ ಪಡೆಯಿರಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
'ಕಾಂತಾರ' ಯಶಸ್ಸಿನ ಬಳಿಕ ತನ್ನ ಮುಂದಿನ ಚಿತ್ರ ಘೋಷಿಸಿದ ನಟಿ ಸಪ್ತಮಿ ಗೌಡ
ಕಾಂತಾರ ಸದ್ಯ ವಿಶ್ವದಾದ್ಯಂತ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ಕನ್ನಡದ ಪ್ಯಾನ್ ಇಂಡಿಯಾ ಚಿತ್ರ. ಮೊದಲಿಗೆ ಕನ್ನಡ ಭಾಷೆಯಲ್ಲಿ ಮಾತ್ರ ಬಿಡುಗಡೆಗೊಂಡು ಪ್ರೇಕ್ಷಕರಿಂದ ತೀವ್ರ ಪ್ರಶಂಸೆ ಪಡೆದುಕೊಂಡ ಕಾಂತಾರ ಪ್ಯಾನ್ ಇಂಡಿಯಾ ಚಿತ್ರವಾಗಿ ಬದಲಾಯಿತು. ಕನ್ನಡದಲ್ಲಿ ಬಿಡುಗಡೆಯಾಗಿ ಮೊದಲನೇ ದಿನ ಒಂದೂವರೆ ಕೋಟಿ ಗಳಿಕೆ ಮಾಡುವಲ್ಲಿ ಮಾತ್ರ ಯಶಸ್ವಿಯಾಗಿದ್ದ ಕಾಂತಾರ ಪ್ಯಾನ್ ಇಂಡಿಯಾ ಚಿತ್ರವಾದ ನಂತರ ಗಲ್ಲಾಪೆಟ್ಟಿಗೆ ಲೂಟಿ ಮಾಡಿ 400 ಕೋಟಿ ಕ್ಲಬ್ ಸೇರಿದೆ.
ಹೀಗೆ ಹದಿನಾರು ಕೋಟಿ ವೆಚ್ಚದಲ್ಲಿ ತಯಾರಾಗಿದ್ದ ಕಾಂತಾರ ಯಾರೂ ಊಹಿಸಿರದ ಫಲಿತಾಂಶ ಕೊಡುವುದರ ಜತೆಗೆ ಈ ಚಿತ್ರದಲ್ಲಿ ಅಭಿನಯಿಸಿದ್ದ ಹಲವರ ಸಿನಿ ಜರ್ನಿಯನ್ನೂ ಸಹ ಯಾರೂ ಊಹಿಸಿರದ ಮಟ್ಟಕ್ಕೆ ಬದಲಾಯಿಸಿಬಿಟ್ಟಿತು. ಅದರಲ್ಲಿಯೂ ವಿಶೇಷವಾಗಿ ಚಿತ್ರದ ನಾಯಕ ರಿಷಬ್ ಶೆಟ್ಟಿ ಮತ್ತು ನಾಯಕಿ ಸಪ್ತಮಿ ಗೌಡ ದೊಡ್ಡ ಮಟ್ಟದ ಸಕ್ಸಸ್ ಕಂಡರು.
ನಟಿ ಸಪ್ತಮಿ ಗೌಡ ಲುಕ್ ಹಾಗೂ ನಟನೆಗೆ ಮಾರುಹೋಗಿದ್ದ ಸಿನಿಮಾ ಮಂದಿ ಪೈಕಿ ಹಲವರು ನಟಿಯ ಕಾಲ್ ಶೀಟ್ ಪಡೆಯಲು ಪ್ರಯತ್ನ ಮಾಡಿದ್ದಂತೂ ಸತ್ಯ. ಇನ್ನು ಖಚಿತವಾಗಿ ಪರಭಾಷೆಗಳಿಂದಲೂ ಸಪ್ತಮಿ ಗೌಡರನ್ನು ಹರಸಿಬಂದಿರುತ್ತವೆ ಎಂಬುದನ್ನು ಊಹಿಸಿದ್ದ ಕನ್ನಡ ಚಿತ್ರ ಪ್ರೇಮಿಗಳು ನಟಿ ಯಾವ ಚಿತ್ರವನ್ನು ಆರಿಸಬಹುದು ಎಂಬ ಕುತೂಹಲದಲ್ಲಿದ್ದರು.
ಇನ್ನು ಕಾಂತಾರ ಯಶಸ್ಸಿನ ಬಳಿಕ ನಟಿ ಸಪ್ತಮಿ ಗೌಡ ಅಭಿಷೇಕ್ ಅಂಬರೀಶ್ ಅಭಿನಯದ ಹಾಗೂ ಪೈಲ್ವಾನ್ ಕೃಷ್ಣ ನಿರ್ದೇಶನದ ಕಾಳಿ ಚಿತ್ರದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ದೊಡ್ಡ ಮಟ್ಟದಲ್ಲಿ ಹರಿದಾಡಿತ್ತು. ಆ ಸುದ್ದಿಯೇ ಇದೀಗ ನಿಜವಾಗಿದ್ದು, ಸಪ್ತಮಿ ಈ ಚಿತ್ರದಲ್ಲಿ ನಟಿಸುತ್ತಿರುವ ವಿಚಾರವನ್ನು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.
ನಟಿ ಸಪ್ತಮಿ ಗೌಡ ಇದಕ್ಕೂ ಮುನ್ನ ಡಾಲಿ ಧನಂಜಯ್ ಅಭಿನಯದ ಪಾಪ್ ಕಾರ್ನ್ ಮಂಕಿ ಟೈಗರ್ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದರು.