Don't Miss!
- News ಮಳೆ.. ಮಳೆ.. ಗುಡುಗು ಸಹಿತ ಭರ್ಜರಿ ಮಳೆಗೆ ತತ್ತರಿಸಿದ ಕರ್ನಾಟಕ!
- Automobiles ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಉತ್ತಮ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓಡ
- Finance Bengaluru Traffic Police: ಬೆಂಗಳೂರಿನ ಈ ರಸ್ತೆ ಸಂಚಾರ ಮಾರ್ಗ ಬದಲಾವಣೆ, ವಿವರ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕಂಠಿ' ಸಿನಿಮಾ ನಿರ್ದೇಶಕ ಎಸ್.ಭರತ್ ಹಠಾತ್ ಸಾವು
ಕಂಠಿ, ಸಾಹೇಬ ಸಿನಿಮಾಗಳನ್ನು ನಿರ್ದೇಶಿಸಿದ್ದ ಪ್ರತಿಭಾವಂತ ನಿರ್ದೇಶಕ ಎಸ್.ಭರತ್ ಹಠಾತ್ತನೆ ಸಾವಿಗೀಡಾಗಿದ್ದಾರೆ.
45 ವರ್ಷದ ಭರತ್ ಆರೋಗ್ಯ ಸಮಸ್ಯೆಯಿಂದಾಗಿ ಚಾಮರಾಜನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ ಕೊರೊನಾ ವೈರಸ್ನಿಂದಾಗಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ಶ್ರೀಮುರಳಿ, ರಮ್ಯಾ ನಟಿಸಿದ್ದ ಕಂಠಿ ಸಿನಿಮಾವನ್ನು ನಿರ್ದೇಶಿಸಿದ್ದ ಭರತ್ ಆ ನಂತರ ಬಹು ವರ್ಷಗಳ ಬಿಡುವಿನ ಬಳಿಕ 2017 ರಲ್ಲಿ ಸಾಹೇಬ ಸಿನಿಮಾ ನಿರ್ದೇಶಿಸಿದ್ದರು. ಸಿನಿಮಾ ಒಂದನ್ನೇ ವೃತ್ತಿ ಮಾಡಿಕೊಂಡಿದ್ದ ಭರತ್, ಹೊಸ ಸಿನಿಮಾದ ತಯಾರಿಯಲ್ಲಿದ್ದಾಗಲೇ ವಿಧಿವಶರಾಗಿದ್ದಾರೆ.
Recommended Video
ಭರತ್ ಗೆ ಮದುವೆಯಾಗಿದ್ದು ಹನ್ನೆರಡು ವರ್ಷದ ಮುದ್ದಾದ ಹೆಣ್ಣುಮಗುವಿದೆ. ರಾಮನಗರ ಚಿಕ್ಕಮುಳುವಾಡಿ ಗ್ರಾಮದವರಾಗಿದ್ದ ಭರತ್ ಹಲವು ವರ್ಷಗಳಿಂದ ಬೆಂಗಳೂರಿನ ವಿಜಯನಗರ ಅತ್ತಿಗುಪ್ಪೆ ಯಲ್ಲಿ ನೆಲೆಸಿದ್ದರು. ಕೊರೊನಾ ದಿಂದ ಮೃತರಾದವರ ಅಂತಿಮ ಸಂಸ್ಕಾರ ಮಾಡಲು ನಿಗದಿಪಡಿಸಲಾಗಿರುವ ಕೆಂಗೇರಿಯ ಬಿಜೆಎಸ್ ಆಸ್ಪತ್ರೆಯ ಬಳಿ ಭರತ್ ಅವರ ಅಂತಿಮ ಸಂಸ್ಕಾರ ನಡೆಯಲಿದೆ.