Don't Miss!
- News ವಿರಾಟ್ ಕೊಹ್ಲಿ ಬಳಿ ಬಂದ ಅಭಿಮಾನಿಯನ್ನು ಕಾಲಲ್ಲಿ ತುಳಿದ ಸೆಕ್ಯೂರಿಟಿ ಸಿಬ್ಬಂದಿ-ರೂಪೇಶ್ ರಾಜಣ್ಣ ಹೇಳಿದ್ದೇನು?
- Automobiles ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಸ್ತೆ ಅಪಘಾತದಲ್ಲಿ 'ಕರಿಯ' ಸಿನಿಮಾದ ನಿರ್ಮಾಪಕ ಅನೇಕಲ್ ಬಾಲರಾಜ್ ನಿಧನ!
ಭಾನುವಾರ ( ಮೇ 15) ಬೆಳ್ಳಂಬೆಳಗ್ಗೆ ಸ್ಯಾಂಡಲ್ವುಡ್ಗೆ ಶಾಕಿಂಗ್ ಸುದ್ದಿಯೊಂದು ಮುಟ್ಟಿದೆ. ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಕರಿಯಾ' ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ನಿರ್ಮಾಪಕರಾಗಿ ಎಂಟ್ರಿ ಕೊಟ್ಟಿದ್ದರು.
'ಕರಿಯ' ಸಿನಿಮಾ ಬಳಿಕ ಆನೇಕಲ್ ಬಾಲರಾಜ್ ಹಲವು ಸಿನಿಮಾಗಳನ್ನು ನಿರ್ಮಿಸಿದ್ದಾರೆ. ಕನ್ನಡ ಪ್ರಮುಖ ನಿರ್ಮಾಪಕರಲ್ಲಿ ಆನೇಕಲ್ ಬಾಲರಾಜ್ ಕೂಡ ಒಬ್ಬರಾಗಿದ್ದರು. ಇತ್ತೀಚೆಗೆ ತಮ್ಮ ಪುತ್ರನ ಸಿನಿಮಾಗಳನ್ನೇ ಹೆಚ್ಚು ನಿರ್ಮಾಣ ಮಾಡಿದ್ದಾರೆ.
ಬೆಂಗಳೂರಿನ ಜೆಪಿ ನಗರದಲ್ಲಿ ಅಪಘಾತ
ಇಂದು (ಮೇ 15) ಜೆಪಿ ನಗರದಲ್ಲಿ ಬೆಳಗ್ಗೆ ಆನೇಕಲ್ ಬಾಲರಾಜ್ ವಾಕಿಂಗ್ ಹೋಗಿದ್ದರು. ವಾಕ್ ಮಾಡುವಾಗ, ಆನೇಕಲ್ ಬಾಲರಾಜ್ ಅವರಿಗೆ ವಾಹನವೊಂದು ಡಿಕ್ಕಿ ಹೊಡೆದಿತ್ತು. ಪುಟ್ಪಾತ್ ತಲೆ ಹೊಡೆದು ಗಂಭೀರ ಗಾಯಗೊಂಡಿದ್ದರು ಎನ್ನಲಾಗುತ್ತಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ನಿರ್ಮಾಪಕ ಆನೇಕಲ್ ಬಾಲರಾಜ್ ಕೊನೆಯುಸಿರೆಳೆದಿದ್ದಾರೆ.
ಹಲವು ಸಿನಿಮಾ ನಿರ್ಮಾಣಗಳ ಮೂಲಕ ಸಿನಿಮಾರಂಗ ಚಿರಪರಿಚಿತರಾಗಿದ್ದ ಆನೇಕಲ್ ಬಾಲರಾಜ್ ಅವರಿಗೆ 58 ವರ್ಷ ವಯಸ್ಸಾಗಿತ್ತು. ದಿಢೀರನೇ ಇಂತಹದ್ದೊ ಶೋಕದ ಸುದ್ದಿ ಸ್ಯಾಂಡಲ್ವುಡ್ಗೆ ಆಘಾತವನ್ನುಂಟು ಮಾಡಿದೆ. ತಂದೆಯ ಅನಿರೀಕ್ಷಿತ ಸಾವು ನಟ ಸಂತೋಷ್ ಮತ್ತು ಅವರ ಕುಟುಂಬಕ್ಕೂ ಆಘಾತವಾಗಿದೆ. ಆನೇಕಲ್ ಬಾಲರಾಜ್ ಅವರ ಅಪಘಾತದ ಪ್ರಕರಣ ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಆನೇಕಲ್ ಬಾಲರಾಜ್ ನಿರ್ಮಾಣದ ಸಿನಿಮಾಗಳು
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 'ಕರಿಯ', ಪುತ್ರ ಸಂತೋಷ್ ಅಭಿನಯದ 'ಕರಿಯ 2', 'ಗಣಪ', 'ಬರ್ಕ್ಲಿ' ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಪುತ್ರ ಸಂತೋಷ್ರನ್ನು ಸಿನಿಮಾ ನಟನನ್ನಾಗಿ ಮಾಡಲು ಸಾಕಷ್ಟು ಶ್ರಮಿಸಿದ್ದರು. ಇತ್ತೀಚೆಗೆ ಪುತ್ರನಿಗಾಗಿಯೇ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದ್ದರು.