Don't Miss!
- News Bank Holidays in April: ಏಪ್ರಿಲ್ನಲ್ಲಿ 14 ದಿನಗಳ ಕಾಲ ಬ್ಯಾಂಕ್ ರಜೆ, ಪಟ್ಟಿ ಇಲ್ಲಿದೆ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಿವೈಸಿಂಗ್ ಕಮಿಟಿ ಬಾಗಿಲು ತಟ್ಟಿದ 'ಅಯೋಧ್ಯಪುರ'
ಅಯೋಧ್ಯೆ ಎಂದ ಮೇಲೆ ಎಲ್ಲರ ಹುಬ್ಬೇರುವುದು ಗ್ಯಾರಂಟಿ. ಈ ಕನ್ನಡ ಚಿತ್ರದಲ್ಲಿ ನಿರ್ಮಾಪಕ ಮಧುಸೂದನ್ ಹಾಗೂ ತಂಡ ಹಿಂದೂ ಹುಡುಗ ಹಾಗೂ ಮುಸ್ಲಿಂ ಹುಡುಗಿಯ ಅಂತಾರ್ಜಾತೀಯ ವಿವಾಹವನ್ನು ಕೇಂದ್ರವಾಗಿಟ್ಟುಕೊಂಡೇ ಕಥೆ ಹೆಣೆದಿದ್ದಾರೆ. ಚಿತ್ರದ ಹೆಸರು 'ಕರ್ನಾಟಕ ಅಯೋಧ್ಯೆಪುರಂ'.
ಇತ್ತೀಚೆಗೆ ಈ ಚಿತ್ರ ಪ್ರಾದೇಶಿಕ ಸೆನ್ಸಾರ್ ಮಂಡಳಿ ಮುಂದೆ ಬಂದಿತ್ತು. ಚಿತ್ರಕ್ಕೆ ಎ ಸರ್ಟಿಫಿಕೇಟ್ ನೀಡಲು ಹಾಗೂ ಕೆಲವು ಕಡೆ ಕತ್ತರಿ ಹಾಕಲು ಸೆನ್ಸಾರ್ ಮಂಡಳಿ ಸೂಚಿಸಿದೆ. ಈ ಬದಲಾವಣೆಗಳನ್ನು ಒಪ್ಪದ ಚಿತ್ರದ ನಿರ್ದೇಶಕ ವಿ.ಲವ ಹಾಗೂ ನಿರ್ಮಾಪಕರು ರಿವೈಸಿಂಗ್ ಕಮಿಟಿ ಮೆಟ್ಟಿಲೇರಲು ನಿರ್ಧರಿಸಿದ್ದಾರೆ.
ಹಿಂದೂ ಹುಡುಗನಾಗಿ ರಾಕೇಶ್ ಹಾಗೂ ಮುಸ್ಲಿಂ ಹುಡುಗಿಯ ಪಾತ್ರದಲ್ಲಿ ನಯನಾ ಅಭಿನಯಿಸುತ್ತಿರುವ ಈ ಚಿತ್ರ ಅಂತಿಮ ಹಂತದ ಚಿತ್ರೀಕರಣವನ್ನು ಈ ತಿಂಗಳ 15ರಿಂದ ಪ್ರಾರಂಭಿಸಲಿದೆ. ಐದು ಹಾಡು ಹಾಗೂ 2 ಸಾಹಸ ಸನ್ನಿವೇಶವನ್ನು ಈ ಹಂತದಲ್ಲಿ ಚಿತ್ರೀಕರಣ ಮಾಡುವುದಾಗಿ ನಿರ್ದೇಶಕ ವಿ.ಲವಾ ತಿಳಿಸಿದ್ದಾರೆ.
ಸಾಗರ್ ನಾಗಭೂಷಣ್ ಅವರ ಸಂಗೀತ, ನಾಗರಾಜ್ ಅವರ ಛಾಯಾಗ್ರಹಣ, ಅಲ್ಟಿಮೇಟ್ ಶಿವು ಅವರ ಸಾಹಸ ಸಂಯೋಜನೆ ಈ ಚಿತ್ರಕ್ಕಿದೆ. ತಾರಾಗಣದಲ್ಲಿ ಅಚ್ಯುತ ರಾವ್, ಸ್ವಸ್ತಿಕ್ ಶಂಕರ್, ಬುಲೆಟ್ ಪ್ರಕಾಶ್, ಮೋಹನ್ ಜುನೇಜಾ, ಅಕ್ಷಯ್, ಉದಯ ಟಿ.ವಿ. ಕಾಮಿಡಿ ಹರೀಶ್ ಹಾಗೂ ಇನ್ನಿತರರು ಇದ್ದಾರೆ. (ಒನ್ಇಂಡಿಯಾ ಕನ್ನಡ)