Don't Miss!
- News PSI Re-Exam: ಪಿಎಸ್ಐ ಮರುಪರೀಕ್ಷೆ ಅಂತಿಮ ಅಂಕಪಟ್ಟಿ ಪ್ರಕಟ: CET ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಮ್ಯಾ ಕನ್ನಡಿಗರ ಕ್ಷಮೆಯಾಚಿಸಲು ಕರವೇ ಆಗ್ರಹ
ಈ ಬಗ್ಗೆ ಎಲ್ಲೆಡೆಯಿಂದ ಅಸಮಾಧಾನ ವ್ಯಕ್ತವಾಗುತ್ತಿದೆ. ರಮ್ಯಾ ಅವರು ತಮ್ಮ ತಮಿಳು ಭಾಷಣವನ್ನು ಸಮರ್ಥಿಸಿಕೊಂಡಿರುವುದು ಇನ್ನಷ್ಟು ಗೊಂದಲಕ್ಕೆ ಕಾರಣ ಮಾಡಿಕೊಟ್ಟಿದೆ. ರಮ್ಯಾ ಅವರು ಕನ್ನಡಿಗರ ಕ್ಷಮೆಯಾಚಿಸಬೇಕೆಂದು ಕರವೇ ಒತ್ತಾಯಿಸಿದೆ.
ಕನ್ನಡಿಗರು ಅವರ ಚಿತ್ರಗಳನ್ನು ನೋಡುವ ಮೂಲಕ ಅವರನ್ನು ಹೆಸರಾಂತ ನಟಿಯನ್ನಾಗಿ ಮಾಡಿದ್ದಾರೆ. ಇದನ್ನು ಅವರು ಅರ್ಥ ಮಾಡಿಕೊಳ್ಳಬೇಕು. ತಮಿಳಿನಲ್ಲಿ ಪ್ರಚಾರ ಮಾಡಿರುವುದನ್ನು ರಮ್ಯಾ ಸಮರ್ಥಿಸಿಕೊಳ್ಳುವುದು ಸರಿಯಲ್ಲ ಎಂದಿದೆ ಕರವೇ.
ರಮ್ಯಾ ಅವರು ಕೂಡಲೇ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಅವರ ಅಭಿನಯದ ಸಿನಿಮಾಗಳು ರಾಜ್ಯದಲ್ಲಿ ತೆರೆಕಾಣಲು ಬಿಡುವುದಿಲ್ಲ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ಎಚ್ಚರಿಸಿದ್ದಾರೆ.
ರಾಜಕೀಯ ಪಕ್ಷಗಳು ಸಂಪೂರ್ಣವಾಗಿ ಕನ್ನಡದಲ್ಲಿ ಪ್ರಚಾರ ಮಾಡದೆ ಕನ್ನಡೇತರ ಭಾಷೆ ಬಳಕೆ ಮಾಡುತ್ತಿವೆ. ಅಂತಹ ಪಕ್ಷಗಳಿಗೆ ಕನ್ನಡಿಗರು ತಕ್ಕ ಪಾಠ ಕಲಿಸಬೇಕಾಗಿದೆ ಎಂದು ನಾರಾಯಣ ಗೌಡ ಈ ಸಂದರ್ಭದಲ್ಲಿ ಹೇಳಿದರು.
ಇತ್ತೀಚೆಗೆ ತೆಲುಗು ನಟ ಚಿರಂಜೀವಿ ಅವರು ಕಾಂಗ್ರೆಸ್ ಪಕ್ಷದ ಪ್ರಚಾರದ ವೇಳೆ ತೆಲುಗಿನಲ್ಲಿ ಭಾಷಣ ಬಿಗಿದಿದ್ದನ್ನು ಕರವೇ ಖಂಡಿಸಿದೆ. ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸದಿದ್ದರೆ ತಾವು ಕರ್ನಾಟಕಕ್ಕೆ ಅಡಿಯಿಡುವುದಿಲ್ಲ ಎಂದು ಅವರು ತೆಲುಗಿನಲ್ಲಿ ಹೇಳಿ ಕನ್ನಡಿಗರ ಸ್ವಾಭಿಮಾನಕ್ಕೆ ಬೆಂಕಿ ಇಟ್ಟಿದ್ದಾರೆ ಎಂದು ನಾರಾಯಯಣ ಗೌಡ ಕಿಡಿ ಕಾರಿದ್ದಾರೆ. (ಏಜೆನ್ಸೀಸ್)