Don't Miss!
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- News ಬೆಂಗಳೂರಿನಲ್ಲಿ ಮೋದಿ ಮತಬೇಟೆ; ರಾಜ್ಯಕ್ಕೆ ಪ್ರಧಾನಿ ಮೋದಿಯ ಕೊಡುಗೆ ಏನಿದೆ?: ಡಾ.ಜಿ ಪರಮೇಶ್ವರ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕಂಠಿ' ಸಿನಿಮಾ ನಿರ್ದೇಶಕ ಎಸ್.ಭರತ್ ಹಠಾತ್ ಸಾವು
ಕಂಠಿ, ಸಾಹೇಬ ಸಿನಿಮಾಗಳನ್ನು ನಿರ್ದೇಶಿಸಿದ್ದ ಪ್ರತಿಭಾವಂತ ನಿರ್ದೇಶಕ ಎಸ್.ಭರತ್ ಹಠಾತ್ತನೆ ಸಾವಿಗೀಡಾಗಿದ್ದಾರೆ.
45 ವರ್ಷದ ಭರತ್ ಆರೋಗ್ಯ ಸಮಸ್ಯೆಯಿಂದಾಗಿ ಚಾಮರಾಜನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ ಕೊರೊನಾ ವೈರಸ್ನಿಂದಾಗಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ಶ್ರೀಮುರಳಿ, ರಮ್ಯಾ ನಟಿಸಿದ್ದ ಕಂಠಿ ಸಿನಿಮಾವನ್ನು ನಿರ್ದೇಶಿಸಿದ್ದ ಭರತ್ ಆ ನಂತರ ಬಹು ವರ್ಷಗಳ ಬಿಡುವಿನ ಬಳಿಕ 2017 ರಲ್ಲಿ ಸಾಹೇಬ ಸಿನಿಮಾ ನಿರ್ದೇಶಿಸಿದ್ದರು. ಸಿನಿಮಾ ಒಂದನ್ನೇ ವೃತ್ತಿ ಮಾಡಿಕೊಂಡಿದ್ದ ಭರತ್, ಹೊಸ ಸಿನಿಮಾದ ತಯಾರಿಯಲ್ಲಿದ್ದಾಗಲೇ ವಿಧಿವಶರಾಗಿದ್ದಾರೆ.
Recommended Video
ಭರತ್ ಗೆ ಮದುವೆಯಾಗಿದ್ದು ಹನ್ನೆರಡು ವರ್ಷದ ಮುದ್ದಾದ ಹೆಣ್ಣುಮಗುವಿದೆ. ರಾಮನಗರ ಚಿಕ್ಕಮುಳುವಾಡಿ ಗ್ರಾಮದವರಾಗಿದ್ದ ಭರತ್ ಹಲವು ವರ್ಷಗಳಿಂದ ಬೆಂಗಳೂರಿನ ವಿಜಯನಗರ ಅತ್ತಿಗುಪ್ಪೆ ಯಲ್ಲಿ ನೆಲೆಸಿದ್ದರು. ಕೊರೊನಾ ದಿಂದ ಮೃತರಾದವರ ಅಂತಿಮ ಸಂಸ್ಕಾರ ಮಾಡಲು ನಿಗದಿಪಡಿಸಲಾಗಿರುವ ಕೆಂಗೇರಿಯ ಬಿಜೆಎಸ್ ಆಸ್ಪತ್ರೆಯ ಬಳಿ ಭರತ್ ಅವರ ಅಂತಿಮ ಸಂಸ್ಕಾರ ನಡೆಯಲಿದೆ.